ಆಳಂದ: ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕೆಂದರೆ ಶಿಕ್ಷಣವನ್ನು ಪಡೆದ ಮಾತ್ರ ಸಮಾಜದಲ್ಲಿ ಗೌರವ ದೊರಕುತ್ತದೆ ಎಂದು ಪೋಲಿಸ್ ಇಲಾಖೆಯ ಸಿಬ್ಬಂದಿ ಕಲ್ಯಾಣ ಯಳಸಂಗಿ ಕರೆ ಮಕ್ಕಳಿಗೆ ಕರೆ ನೀಡಿದರು.
ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ‘ಕಲಬುರಗಿ ಪ್ರಭ’ ದಿನಪತ್ರಿಕೆಯ ವತಿಯಿಂದ ಸಾಮಾಜಿಕ ಹೋರಾಟಗಾರರು ಹಾಗೂ ಭೀಮ ವಿಜಯ ಪತ್ರಿಕೆಯ ಉಪ ಸಂಪಾದಕರಾದ ಭವ್ಯ ನಾಗರಾಜ ರವರ ಜನ್ಮ ದಿನಾಚರಣೆ ನಿಮಿತ್ಯ ಮಕ್ಕಳಿಗೆ ನೋಟಬುಕ್ ಹಾಗೂ ಪೆನ್ ವಿತರಣಾ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದವರು, ವಿದ್ಯಾರ್ಥಿಗಳು ದಿನನಿತ್ಯ ವಿದ್ಯಾಭ್ಯಾಸ ಮಾಡಿ ತಂದೆ, ತಾಯಿಗಳಿಗೆ ಹಾಗೂ ಕಲಿಸಿದ ಗುರುಗಳಿಗೆ ಹೆಸರನ್ನು ತಂದು ಕೂಡಬೇಕು ಅಂದಾಗ ಮಾತ್ರ ನಿಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಜೀವನದಲ್ಲಿ ಗುರಿ ಇರಬೇಕು ಹಿಂದೆ ಗುರುಗಳು ಇರಬೇಕು ಅಂದಾಗ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇವತ್ತು ವಿಜಯಕುಮಾರ ಜಿಡಗಿ ಅವರು ಭವ್ಯ ನಾಗರಾಜ ಮೇಡಂ ರವರ ಮಾರ್ಗದರ್ಶನ ಪಡೆದು ಸಮಾಜದಲ್ಲಿನ ಮೌಡ್ಯಚಾರಣೆ, ಭ್ರಷ್ಟಾಚಾರದ ವಿರುದ್ಧ ಧ್ವನಿಯಾಗುವಂತ ಪತ್ರಿಕಾ ಮಾದ್ಯಮಕ್ಕೆ ಬಂದಿದ್ದಾರೆ. ಹಾಗೆ ನೀವು ಕೂಡ ಸಮಾಜದಲ್ಲಿ ಉತ್ತಮ ಬದುಕು ರೂಪಿಸಿಕೊಂಡು ಒಳ್ಳೆಯ ನಾಗರಿಕರಾಗಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ.ಅಂಬೇಡ್ಕರ್ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅಕ್ಕಾಮಹಾದೇವಿ ಶರಣ ಮಾತನಾಡಿದವರು. ಪ್ರಸ್ತುತ ಸಂದರ್ಭಗಳಲ್ಲಿ ಜನ್ಮ ದಿನಾಚರಣೆಯು ತುಂಬಾ ಆಡಂಬರದ ರೀತಿಯಲ್ಲಿ ಆಚರಿಸುವದನ್ನು ನೋಡುತ್ತಿದೇವೆ ಆದರೆ ಇವತ್ತು ‘ಕಲಬುರಗಿ ಪ್ರಭ’ ಪತ್ರಿಕೆ ಭವ್ಯ ನಾಗರಾಜ ಜನ್ಮದಿನಾಚರಣೆಯು ಮಕ್ಕಳಿಗೆ ಉಪಯೋಗವಾಗುವ ನೋಟಬುಕ್ ಹಾಗೂ ಪೆನ್ ಗಳನ್ನು ನೀಡುವ ಮೂಲಕ ಅರ್ಥಪೂರ್ಣ ಜನ್ಮ ದಿನಾಚರಣೆ ಮಾಡುತ್ತಿರುವದು ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಇರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ. ಇಂದಿನ ಮಕ್ಕಳೆ ಮುಂದಿನ ದೇಶದ ಸಂಪತ್ತು ಅವರಿಗೆ ಪ್ರೋತ್ಸಾಹಿಸಿ ಬೆಳೆಸುವಂತ ಸಾಮಾಜಿಕ ಕಾರ್ಯಗಳು ಹೆಚ್ಚೆಚ್ಚು ಆಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ದುಂಡಪ್ಪ ಜಮಾದಾರ, ಯಲ್ಲಾಲಿಂಗ ಪೂಜಾರಿ, ಶಾಂತೇಶ್ವರ ಬಿಲ್ಕರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆಯ ಸಿಬ್ಬಂದಿ ಲಕ್ಷ್ಮೀಪುತ್ರ ಗೌಂಡಿ, ಗ್ರಾ.ಪಂ. ಸದಸ್ಯೆ ಶ್ರೀಮತಿ ಸುರೇಖಾ ಸೂರ್ಯಕಾಂತ ಜಿಡಗಿ, ಆಶಾಕಾರ್ಯಕರ್ತೆ ಚಂದ್ರಭಾಗಮ್ಮ ಮಂಗನಕರ್, ಶಿಕ್ಷಕರಾದ ಪರಮೇಶ್ವರ್ ಕೂಲಾಲಿ, ಅಶೋಕ ಜಮಾದಾರ್, ಸಂಗಮ್ಮ ಪುಕ್ಕನ್, ಪ್ರಭಾವತಿ, ಸುನೀತಾ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಾಸ್ತಾವಿಕವಾಗಿ ವಿಜಯಕುಮಾರ ಜಿಡಗಿ ಮಾತನಾಡಿದರು. ನಿರೂಪಣೆ ಶರಣಬಸಪ್ಪಾ ನಿರ್ಮಲ್ಕರ್, ಸ್ವಾಗತ ಶ್ರೀಕಾಂತ ಗಾಯಕವಾಡ ಹಾಗೂ ವಂದನಾರ್ಪಣೆ ದ್ರಾವಿಡ ನ್ಯಾಮನ್ ನೆರವೇರಿಸಿದರು.
ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…
ಕಲಬುರಗಿ: ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್…
ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…
ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…