ಪತ್ರಕರ್ತರ ಏಳಿಗೆಗಾಗಿ ಕೆಲಸ ಮಾಡಲು ಎಲ್ಲರು ಸಹಕರಿಸಿ

ಸುರಪುರ: ತಾಲೂಕಿನಲ್ಲಿಯ ಪತ್ರಕರ್ತರ ಏಳಿಗೆಗಾಗಿ ಕೆಲಸ ಮಾಡಲು ಹಿರಿಯ ಪತ್ರಕರ್ತರ ಮಾರ್ಗದರ್ಶನದ ಜೊತೆಗೆ ಎಲ್ಲರು ಸಹಕಾರ ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಶ್ರೀಕರ ಭಟ್ ಜೋಷಿ ಮಾತನಾಡಿದರು.

ಸಂಘದ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ನೂತನ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ,ಎಲ್ಲ ಹಿರಿಯ ಸಂಘದ ಕಾರ್ಯಚಟುವಟಿಕೆಗಳಿಗಾಗಿ ಮಾರ್ಗದರ್ಶನ ಮಾಡಿ,ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಅಲ್ಲದೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಕಗೊಳಿಸಿದ ಜಿಲ್ಲಾಧ್ಯಕ್ಷರಾದಿಯಾಗಿ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳಿಗು ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಗೌರವಾಧ್ಯಕ್ಷ ಗಿರೀಶ ಶಾಬಾದಿ ಮಾತನಾಡಿ,ಇಂದು ಶ್ರೀಕರ ಭಟ್ ಜೋಷಿಯವರು ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತೋಷದ ಸಂಗತಿ,ಮುಂದಿನ ದಿನಗಳಲ್ಲಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಧೀರೇಂದ್ರ ಕುಲಕರ್ಣಿ,ಮಲ್ಲು ಗುಳಗಿ,ನಾಗರಾಜ ನ್ಯಾಮತಿ,ರಾಜು ಕುಂಬಾರ,ಹೊನ್ನಪ್ಪ ತೇಲ್ಕರ್,ಮಹಾದೇವಪ್ಪ ಬೊಮ್ಮನಹಳ್ಳಿ,ಕಲೀಂ ಫರೀದಿ,ಪರಶುರಾಮ ಮಲ್ಲಿಬಾವಿ,ಮನಮೋಹನ ದೇವಾಪುರ,ಶ್ರೀಮಂತ ಚಲುವಾದಿ, ಮಲ್ಲು ಬಾದ್ಯಾಪುರ ಮಾತನಾಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ಪುರಷೋತ್ತಮ ನಾಯಕ ದೇವತ್ಕಲ್, ಥಾಮಸ್ ಮ್ಯಾಥ್ಯೂ,ಉಸ್ಮಾನ ಚಿತಾಪುರ ಭಾಗವಹಿಸಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಕ್ಷೀರಲಿಂಗಯ್ಯ ಬೋನ್ಹಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಕರ ಭಟ್ ಜೋಷಿ ನೇಮಕಗೊಂಡ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ,ಶಿಕ್ಷಣ ಸಂಯೋಜಕ ಶರಣಸಬವ ನುಚ್ಚಿ ಹಾಗೂ ಬಿಆರ್‍ಪಿ ಖಾದರಪಟೇಲ್ ಸನ್ಮಾನಿಸಿ ಗೌರವಿಸಿದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

5 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

5 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

5 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

5 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

6 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420