ಸೇಡಂ: ಇಲ್ಲಿಯ ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನ ವತಿಯಿಂದ 2024 ನೇ ಸಾಲಿನ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಇಬ್ಬರು ಪತ್ರಕರ್ತರಾದ ಸುಭಾಷ್ ಬಣಗಾರ, ಯಾದಗಿರಿಯ ನಾಗಪ್ಪ ಮಾಲಿಪಾಟೀಲ್ ಹಾಗೂ ಶಿವ ಸಂಪದ ಪ್ರಶಸ್ತಿಗೆ ಶಿಕ್ಷಣ ತಜ್ಞ ಪ್ರೊ. ಚೆನ್ನಾರೆಡ್ಡಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಮಹಿಪಾಲ್ ರೆಡ್ಡಿ ಮುನ್ನೂರು ತಿಳಿಸಿದ್ದಾರೆ.
ದಿ. ವೀರಭದ್ರ ಮಾಮನಿ ಸ್ಮರಣಾರ್ಥ ಇಬ್ಬರು ಪತ್ರಕರ್ತರಿಗೆ ಹಾಗೂ ಶಿವಯ್ಯ ಮಠಪತಿ ಸ್ಮರಣಾರ್ಥ ಒಬ್ಬರು ಶಿಕ್ಷಣ ತಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಪ್ರಾಂಗಣದಲ್ಲಿ ಜುಲೈ 23 ರಂದು ಬೆಳಿಗ್ಗೆ 10.30 ಕ್ಕೆ ಸಮಾರಂಭ ಆಯೋಜಿಸಲಾಗಿದೆ.
ಬೊಮ್ನಳ್ಳಿ ಸುದ್ದಿ ಸಂಪಾದಕ ನಾಗಯ್ಯ ಸ್ವಾಮಿ ಸ್ಥಾಪಿಸಿದ್ದ ಪ್ರತಿಷ್ಠಾನದ ಮೂಲಕ ಕಳೆದ 12 ವರ್ಷಗಳಿಂದ ಸಮಾರಂಭ ಮಾಡಲಾಗುತ್ತಿದೆ ಎಂದು ಮಹಿಪಾಲರೆಡ್ಡಿ ಮುನ್ನೂರ ತಿಳಿಸಿದ್ದಾರೆ.
ಕಲಬುರಗಿ: ನಗರದ ಜಗತ್ ಬಡಾವಣೆಯಲ್ಲಿರುವ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಆವರಣದಲ್ಲಿ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಜೀರ್ಣೋದ್ದಾರದ ಉದ್ಘಾಟನೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಉದ್ಯಮಶೀಲತಾಭಿವೃದ್ದಿ ತರಬೇತಿ…
ಕಲಬುರಗಿ: ಮಹಾನಗರ ದಿನೇ ದಿನೇ ಬೆಳೆಯುತ್ತಿದ್ದು ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ ಗಣನೀಯ ಅಭಿವೃದ್ದಿ ಹೊಂದುತ್ತಿದೆ. ಹಾಗಾಗಿ, ಬಹುಮಹಡಿ ಕಟ್ಟಡಗಳ…
ಕಲಬುರಗಿ: ಶ್ರಾವಣ ಮಾಸ ಪ್ರಕೃತಿ ಮೂಲಕ ಕಣ್ಣಿಗೆ ಹಬ್ಬ ಮನಸ್ಸಿಗೂ ನೆಮ್ಮದಿ ನೀಡಲು ಸಂಗೀತ ಬೇಕು ಅಂತಹ ಸಂಗೀತ ರಸದೌತಣ…
ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ಅಂಗವಾಗಿ ಮಕ್ತಂಪುರದ…
ಮಹತ್ವಕಾಂಕ್ಷೆ ತಾಲೂಕಿನಲ್ಲಿ ಉತ್ತಮ ಪ್ರಗತಿ ಹಿನ್ನೆಲೆ ಕಲಬುರಗಿ: ಶಿಕ್ಷಣ, ಆರೋಗ್ಯ, ಕೌಶಲ್ಯ, ಮಹಿಳಾ ಮತ್ತು ಮಕ್ಕಳ, ಕೃಷಿ ಸೇರಿದಂತೆ ಜನರ…