ಶಹಾಬಾದ; ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಸಭೆ

ಕಲಬುರಗಿ: ಶನಿವಾರದÀಂದು ನಗರದ ಶಮ್ಸ್ ಫಂಕ್ಷನ್ ಹಾಲ್‍ನಲ್ಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ 11ನೇ ವಾರ್ಷಿಕ ಸಾಮಾನ್ಯ ಸಭೆ ನಡೆಸಲಾಯಿತು.

ಸಭೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಸುರಕ್ಷಾ ಸೌಹಾರ್ದ ಸಂಘದ ಅಧ್ಯಕ್ಸರಾದ ಡಾ. ಅಹಮದ ಪಟೇಲ್ ರವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿ ವರ್ಷವೂ ಈ ರೀತಿಯ ಸಭೆಗಳು ನಡೆಯಬೇಕು. ಸದಸ್ಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಅತಿಥಿಗಳಾಗಿ ಆಗಮಿಸಿದ ಓಂ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ರಾಮಣ್ಣ ಎಸ್. ಇಬ್ರಾಹಿಂಪೂರ ರವರು ಮಾತನಾಡುತ್ತಾ, ಸಂಘದ ಉದ್ದೇಶವು ಸದಸ್ಯರನ್ನು ಆರ್ಥಿಕವಾಗಿ ಮೇಲೆತ್ತುವುದಾಗಿದೆ. ಎಲ್ಲಾ ಸದಸ್ಯರು ತಮ್ಮತಮ್ಮ ಅವಶ್ಯಕತೆಗಳಿಗೆ ತಕ್ಕಂತೆ ಸಾಲವನ್ನು ಪಡೆದು ತಮ್ಮ ಅವಶ್ಯಕತೆಗಳನ್ನು ಪೂರೈಸಿಕೊಂಡು ನಿಗದಿತ ಸಮಯದಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ನುಡಿದರು.

ಸಭೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ವಿಶ್ವನಾಥ ಟಿ. ಬೆಲ್ಲದ ರವರು ಮಾತನಾಡುತ್ತಾ, ಎಲ್ಲಾ ಸದಸ್ಯರ, ಹಾಗೂ ನಿರ್ದೇಶಕರ ಬೆಂಬಲ, ಸಹಕಾರದಿಂದ ನಾವು 11 ವರ್ಷಗಳನ್ನು ಪೂರೈಸಿದ್ದೇವೆ. ಸಿಬ್ಬಂದಿ ವರ್ಗದವರೂ ಸಹ ಬಹಳ ಆತ್ಮವಿಶ್ವಾಸದಿಂದ ದಿನನಿತ್ಯದ ಸಂಘದ ಕೆಲಸಗಳನ್ನು ಮಾಡುತ್ತಿದ್ದಾರೆ.

ಶಹಾಬಾದಿನಲ್ಲಿ ಇದು ಒಂದು ಮಾದರಿ ಸಹಕಾರಿ ಸಂಘವನ್ನಾಗಿ ಮಾಡಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ಸದಸ್ಯರು ಸಂಘದ ಕಾರ್ಯದ ಬಗ್ಗೆ, ಸದಸ್ಯರ ಹಕ್ಕು ಜವಾಬ್ದಾರಿಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಅವಶ್ಯವಾಗಿದೆ ಎಂದು ನುಡಿದರು.

ಇನ್ನೋರ್ವ ಅತಿಥಿಗಳಾದ ಶಿವಾಜಿ ಪವಾರ ಸಾಯಿ ಸೌಹಾರ್ದ ಪತ್ತಿನ ಸಂಘದ ಅಧ್ಯಕ್ಷರು ಹಾಗೂ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಬಾಬು ಬಿ. ಪವಾರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಿರ್ವಹಣೆಯನ್ನು ಸೌಹಾರ್ದ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ರಾಜೇಶ ಎಸ್. ಅಲ್ಲಿಪೂರ ರವರು ನಿರ್ವಹಿಸಿದರು. ಸಂಘದ ನಿರ್ದೇಶಕರಾದ ನೀಲಕಂಠ ಎಂ. ಹುಲಿ ರವರು ವಂದನಾರ್ಪಣೆಯನ್ನು ಸಲ್ಲಿಸಿದರು.

ನಂತರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ರಾಘವೇಂದ್ರ ಎಂ.ಜಿ. ರವರು 2023-24 ನೇ ಸಾಲಿನ ಅಢಾವೆ ಪತ್ರಿಕೆಯನ್ನು ಓದಿದರು. ಸಂಘದ ಒಟ್ಟು ವಹಿವಾಟು ಪ್ರಸಕ್ತ ಸಾಲಿನಲ್ಲಿ ಒಟ್ಟು 3.45 ಕೋಟಿ ರೂಪಾಯಿಯಾಗಿದೆ ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ ಸಂಘವು 1.49 ಲಕ್ಷ ರೂಪಾಯಿಗಳ ಲಾಭ ಗಳಿಸಿದೆ ಎಂದು ತಿಳಿಸಿದರು. ಸಭೆಯಲ್ಲಿ ನಿರ್ದೇಶಕರಾದ ಎಲ್ಲಪ್ಪ ಡಿ. ಬಾಂಬೆ, ದುರ್ಗಪ್ಪ ದೇವಕರ, ಶಂಕರ ಬಿ. ದಂಡಗುಲಕರ್, ನರಸಪ್ಪ ಕೆ. ಮಾನೆ, ಬಸವರಾಜ ಎಸ್. ಅಲ್ಲಿಪೂರ, ಮತಿ ರೇಷ್ಮಾ ಆರ್. ಇಬ್ರಾಹಿಂಪೂರ, ಮತಿ ಸಿದ್ದಮ್ಮ ಪಿ. ಕೋಟನೂರ, ಮತಿ ಲೀಲಾವತಿ ಎಂ. ಸೋನಾರ, ತಿಮ್ಮಯ್ಯ ಬಿ. ಮಾನೆ, ದುರ್ಗಣ್ಣಾ ವಿ. ಕೂಸಾಳೆ, ಶರಣಪ್ಪಾ ಎಸ್. ಸನಾದಿ, ವಿರೇಶ ಎಂ. ಮಾಲಿಪಾಟೀಲ್, ಹಾಗೂ ಕಾನೂನು ಸಲಹೆಗಾರರಾದ ತಿಮ್ಮಯ್ಯ ಹೆಚ್. ಮಾನೆ ಸೇರಿದಂತೆ ಸಂಘದ ಸದ್ಯಸರು ಭಾಗವಹಿಸಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

5 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

5 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

5 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

5 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

6 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420