ಕಲಬುರಗಿ: ಜಾತಿ, ಧರ್ಮ, ವರ್ಣ ವ್ಯವಸ್ಥೆಯಲ್ಲಿ ಸಿಲುಕಿಸಿ
ತಾಯ್ತನ, ಅಂತಃಕರಣ, ಹೃದಯವಂತಿಕೆಗೆ ಗಾಯಗೊಳಿಸಿರುವ ಈ ದಿನಮಾನಗಳಲ್ಲಿ ಬುದ್ದ, ಶರಣ, ಸೂಫಿ ತತ್ವಪದಕಾರರ ಸೌಹಾರ್ಧ ವಿಚಾರಗಳೆಂಬ ದಿವ್ಯ ನಾಡ ಔಷದಗಳನ್ನು ನೀಡಬೇಕಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ ಅಭಿಪ್ರಾಯಪಟ್ಟರು.
ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕವಯತ್ರಿ ಡಾ. ಫರ್ವಿನ್ ಸುಲ್ತಾನ್ ಅವರ ಶರಣರ ನಾಡಿನ ಸೂಫಿ ಮಾರ್ಗ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೌದ್ಧ, ಮಹಾವೀರ,ಶರಣ, ಸೂಫಿ ಮಾರ್ಗ ಎಲ್ಲವೂ ಒಂದೇ. ಸ್ವತ್ತು ಸೊಕ್ಕಾಗದ ಮುನ್ನ ( ಹಣ, ಆಸ್ತಿಯ ಜೊತೆಗೆ ಜಾತಿ, ಧರ್ಮ) ಅಹಂಕಾರ ನೀಗಿಸಿಕೊಳ್ಳಬೇಕು ಎಂಬುದನ್ನು ಸೂಫಿ ಮಾರ್ಗ ಹೇಳಿ ಕೊಡುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಚಿಂತಕಿ ಡಾ. ಮೀನಾಕ್ಷಿ ಬಾಳಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶ ಹರಿ, ಹಜರತ್ ಪರಂಪರೆಯ ನಾಡಾಗಿದೆ. ಈ ಮೂರನ್ನೂ ಏಕೀರ್ಭವಿಸಿಕೊಂಡು ಸೌಹಾರ್ದತೆ ಸಾರುವಂತಿದೆ. ನಮ್ಮದು ಬಹು ಸಂಸ್ಕೃತಿಯ ನಾಡಾಗಿದ್ದು, ಏಕ ಸಂಸ್ಕೃತಿ ಹೇರುವ ಆಟ ಇಲ್ಲಿ ನಡೆಯದು ಎಂದರು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಆಶಯ ಭಾಷಣ ಮಾಡಿದರು. ಲೇಖಕಿ ಫರ್ವಿನ್ ಸುಲ್ತಾನ್ ಮಾತನಾಡಿದರು.ಡಾ. ಡಿಎನ್. ಪಾಟೀಲ ನಿರೂಪಿಸಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಹೂಗಾರ, ದೇಸಿ ಪುಸ್ತಕ ಪ್ರಕಾಶನದ ಸೃಷ್ಟಿ ನಾಗೇಶ, ಸಮುದಾಯ ಜಿಲ್ಲಾಧ್ಯಕ್ಷ ಡಾ. ದತ್ತಾತ್ರೇಯ ಇಕ್ಕಳಕಿ, ಜಿಲ್ಲಾ ಕಸಾಪ ಗೌರವಾಧ್ಯಕ್ಷರಾದ ಧರ್ಮಣ್ಣ ಧನ್ನಿ, ಶಿವರಾಜ ಅಂಡಗಿ ವೇದಿಕೆಯಲ್ಲಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…