ವಾಡಿ: ಪಟ್ಟಣದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ನೀರಿನ ಶುದ್ದೀಕರಣ ಘಟಕದಲ್ಲಿ ಮೋಟಾರ್ ಸುಟ್ಟು ಹೋಗಿರುತ್ತದೆ. ಇದರಿಂದ ಇಂದು ಮತ್ತು ನಾಳೆ ಎರಡು ದಿನಗಳವರೆಗೆ ಕುಡಿಯುವ ನೀರು ಸರಬರಾಜು ಆಗುವುದಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಸಿ.ಫಕೃದ್ದೀನ್. ಸಾಬ್ ತಿಳಿಸಿದ್ದಾರೆ.
ಪಟ್ಟಣ ಸಮೀಪದ ಕುಂದನೂರು ಗ್ರಾಮದಲ್ಲಿರುವ ನೀರಿನ ಶುದ್ದೀಕರಣ ಘಟಕದಲ್ಲಿ ಮೊದಲು ಒಂದು ಮೋಟಾರ್ ಸುಟ್ಟಿದೆ. ಅದನ್ನು ಈಗಾಗಲೇ ದುರಸ್ತಿಗೆ ನೀಡಲಾಗಿದೆ. ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನೀರಿನ ಘಟಕ್ಕೆ ಭೇಟಿ ನೀಡಿ ಮೋಟಾರ್ ಪರಿಶೀಲನೆ ಮಾಡಿದಾಗ ಇನ್ನೊಂದು ಮೋಟಾರ್ ಕೂಡ ಸುಟ್ಟಿದೆ ಎಂದು ತಿಳಿಸಿದ್ದಾರೆ.
ಎರಡು ಮೋಟಾರ್ ದುರಸ್ತಿ ಮಾಡಿ. ಜು.26 ರಂದು ಬೆಳಿಗ್ಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಅಲ್ಲಿಯವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…