ಕಲಬುರಗಿ: ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಪ್ರಭು ದೊರೆ

0
158

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಭು ದೊರೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.

ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಸಮಸ್ಯೆಗಳಿಗೆ ಕಿವಿಯಾಗಿದ ಅವರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿಲಯ ಪಾಲಕರ ನಿಯೋಜನೆಯನ್ನು ರದ್ದುಪಡಿಸಿ, ಬೇರೆ ನಿಲಯ ಪಾಲಕರನ್ನು ನಿಯೋಜನೆ ಮಾಡುವ ಮೂಲಕ ಪರಿಹಾರ ಒದಗಿಸಿ ವಿದ್ಯಾರ್ಥಿಗಳಿಗೆ ಧ್ವನಿಯಾದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಶೋಧನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರವಿ, ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟ ಅಧ್ಯಕ್ಷ ಶಿವು ಸೇರಿದಂತೆ ಹಲವು ವಿದ್ಯಾರ್ಥಿಗಳು ಸಿಬ್ಬಂದಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here