ಬಡ ರೋಗಿಗಳಿಗೆ ಹಣ್ಣು ಹಂಪಲ ವೃದ್ರಾಶ್ರಮದಲ್ಲಿ ತಾಯಂದಿರಿಗೆ ಸೀರೆ ವಿತರಣೆ

0
25

ಕಲಬುರಗಿ: ಜಿಲ್ಲಾ ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ ಅವರ ಜನ್ಮದಿನದ ನಿಮಿತ್ತ ಅವರ ಅಭಿಮಾನಿ ಬಳಗ ಹಾಗೂ ಜಿಲ್ಲಾ ವೀರಶೈವ ಸಮಾಜದ ವತಿಯಿಂದ ನಗರದ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಹಾಗೂ ನೆಮ್ಮದಿ ವೃದ್ರಾಶ್ರಮದಲ್ಲಿ ತಾಯಂದಿರಿಗೆ ಸೀರೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಹಾಗೂ ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ್ ಮುಖಂಡರಾದ, ಶ್ರೀಶೈಲ್ ಗೂಳಿ, ಜಗನ್ನಾಥ್ ಪಟ್ಟಣಶೆಟ್ಟಿ, ಶರಣು ಖಾನಾಪುರ, ಮಲ್ಲು ನಿಂಬಾಳ, ಬಾಲರಾಜ, ಪ್ರಭು, ಶಾಂತು, ಗುರು ಸೇರಿದಂತೆ ಸಮಾಜದ ಮುಖಂಡರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here