ಸ್ವಚ್ಛತೆ ಇದ್ದಲ್ಲಿ ಯಾವುದೇ ರೋಗ ರುಜಿನಗಳು ಬರುವುದಿಲ್ಲ: ಧನರಾಜ್ ಬೋರಾಳೆ

0
30

ಕಲಬುರಗಿ: ಗ್ರಾಮೀಣಾ ಭಾಗದಲ್ಲಿ ಸ್ವಚ್ಛತೆ ಮುಖ್ಯವಾಗಿದೆ. ಸ್ವಚ್ಛತೆ ಇದ್ದಲ್ಲಿ ಯಾವುದೇ ರೋಗ ರುಜಿನಗಳು ಬರುವುದಿಲ್ಲವೆಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯ ಉಪನಿರ್ದೇಶಕರಾದ ಧನರಾಜ್ ಬೋರಾಳೆ ಅವರು ಹೇಳಿದರು.

ನಗರದ ಹೊರವಲಯದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಮತ್ತು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಹಾಗೂ ಪ್ರಾದೇಶಿಕ ಕೇಂದ್ರ ಕಲಬುರಗಿ ರವರ ಸಂಯುಕ್ತಾಶ್ರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜಿ.ಪಿ.ಎಲ್.ಎಫ್ ಸದಸ್ಯರುಗಳಿದೆ 3 ದಿನಗಳ ವಸತಿ ಸಹಿತ ಪುನಶ್ಚೇತನ ತರಬೇತಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಸಸಿಗೆ ನೀರೆರುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಗ್ರಾಮೀಣ ಭಾಗದಲ್ಲಿ ಸ್ವ-ಸಹಾಯ ಗುಂಪುಗಳಿಗೆ ವಹಿಸಲಾಗಿರುವ ಘನ-ತ್ಯಾಜ್ಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸದಲ್ಲಿ ಎಸ್.ಎಚ್.ಜಿ. ಹಾಗೂ ಗ್ರಾಮ ಪಂಚಾಯತಗಳಿಗೆ ಉತ್ತಮ ಆದಾಯ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬೋಧಕರುಗಳಾದ ಶಿವಪುತ್ರಪ್ಪ ಗೊಬ್ಬೂರು, ಡಾ.ರಾಜು ಕಂಬಳಿಮಠ, ಸಂತೋಷ ಎನ್ ರವರು ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು. ವಿಕೇಂದ್ರೀಕೃತ ಸಂಯೋಜಕರಾದ ಸತೀಶ್ಚಂದ್ರ ಸುಲೇಪೇಟ ರವರು ನಿರೂಪಿಸಿದರು.

ವಿಕೇಂದ್ರೀಕೃತ ಸಂಯೋಜಕರಾದ ಪುಷ್ಪಾ ಬೆಳಮಗಿ ವಂದಿಸಿದರು. ಕಾರ್ಯಕಮದಲ್ಲಿ ಆಡಳಿತ & ಲೆಕ್ಕಾಧಿಕಾರಿಗಳಾದ ಕು.ಸಾಕ್ಷಿ ಪಾಟೀಲ್, ಸಿಬ್ಬಂಧಿಗಳಾದ ಅಶ್ವೀನಿ ಪೂಜಾರಿ, ಅರ್ಚನ ಪಾಟೀಲ್ ರವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here