ಸರ್ಕಾರಿ ಜಮೀನು ಸಂರಕ್ಷಣೆಗೆ “ಲ್ಯಾಂಡ್ ಬೀಟ್” ಜಾರಿ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು “ಲ್ಯಾಂಡ್ ಬೀಟ್” ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಕಂದಾಯ ಇಲಾಖೆಯಡಿ ಬರುವ ಗೈರಾಣ, ಗೋಮಾಳ ಸೇರಿದಂತೆ 1.4 ಮಿಲಿಯನ್ ಸರ್ಕಾರಿ ಆಸ್ತಿಗಳ ಭೌಗೋಳಿಕ ಗಡಿ ಮತ್ತು ಸರ್ವೇ ನಂಬರ್ ಒಳಗೊಂಡ ಮಾಹಿತಿಯ ಡಿಜಿಟಲ್ ದಾಖಲೆಗಳನ್ನು ಈ ತಂತ್ರಾಂಶ ಹೊಂದಲಿದೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ 31,972 ಸರ್ಕಾರಿ ಆಸ್ತಿಗಳಿದ್ದು, ಇದರಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಈಗಾಗಲೆ ಕ್ಷೇತ್ರ ತಪಾಸಣೆ ಮಾಡಿ 29,954 ಸರ್ಕಾರಿ ಭೂಮಿ ಗುರುತಿಸಿದ್ದಾರೆ. ಜಿಲ್ಲೆಯಲ್ಲಿ ಶೇ.93.69ರಷ್ಟು ಪ್ರಗತಿ ಸಾಧಿಸಿದೆ. ಇದರಿಂದ ಸರ್ಕಾರಿ ಜಮೀನು ಸಂರಕ್ಷಣೆ ಜೊತೆಗೆ ಸರ್ಕಾರಿ ಯೋಜನೆಗಳಡಿ ಕಟ್ಟಡಗಳ ನಿರ್ಮಾಣ, ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಸರ್ಕಾರಿ ಜಮೀನು ಲಭ್ಯತೆಯ ಮಾಹಿತಿ ಅಂಗೈಯಲ್ಲಿ ದೊರೆಯಲಿದೆ ಎಂದರು.

ಲ್ಯಾಂಡ್ ಬೀಟ್ ಕಾರ್ಯಕ್ರಮದ ಮೂಲಕ ಚಿತ್ತಾಪುರ ತಾಲೂಕಿನಲ್ಲಿ 4,874, ಕಮಲಾಪುರ 2,759, ಚಿಂಚೋಳಿ 3,290, ಕಲಬುರಗಿ 2,840, ಶಹಾಬಾದ 1,074, ಕಾಳಗಿ 3,351, ಸೇಡಂ 2,801, ಆಳಂದ 3,150, ಅಫಜಲಪೂರ 3,640, ಜೇವರ್ಗಿ 3,075 ಹಾಗೂ ಯಡ್ರಾಮಿ ತಾಲೂಕಿನ 1,118 ಸರ್ಕಾರಿ ಜಮೀನುಗಳಿಗೆ ವಿ.ಎ. ಅವರು ಭೇಟಿ ನೀಡಿದ್ದಾರೆ ಎಂದು ಡಿ.ಸಿ. ಅಂಕಿ ಸಂಖ್ಯೆ ವಿವರಿಸಿದರು.

ಕೇವಲ ಒಮ್ಮೆ ಜಮೀನಿಗೆ ಭೇಟಿ ನೀಡಿ ಮಾಹಿತಿ ಅಪ್ಲೋಡ್ ಮಾಡುವುದಿಲ್ಲ. ಬದಲಾಗಿ 3 ತಿಂಗಳಿಗೊಮ್ಮೆ ಗ್ರಾಮ ಆಡಳಿತಾಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಜಮೀನಿನ ಗಡಿ ಸುತ್ತ ಟ್ರಾನ್ಸಿಟ್ ವಾಕ್ ಮೂಲಕ ಜಿ.ಪಿ.ಎಸ್. ಆಧಾರಿತ ಜಮೀನಿನ ಚಿತ್ರ ಸೆರೆ ಹಿಡಿದು ತಂತ್ರಾಂಶದಲ್ಲಿ ಮಾಹಿತಿ ದಾಖಲು ಮಾಡಲಿದ್ದಾರೆ. ಇದರಿಂದ ಅತಿಕ್ರಮಣ, ಒತ್ತುವರಿ ಅಂಶ ಮಾಹಿತಿ ದೊರೆಯಲಿದ್ದು, ಕೂಡಲೆ ಕ್ರಮ ಕೈಗೊಳ್ಳಲು ಸಹ ಇದು ಅನುಕೂಲವಾಗಲಿದೆ ಎಂದು ಡಿ.ಸಿ. ಲ್ಯಾಂಡ್ ಬೀಟ್ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.

*ಆಗಸ್ಟ್ 1 ರಿಂದ ಡಿಜಿಟಲ್ ದಾಖಲೀಕರಣ ಕಾರ್ಯಕ್ಕೆ ಚಾಲನೆ:*

ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ಕಂದಾಯ ಸೇವೆ ನೀಡಲು ಇಲಾಖೆಯು ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಿದ್ದು, ಚಿಂಚೋಳಿಯಲ್ಲಿ ಪ್ರಾಯೋಗಿಕವಾಗಿ ಕಂದಾಯ ಇಲಾಖೆಯ ಅಭಿಲೇಖಾಲಯದಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ದಾಖಲೀಕರಣ ಮಾಡುವ ಪ್ರಕ್ರಿಯೆ ಶೇ.99ರಷ್ಟು ಮುಗಿದಿದೆ. ಸುಮಾರು 15 ಲಕ್ಷ ಹಾಳೆಗಳನ್ನು ಸ್ಕ್ಯಾನ್ ಮಾಡಿಸಿ ಸಂಗ್ರಹಿಸಿಡಲಾಗಿದೆ. ಮುಂದುವರೆದು ಜಿಲ್ಲೆಯ ಇತರೆ ತಾಲೂಕಿನಲ್ಲಿಯೂ ಸಹ ಡಿಜಿಟಲ್ ದಾಖಲೀಕರಣ ಕಾರ್ಯಕ್ಕೆ ಆಗಸ್ಟ್ 1 ರಂದು ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.

emedialine

Recent Posts

ಶಹಾಬಾದ ಕಾರ್ಖಾನೆಗಳನ್ನು ಪ್ರಾರಂಭಿಸಲು ಹಿರೇಮಠ ಒತ್ತಾಯ

ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…

28 mins ago

MRW/VRW/URW ಕಾರ್ಯಕರ್ತರ ಅನಿರ್ಧಿಷ್ಟಾವಧಿ ಧರಣಿ ದಲಿತ ಸೇನೆ ಬೆಂಬಲ

ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…

32 mins ago

ಸಚಿವ ಸಂಪುಟದಲ್ಲಿ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…

35 mins ago

20 ಕೋಟಿಗೂ ಮೀರಿ ಹಣ ದುರುಪಯೋಗ ಬ್ರಷ್ಟಾಚಾರದ ಬಗ್ಗೆ ಶೀಘ್ರದಲ್ಲಿ ಕ್ರಮ ವಹಿಸಬೇಕು

ಕಲಬುರಗಿ: ಪ್ರೀಯಾಂಕ ಖರ್ಗೆ ಚಿತ್ತಾಪೂರ ಮತಕ್ಷೇತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇವರ ಕ್ಷೇತ್ರದ ಬಿ.ಇ.ಓ ಕವೇರಿಯಲ್ಲಿ 20 ಕೋಟಿ…

36 mins ago

ಏಕ ಬಳಕೆಯ ಪ್ಲಾಸ್ಟಿಕ ನಿಷೇಧದ ಪ್ಲಾಗಾಥಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ದಶಮಾನೋತ್ಸವದ ಅಂಗವಾಗಿ ಪ್ಲಾಸ್ಟಿಕ ಮುಕ್ತ ಅಭಿಯಾನವನ್ನು ನಗರದಲ್ಲಿ ಮಹಾನಗರ ಪಾಲಿಕೆ ಹಾಗೂ ಕೆಕೆಆರ್‍ಡಿಬಿವತಿಯಿಂದ ಯುನೈಟೆಡ್ ಆಸ್ಪತ್ರೆ…

43 mins ago

ಬಸವ ಸಮಿತಿ ಸಂಸ್ಥಾಪಕರ ದಿನಾಚರಣೆ

ಕಲಬುರಗಿ; ಡಾ. ಬಿ.ಡಿ.ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಕಲಬುರಗಿ ಬಸವ ಸಮಿತಿ ಈ ಸಂಸ್ಥೆಯು ಸಾಹಿತ್ಯ, ಸಂಶೋಧನೆ, ಸಮಾಜಿಕ…

47 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420