ಗುಲಬರ್ಗಾ ಸಿಮೆಂಟ್ ಲಿಮಿಟೆಡ್ ಕಂಪನಿ ವತಿಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕಲಬುರಗಿ: ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹತ್ತಿರ ಗುಲಬರ್ಗಾ ಸಿಮೆಂಟ್ ಲಿಮಿಟೆಡ್ ಕಂಪನಿ ವತಿಯಿಂದ ಶುಕ್ರವಾರ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗುಲಬರ್ಗಾ ಸಿಮೆಂಟ್ ಲಿಮಿಟೆಡ್ ಕಂಪನಿ ವತಿಯಿಂದ ನೂತನ ನಿರ್ಮಿಸಲಾದ ಬಸ್ ನಿಲ್ದಾಣ, ಶಾಲಾ ಕಂಪೌಂಡ್, ಆರ್ಚ, ಕೊಳವೆ ಬಾವಿ, ಆರ್ ಓ ಪ್ಲಾಂಟ್ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಹೊನ್ನಕಿರಣಗಿ ಗ್ರಾಪಂ ಅಧ್ಯಕ್ಷ ಮಲ್ಲಿನಾಥ ಭೂಸಾ ಅವರು ಸಸಿಗೆ ನೀರು ಹಾಕಿ ಉದ್ಘಾಟಿಸಿದರು.

ಸಮಾರಂಭದಲ್ಲಿ ಗ್ರಾದ ವಿವಿಧ ಶಾಲೆಗಳಿಗೆ ಕುರ್ಚಿಗಳು ಹಾಗೂ ಮೇಜು ಟೇಬಲ್ ಮಕ್ಕಳಿಗಾಗಿ ಊಟದ ತಟ್ಟೆ, ಗ್ಲಾಸ್ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಗುಲಬರ್ಗಾ ಸಿಮೆಂಟ್ ಲಿಮಿಟೆಡ್ ಕಂಪನಿ ವತಿಯಿಂದ ವಿತರಣೆ ಮಾಡಲಾಯಿತು.
ಕಲಬುರಗಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಅವರು ಮಾತನಾಡುತ್ತಾ ಕಂಪನಿಯವರು ಗ್ರಾಮದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು ಗ್ರಾಮಸ್ಥರಿಗೆ ತುಂಬಾ ಅನುಕಲವಾಗಲದೆ ಎಂದರು.

ಕಂಪನಿಯ ಮುಖ್ಯಸ್ಥ ಸುನೀಲಕುಮಾರ ಅವರು ಅಧ್ಯಕ್ಷತೆವಹಿಸಿ ಮಾತನಾಡುತ್ತಾ ಗ್ರಾಮದ ಅಭಿವೃದ್ದಿ ನಮ್ಮ ಕರ್ತವ್ಯವಾಗಿದೆ. ಮುಬರುವ ದಿನಗಳಲ್ಲಿ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಮಾರಣಭದಲ್ಲಿ ಜಿಲ್ಲಾ ಇಂಡಸ್ಟ್ರೀಯಲ್ ಸೆಂಟರ್ ಜಂಟಿನರ್ದೇಶಕ ಸತೀಶ . ಗುಲಬರ್ಗಾ ಸಿಮೆಂಟ್ ಲಿಮಿಟೆಡ್ ಕಂಪನಿ ಪ್ರೊಜೆಕ್ಟ್ ಡೈರೆಕ್ಟರ್ ಆರ್ ಕೆ ನಾಗೇಶ, ಜನರಲ್ ಮ್ಯಾನೇಜರ್ ಪಿ ಶ್ರೀನಿವಾಸ್, ದಿನೇಶ ಭೊಹರಾ, ಕವಿತಾ ಕಾಗೆ ಮೋನ್ನಮ್ಮ ಭಜಂತ್ರಿ ಮುಖಮಡರಾದ ವಿಶ್ವನಾಥ ಹಿರೇಮಠ, ನಿಂಗರಾಜ್ ಕೋಣಿನ್, ಶಿವಪ್ಪ, ಮಲ್ಲಿನಾಥ ಯಲ್ಲಪ್ಪ, ಹಯ್ಯಾಳಿ ಪೂಜಾರಿ ರಹೀಮ್ ಶಹಾಬಾದ ಅಶೋಕ ಕಂತೆ ಗೋಳ ಶಾಲೆಯ ಸಿಬ್ಬಂದಿವರ್ಗದವರು ಮಕ್ಕಳು ಗ್ರಾಮದವರು ಮುಂತಾದವರು ಉಪಸ್ಥಿತರಿದ್ದರು.

ಕು ಸಿಂಧೂ ಮತ್ತು ಸಂಗಿಡಿಗರು ಪ್ರಾರ್ಥನಾಗೀತೆ ಹಾಡಿದರು ಬಾಬು ದಸರಾಗೋಳ ಸ್ವಾಗತಿಸಿದರು. ಆರ್ ಕೆನಾಗೇಶ ಪ್ರಾಸ್ತಾವಿಕ ಮಾತನಾಡಿದರು.

ಸರಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಕ ರಘುನಾಥ ಮಸರಬೊ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

emedialine

Recent Posts

ಮಾಜಿ ಸಚಿವ ಎಸ್.ಕೆ ಕಾಂತ ಅವರ ಆರೋಗ್ಯ ವಿಚಾರಿಸಿದ ಸಿಎಂ

ಕಲಬುರಗಿ: 19ನೇ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

7 mins ago

ಶಹಾಬಾದ ತಾಲ್ಲೂಕಿನದ್ಯಂತ ನಾಳೆ ರಜೆ; ತಹಶೀಲ್ದಾರ್

ಶಹಾಬಾದ: ಸಪ್ಟೆಂಬರ್ 17ರಂದು ತಾಲೂಕಿನ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ…

10 mins ago

ಶಹಾಬಾದ ಕಾರ್ಖಾನೆಗಳನ್ನು ಪ್ರಾರಂಭಿಸಲು ಹಿರೇಮಠ ಒತ್ತಾಯ

ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…

39 mins ago

MRW/VRW/URW ಕಾರ್ಯಕರ್ತರ ಅನಿರ್ಧಿಷ್ಟಾವಧಿ ಧರಣಿ ದಲಿತ ಸೇನೆ ಬೆಂಬಲ

ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…

43 mins ago

ಸಚಿವ ಸಂಪುಟದಲ್ಲಿ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…

46 mins ago

20 ಕೋಟಿಗೂ ಮೀರಿ ಹಣ ದುರುಪಯೋಗ ಬ್ರಷ್ಟಾಚಾರದ ಬಗ್ಗೆ ಶೀಘ್ರದಲ್ಲಿ ಕ್ರಮ ವಹಿಸಬೇಕು

ಕಲಬುರಗಿ: ಪ್ರೀಯಾಂಕ ಖರ್ಗೆ ಚಿತ್ತಾಪೂರ ಮತಕ್ಷೇತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇವರ ಕ್ಷೇತ್ರದ ಬಿ.ಇ.ಓ ಕವೇರಿಯಲ್ಲಿ 20 ಕೋಟಿ…

47 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420