ಪಟ್ಟಭದ್ರರಿಂದ ವಚನ ತಿರುಚುವ ಪ್ರಯತ್ನ: ಮೀನಾಕ್ಷಿ ಬಾಳಿ ಕಿಡಿ

ಕಲಬುರಗಿ: ೧೨ನೇ ಶತಮಾನದ ಶರಣರ ವಚನಗಳಲ್ಲಿ ಬಂಡಾಯದ ಕಿಡಿ ಹಾಗೂ ವೇದಾಗಮಗಳನ್ನು ತಿರಸ್ಕರಿಸಿದ್ದ ಆರ್ ಎಸ್ ಎಸ್ನವರಿಗೆ ಈಗ ಒಮ್ಮಿದೊಮ್ಮೆ ವಚನ ಹಾಗೂ ಅವರ ದರ್ಶನದ ಮೇಲೆ ಇಷ್ಟೊಂದು ಪ್ರೀತಿ, ಭಕ್ತಿ ಹುಟ್ಟಲು ಏನು‌ ಕಾರಣ ಎಂದು ಪ್ರಗತಿಪರ ಚಿಂತಕಿ ಮೀನಾಕ್ಷಿ ಬಾಳಿ ಕಿಡಿ ಕಾರಿದರು.

ಪ್ರಸ್ತುತ ಶರಣರ ವಚನಗಳನ್ನು ತಿರುಚಿ ಬರೆದು ಅವುಗಳನ್ನು ಸರ್ವನಾಶ ಮಾಡುವ ಹುನ್ನಾರ ನಡೆಸಿದ್ದು, ಅದು ಎಂದಿಗೂ ಕೈಗೂಡುವುದಿಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

`ವಚನ ದರ್ಶನ’ ಪುಸ್ತಕದ ಮುಖಪುಟದಲ್ಲಿ ಮುದ್ರಿಸಿರುವ ಭಾವಚಿತ್ರ, ರುದ್ರಾಕ್ಷಿಯನ್ನು ಕೂಡ ವೈದೀಕಿಕರಣಗೊಳಿಸಿದ್ದಾರೆ. ಕೆಲವು ಪ್ರತಿಗಳಲ್ಲಿ ಇದ್ದ ಅಯೋಧ್ಯ ಪ್ರಕಾಶನದ ಲೋಗೋ ಬದಲಾವಣೆ ಮಾಡಲಾಗಿದೆ. ಪ್ರಸ್ತುತ ವಚನಗಳ ಬಗ್ಗೆ ವಿಶ್ವದೆಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದೆ. ಆದ್ದರಿಂದ ಭೀತಿಗೆ ಒಳಗಾಗಿರುವ ಪಟ್ಟಭದ್ರರು ವಚನವನ್ನು ತಿರುಚುವ ಪ್ರಯತ್ನ, ವಚನಗಳ ವೈಚಾರಿಕತೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಚಿಂತಕ ಆರ್.ಕೆ.ಹುಡಗಿ ಮಾತನಾಡಿ, ೧೨ನೇ ಶತಮಾನದಲ್ಲಿ ವಚನಗಳನ್ನು ಸುಟ್ಟ ಶನಿ ಸಂತಾನಗಳೇ ಇಂದು ವಚನ ದರ್ಶನ ಎಂದು ಹೇಳುತ್ತಿದ್ದಾರೆ. ಅವರ ಸುಳ್ಳುಗಳ ಬಗ್ಗೆ, ವಚನಗಳ ಬಗ್ಗೆ ಚರ್ಚಿಸಲು ನಾವು ಸದಾ ಸಿದ್ಧವಾಗಿದ್ದೇವೆ. ತಿರುಚಿ ಬರೆದರೆ ಸುಮ್ಮನೆ ಕೂಡಲು ಆಗುವುದಿಲ್ಲ. ಕೆಲವು ಸ್ವಾಮೀಜಿಗಳ ಬುದ್ದಿಗೇಡಿತನ ಖಂಡನೀಯ ಎಂದರು.

ತುಮಕೂರು ಸಿದ್ದಗಂಗಾ ಮಠದ ಪೂಜ್ಯಶ್ರೀ ಲಿಂ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವುದಕ್ಕೆ ಆಗ್ರಹಿಸಲ್ಲ. ದೇವಸ್ಥಾನಗಳಲ್ಲಿ ಬ್ರಾಹ್ಮಣೇತರರನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ. ಶರಣರ, ವಚನಗಳ ಆಶಯವನ್ನು ಎಂದಿಗೂ ಪಾಲಿಸದವರು ವಚನಗಳ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ ಎಂದು ಹೋರಾಟಗಾರ ಸುನಿಲ ಮಾನ್ಪಡೆ, ರವೀಂದ್ರ ಶಾಬಾದಿ ತಿಳಿಸಿದರು.

ಆರ್.ಜಿ.ಶೆಟಗಾರ, ಪ್ರಭುಲಿಂಗ ಮಹಾಗಾಂವಕರ್, ರವೀಂದ್ರ ಶಾಬಾದಿ, ಆರ್.ಕೆ.ಹುಡಗಿ, ರವಿ ಸಜ್ಜನ್, ಹಣಮಂತರಾಯ ಕುಸನೂರ, ಲವಿತ್ರ ವಸ್ತ್ರದ ಇತರರಿದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

10 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

11 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

11 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

11 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

12 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420