ಬ್ಯಾಕ್ ಲಾಗ್ ಹುದ್ದೆ ಕೂಡಲೇ ಭರ್ತಿ ಮಾಡುವಂತೆ ಎಸ್ ಸಿ, ಎಸ್ ಟಿ ನಿರುದ್ಯೋಗಿಗಳಿಂದ ಮನವಿ

ಕಂಪ್ಲಿ: ಕರ್ನಾಟಕ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಬಳ್ಳಾರಿ ಜಿಲ್ಲಾ ಎಸ್ ಸಿ ಎಸ್ ಟಿ ನಿರುದ್ಯೋಗಿಗಳ ಸಂಘದಿಂದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು!

ಮನವಿ ಸಲ್ಲಿಸಿದ ನಂತರ ಮಾತನಾಡಿದ ಬಳ್ಳಾರಿ ಜಿಲ್ಲಾ ಎಸ್ ಸಿ ಎಸ್ ಟಿ ನಿರುದ್ಯೋಗಿಗಳ ಸಂಘದ ಜಿಲ್ಲಾಧ್ಯಕ್ಷರಾದ ಬಾಪಯ್ಯನವರ ವೆಂಕಟೇಶ್ ರವರು ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬದೇ ಇರುವುದರಿಂದ ದಲಿತ ಸಮುದಾಯದ ಅಭ್ಯರ್ಥಿಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದು ನಿಗದಿತ ವಯಸ್ಸು ಮೀರುತ್ತಿರುವ ಆತಂಕದಲ್ಲಿದ್ದು ಸರ್ಕಾರ ಕೂಡಲೇ ನಾನಾ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದರು,

ಮನವಿ ಸ್ವೀಕರಿಸಿದ ಕೆ ಎಸ್ ಪಿ ಸಿ ಎ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ತಮ್ಮ ಮನವಿ ಪತ್ರಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು

ಈ ಸಂದರ್ಭದಲ್ಲಿ ಸುಗಾಲಿ ವೆಂಕಟೇಶ್ ನಾಯ್ಕ, ಎಸ್. ಗಿರಿಮಲ್ಲಪ್ಪ, ತಿಮ್ಮಯ್ಯ, ಬಿ ಮಂಜುನಾಥ್, ಪಿಟಿ ವೀರಮಲ್ಲಪ್ಪ, ಎನ್ ದೇವಣ್ಣ, ಕೆ. ತಿಪ್ಪಣ್ಣ, ಸಿ, ಲಿಂಗಪ್ಪ, ರಾಮಂಜಿನಿ,ರಾಮಚಂದ್ರ ಛಲವಾದಿ ಉಪಸ್ಥಿತಿಯಲ್ಲಿದ್ದರು

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

5 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

5 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

5 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

5 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

6 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420