ಹಟ್ಟಿ: ಪಟ್ಟಣದ 7ನೇ ವಾರ್ಡ್ ಗೆ ಶೌಚಾಲಯ, ಕುಡಿಯುವ ನೀರು, ಚರಂಡಿ, ರಸ್ತೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳಿಂದ ನರಳುತ್ತಿದೆ. ಜನರಿಗೆ ಮೂಲಭೂತ ಸೌಕರ್ಯ ನೀಡದೇ ಹಟ್ಟಿಯನ್ನು ಚಿನ್ನದ ನಾಡು ಬದಲಾಗಿ ಸ್ಲಂ ನಾಡಾಗಿ ಪರಿವರ್ತಿಸುತ್ತಿದೆ. ಕೂಡಲೇ ವಾರ್ಡ್ ಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಭಾರತ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್ಐ), ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಟ್ಟಿ ಜಂಟಿ ಸಂಘಟನೆಗಳು ಹಟ್ಟಿ ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಜಗನಾಥ ದೇಸಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಕೂಡಲೇ ಈ ವಾರ್ಡಗೆ ಅಗತ್ಯ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಪಟ್ಟಣ ಪಂಚಾಯ್ತಿ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಜಂಟಿ ಸಂಘಟನೆಗಳು ಎಚ್ಚರಿಸಿವೆ.
ಕೂಡಲೇ 7ನೇ ವಾರ್ಡಿನಲ್ಲಿ ಮಹಿಳೆಯರಿಗೆ ಐಟೆಕ್ ಶೌಚಾಲಯ ನಿರ್ಮಿಸಬೇಕು. ವಾರ್ಡನಲ್ಲಿ ಬೋರ್ ವೆಲ್ ಕೊರೆದು ನಿತ್ಯದ ನೀರಿನ ಸಮಸ್ಯೆ ಇತ್ಯರ್ಥ ಮಾಡಬೇಕು. ಪ್ರತೀ 3 ದಿನಗಳಿಗೊಮ್ಮೇಯಾದರೂ ಕುಡಿಯು ವ ನೀರು ಬಿಡಬೇಕು. ವಾರ್ಡನಲ್ಲಿ ಎಲ್ಲಿಯಂದರಲ್ಲಿ ಕಸ ಹಾಕುತಿದ್ದು, ಸಮರ್ಪಕ ಕಸವಿಲೇವಾರಿ ಮಾಡಬೇಕು. ಹಟ್ಟಿ ಪಟ್ಟಣದ ಸುತ್ತಮುತ್ತಲಿನ ವಿವಿಧ ಹಳ್ಳಗಳಲ್ಲಿ ಪಟ್ಟಣ ಪಂಚಾಯ್ತಿಯೇ ಕಸ ಹಾಕಿ ಗಲೀಜು ಮಾಡುತ್ತಿದ್ದು, ಕೂಡಲೇ ಅದನ್ನು ನಿಲ್ಲಿಸಿ ಹಳ್ಳದಲ್ಲಿ ಉತ್ತಮ ವಾತಾವರಣ ಕಾಪಾಡಬೇಕು.
ಶಾಂತಿನಗರದ ಹತ್ತಿರ ದೋಬಿಘಾಟ್ ನಿರ್ಮಿಸಿ ಅಲ್ಲಿ ಪ್ರತ್ಯೇಕ ನೀರಿನ ವ್ಯವಸ್ಥೆ ಮಾಡಬೇಕು. ಹಳ್ಳದ ಪಕ್ಕದಲ್ಲಿ ಬೆಳೆದ ಜಾಲಿ ಕಟ್ ಮಾಡಬೇಕು. ವಿದ್ಯುತ್ ಕಂಬಗಳಿಗೆ ಸರಿಯಾಗಿ ಬಲ್ಪ್ ಗಳನ್ನು ಹಾಕಬೇಕು. ಮತ್ತು ಪಟ್ಟಣದ ಮುಖ್ಯ ರಸ್ತೆಯ ವಿದ್ಯುತ್ ಲೈಟ್ ಗಳ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ವಿನಯಕುಮಾರ್, ಜೆಎಂಎಸ್ ತಾಲೂಕು ಮುಖಂಡರಾದ ದ್ಯಾವಮ್ಮ, ಹಟ್ಟಿ ಘಟಕದ ಅಧ್ಯಕ್ಷೆ ಅಂಬಮ್ಮ ದೀನಸಮುದ್ರ, ಬಾಬಾಂಬಿ, ಕಾರ್ಯದರ್ಶಿ ಶರಣಮ್ಮ, ಖಜಾಂಚಿ ಶರಣಮ್ಮ ಜಾಡಲದಿನ್ನಿ, ಡಿವೈಎಫ್ಐ 7ನೇ ವಾರ್ಡ್ ಸಹ ಕಾರ್ಯದರ್ಶಿ ವೀರೇಶ್, ರಸೂಲ್, ಅಮರೇಗೌಡ ವೀರಾಪೂರು, ಸಿಐಟಿಯು ಗೌರವಾಧ್ಯಕ್ಷ ಅಮರೇಶ್ ಗುರಿಕಾರ, ಫಕ್ರುದ್ದೀನ್, ವೆಂಕಟೇಶ್ ಗೋರಕಲ್, ನಿಂಗಪ್ಪ ಎಂ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…