ಜು.22ರಂದು ರೈತ ಸಂಘದಿಂದ ವಿಧಾನಸೌಧಕ್ಕೆ ಮುತ್ತಿಗೆ ; ಪ್ರಶಾಂತಗೌಡ ಆರ್. ಮಾಲಿಪಾಟೀಲ

ಕಲಬುರಗಿ : ಇದೇ ತಿಂಗಳು ಜುಲೈ 22 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇ- ರಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಶಾಂತಗೌಡ ಆರ್. ಮಾಲಿಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಕೃಷಿ ಹೊಂಡ ಡ್ರಿಪ್ ಪೈಪ್ ಲೈನ್ ಮತ್ತು ರೈತರು ಉಪಯೋಗಿಸುವ ಕೃಷಿ ಸಲಕರಣೆಗಳ ಸಬ್ಸಿಡಿ ದರವನ್ನು ಪರಿಷ್ಕರಣೆ ಮಾಡಬೇಕು ರಾಜ್ಯ ಸರಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡು ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಬೆಂಗಳೂ- ರಿನ ಶಾಪಿಂಗ್ ಜೆ.ಟಿ ಮಾಲ್‍ನಲ್ಲಿ ರೈತನಿಗೆ ಅವಮಾನಿಸಿದ್ದು, ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುವುದು.

ರೈತರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು ರೈತರ ಪಂಪ್ ಸೆಟ್ಟುಗಳಿಗೆ ಉಚಿತ ಪರಿಕರಗಳನ್ನು ಎತ್ತರಿಸಬೇಕು ರಾಜ್ಯದ ಮೂರು ನೀರಾವರಿ ಯೋಜನೆಗಳಾದ ಮಹದಾಯಿ, ಬೆಣ್ಣೆ ಹಳ್ಳ, ಮೇಕೆದಾಟು ಯೋಜನೆ ಜಾ- ರಿಗೆ ಒತ್ತಾಯಿಸಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಜಿಲ್ಲೆಯ ರೈತರು ನಮ್ಮೊಂದಿಗೆ ಕೈಜೋಡಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟವನ್ನು ಬೆಂಬಲಿಸಿ ಯಶಸ್ವಿಗೊಳಿಸುವಂತೆ ಮಾಲಿಪಾಟೀಲ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

emedialine

Recent Posts

ಕೂಲಿ ಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯ

ಹಂಪಿ: ಕೂಲಿ ಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡು ಹೊಸ ಅಧ್ಯಯ ಸೃಷ್ಟಿಸಿದ್ದಾರೆ. ಕಡು ಬಡತನದ ಕುಟುಂಬದಲ್ಲಿ…

5 hours ago

ಚಿಂಚೋಳಿ ಮೇಟ್ರಿಕ್ ಆಗ್ರೋ ಪವರ್ ಲಿಮಿಟೆಡ್ ಕಾರ್ಖಾನೆ ವಿರುದ್ಧ ಪ್ರತಿಭಟನೆ

ಚಿಂಚೋಳಿ: ಕಂಪನಿಯ ಮತ್ತು ಕಾರ್ಮಿಕ ಕಾಯ್ದೆಗಳನ್ನು ನಿರಂತರವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಇಲ್ಲಿನ ಮೇಟ್ರಿಕ್ ಆಗ್ರೋ ಪವರ್ ಲಿಮಿಟೆಡ್…

5 hours ago

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ ನಡೆಸಲು ಸಿಎಂ‌ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ…

5 hours ago

ಕಲಬುರಗಿ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರಣು ಕ್ಯಾತ್ನಳ್ಳಗೆ ಸನ್ಮಾನ

ಕಲಬುರಗಿ: ನೂತನವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಪದೋನ್ನತಿ ಹೊಂದಿದ ಡಾ.ಶರಣು ಕ್ಯಾತ್ನಳ್ಳ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.…

6 hours ago

3 ದಿನದಲ್ಲಿ ಹೊಲಗಳಿಗೆ ಭೇಟಿ ನೀಡಿ ಕ್ಷೇತ್ರ ತಪಾಸಣೆ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ: ಇತ್ತೇಚೆಗೆ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಹೆಸರು, ಉದ್ದು, ಸೋಯಾ ಅವರೆ ಹಾಗೂ ತೊಗರಿ ಬೆಳೆಗಳು ಹಾನಿಯಾಗಿದ್ದು, ದೂರು…

6 hours ago

ಕಲಬುರಗಿ ಮಟ್ಟದ 24 ಶಿಕ್ಷಕರಿಗೆ ಉತ್ತಮ ಪ್ರಶಸ್ತಿ ಪ್ರದಾನ

ಕಲಬುರಗಿ: ಗ್ರಾಮೀಣ ಭಾಗದ ಮಕ್ಕಳು ಇಂದಿಗೂ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹೀಗಾಗಿ ಶಿಕ್ಷಕರು ಇಂತಹ ಮಕ್ಕಳ ಬಗ್ಗೆ ವಿಶೇಷ ಕಾಳಜಿ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420