ಕಲ್ಯಾಣ ಕರ್ನಾಟಕ ಪ್ರಶಸ್ತಿಗೆ ಸುಭಾಷ್ ಬಣಗಾರ, ನಾಗಪ್ಪ ಮಾಲಿಪಾಟೀಲ್ ಶಿವ ಸಂಪದ ಆಯ್ಕೆ

0
131

ಸೇಡಂ: ಇಲ್ಲಿಯ ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನ ವತಿಯಿಂದ 2024 ನೇ ಸಾಲಿನ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಇಬ್ಬರು ಪತ್ರಕರ್ತರಾದ ಸುಭಾಷ್ ಬಣಗಾರ, ಯಾದಗಿರಿಯ ನಾಗಪ್ಪ ಮಾಲಿಪಾಟೀಲ್ ಹಾಗೂ ಶಿವ ಸಂಪದ ಪ್ರಶಸ್ತಿಗೆ ಶಿಕ್ಷಣ ತಜ್ಞ ಪ್ರೊ. ಚೆನ್ನಾರೆಡ್ಡಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಮಹಿಪಾಲ್ ರೆಡ್ಡಿ ಮುನ್ನೂರು ತಿಳಿಸಿದ್ದಾರೆ.

ದಿ. ವೀರಭದ್ರ ಮಾಮನಿ ಸ್ಮರಣಾರ್ಥ ಇಬ್ಬರು ಪತ್ರಕರ್ತರಿಗೆ ಹಾಗೂ ಶಿವಯ್ಯ ಮಠಪತಿ ಸ್ಮರಣಾರ್ಥ ಒಬ್ಬರು ಶಿಕ್ಷಣ ತಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಪ್ರಾಂಗಣದಲ್ಲಿ ಜುಲೈ 23 ರಂದು ಬೆಳಿಗ್ಗೆ 10.30 ಕ್ಕೆ ಸಮಾರಂಭ ಆಯೋಜಿಸಲಾಗಿದೆ.

Contact Your\'s Advertisement; 9902492681

ಬೊಮ್ನಳ್ಳಿ ಸುದ್ದಿ ಸಂಪಾದಕ ನಾಗಯ್ಯ ಸ್ವಾಮಿ ಸ್ಥಾಪಿಸಿದ್ದ ಪ್ರತಿಷ್ಠಾನದ ಮೂಲಕ ಕಳೆದ 12 ವರ್ಷಗಳಿಂದ ಸಮಾರಂಭ ಮಾಡಲಾಗುತ್ತಿದೆ ಎಂದು ಮಹಿಪಾಲರೆಡ್ಡಿ ಮುನ್ನೂರ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here