ಕಲಬುರಗಿ: ನಗರದಲ್ಲಿ ಡೆಂಗ್ಯೂ ಕುರಿತು ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು, ಕಲಬುರಗಿ ಡೆಂಗ್ಯೂ ವಿರೋಧ ಮಾಸಾಚರಣೆ ೨೦೨೪ ಪ್ರತಿ ” ಶುಕ್ರವಾರ” ಡೆಂಗ್ಯೂ ನಿಯಂತ್ರಣ ಅಭಿಯಾನ ಈಡಿಸ್ ಲಾರ್ವಾ ಸಮೀಕ್ಷೆ ಮತ್ತು ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡುವ ದಿನಾ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಶುಕ್ರವಾರದಂದು ನಗರದ ಬಸ್ ಡಿಪೋ ನಂ. ೩ ಎದುರಗಡೆ ಡಾ.ಬಿ.ಆರ್. ಅಂಬೇಡ್ಕರ ಸಮುದಾಯ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಬಳಿಕ ಪ್ರತಿಯೊಂದು ಮನೆ ಮನೆಗಳಿಗೆ ಭೇಟಿ ನೀಡಿ ಬ್ಯಾರಲ್‌ನಲ್ಲಿರುವ ನೀರುಗಳನ್ನು ಪರಿಶೀಲಿಸಿದರು. ನೀರುಗಳನ್ನು ತೊಟ್ಟೆಯಲ್ಲಿ ಅಥವಾ ಬ್ಯಾರಲ್ ಇಡುವುದರಿಂದ ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ ಇದು ಮನುಷ್ಯನಿಗೆ ಕಚ್ಚಿ ಡೆಂಗ್ಯೂಜ್ವರ ಬರುತ್ತವೆ. ಇದರಿಂದ ಸಾರ್ವಜನಿಕರು ಒಬ್ಬರಿಗೊಬ್ಬರ ಸಹಕರಿಸಬೇಕು. ಸಾರ್ವಜನಿಕರು ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಆಗಬೇಕು. ಮತ್ತು ಸಾರ್ವಜನಿಕರು ತಾವುಗಳು ಒಬ್ಬರಿಗೊಬ್ಬರಿಗೂ ಸಹಕರಿಸಿ ಡೆಂಗ್ಯೂ ರೋಗ ನಿಯಂತ್ರಣ ಇಡಬಹುದು ಎಂದರು.

ಸುತ್ತಮುತ್ತಲ್ಲಿ ನಾಲಿಗಳು ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಮನೆ ಸುತ್ತಮುತ್ತ ಅಂಗಳ ವಾತಾವಾರಣ ಸ್ವಚ್ಫತೆ ಕಾಪಾಡಿಕೊಳ್ಳಬೇಕು. ಡ್ರಮ್ ಬ್ಯಾರಲ್‌ಗಳಲ್ಲಿ ನೀರು ಶೇಖರಣೆಯಾದ್ದಾಗ ಪ್ರತಿ ಒಂದ ವಾರಕ್ಕೆ ಒಂದು ಸಲ ಅದನ್ನು ತೊಳೆದು ಸ್ವಚತೆ ಮಾಡಿ ನೀರು ತುಂಬಬೇಕು. ಈ ರೋಗ ಸ್ವಚ್ಫತೆ ನೀರಿನಿಂದ ಹರಡುತ್ತದೆ. ಸೊಳ್ಳೆಗಳು ಕಚ್ಚಲಾರದಂತೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ನಿಂತ ನೀರಿನಲ್ಲಿ ಚಿಟಿಆಯ್/ಟೆಮಿಫಾಸ ಆಯಿಲ್ ಹಾಕಬೇಕು ಎಂದರು.

ಮನೆಯ ಹೆಣ್ಣು ಮಕ್ಕಳೊಂದಿಗೆ ಜಿಲ್ಲಾಧಿಕಾರಿಗಳು ಅವರು ಕುಂದು ಕೊರತೆಗಳು ಆಲಿಸಿದರು ಅವರಿಗೆ ನೀರಿನಿಂದ ಹರಡು ರೋಗದ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಡಿ.ಹೆಚ್.ಓ. ಡಾ. ರತಿಕಾಂತ ಸ್ವಾಮಿ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯುಂತ್ರಣಾಧಿಕಾರಿ ಡಾ. ಬಸವರಾಜ ಗೂಳಗಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಮಾರುತಿ ಕಾಂಬಳೆ, ನಗರ ಆರೋಗ್ಯಾಧಿಕಾರಿ. ಡಾ.ಬಾಬುರಾವ ಚವ್ಹಾಣ, ಡಾ. ವೀಣಾ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ, ಹಿರಿಯ ಪ್ರಾಯೋಗ ಶಾಲೆ ತಾಂತ್ರಜ್ಞೆ ಅಧಿಕಾರಿ ಚಂದ್ರಕಾಂತ ಏರಿ ಸೇರಿದಂತೆ ಶಾಂತಾ ಕಾಶಪ್ಪ, ಗುಲಾಮ್ಮ್ ಹಾಗೂ ಸಾರ್ವಜನಿಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

7 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

7 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

7 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

8 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

8 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420