ಸುರಪರ: ನಗರದ ಪೊಲೀಸ್ ಠಾಣೆಯಲ್ಲಿ ಪ.ಜಾ,ಪ.ಪಂ ಕುಂದು ಕೊರತೆಗಳ ಸಭೆ

ಸುರಪುರ: ಇಲ್ಲಿ ಅನೇಕರು ವಿವಿಧ ಸಮಸ್ಯೆಗಳ ಕುರಿತು ಸಭೆಯಲ್ಲಿ ಗಮನಕ್ಕೆ ತಂದಿರುವಿರಿ,ತಮ್ಮ ಬೇಡಿಕೆಗಳ ಈಡೇರಿಸಲು ಮುಂಬರುವ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಹಸಿಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.

ನಗರದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ನಮ್ಮ ಕಂದಾಯ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಸಭೆಯಲ್ಲಿ ತಿಳಿಸಿರುವಿರಿ,ನಾನೆ ಖುದ್ದಾಗಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳ ಕುರಿತು ವಿವಿರ ನೀಡಿದ ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಅವರು,ನಮ್ಮ ಇಲಾಖೆಗೆ ಸಂಬಂಧಿಸಿದಂತೆ ವೈದ್ಯರ ಕೊರತೆ ಇರುವುದು ಮೇಲಾಧಿಕಾರಿಗಳು ತಿಳಿಸಿದ್ದೇನೆ ಶೀಘ್ರದಲ್ಲಿ ವೈದ್ಯರು ಬರಲಿದ್ದಾರೆ ಎಂದರು.

ಅಲ್ಲದೆ ಸ್ಕ್ಯಾನಿಂಗ್ ಆರಂಭಿಸಲಾಗುವುದು,ಅಲ್ಲದೆ ಆಂಬುಲೆನ್ಸ್‍ಗೆ ಡಿಸೇಲ್‍ಗೆ ಹಣ ಪಡೆದ ಕುರಿತು ತಿಳಿಸಿದ್ದು ಇದರ ಕುರಿತು ಕ್ರಮ ಕೈಗೊಳ್ಳುವುದಾಗಿ ಹಾಗೂ ಬೆಂಗಳೂರ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದ್ದು ಉತ್ತರಿಸಿದ ಮೇಲೆ ತಿಳಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಹೋರಾಟಗಾರ ವೆಂಕೋಬದೊರೆ ಬೊಮ್ಮನಹಳ್ಳಿ ಮಾತನಾಡಿ,ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಪ್ರಮುಖ ಅಧಿಕಾರಿಗಳೆ ಇಲ್ಲದಿರುವ ಸಭೆಯು ಕಾಟಾಚಾರಕ್ಕೆ ನಡೆಸಲಾಗುತ್ತಿದೆ ಎಂದರು.ಅಲ್ಲದೆ ಸುರಪುರ ಹುಣಸಗಿ ತಾಲೂಕಗಳಲ್ಲಿನ ವಿದ್ಯುತ್ ಕಂಬಗಳು ಹಣೆಯದಾಗಿದ್ದು ಬದಲಾಯಿಸಲು ಆಗ್ರಹಿಸಿದರು.ಅಲ್ಲದೆ ಇನ್ನುಳಿದ ಅರಣ್ಯ,ನಗರಸಭೆ ಹಾಗೂ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಪ್ರಶ್ನೆಗಳನ್ನು ಕೇಳಿದರು.

ಅಲ್ಲದೆ ಹೋರಾಟಗಾರರಾದ ನಿಂಗಣ್ಣ ಗೋನಾಲ,ಸಚಿನಕುಮಾರ ನಾಯಕ,ಮಾನಪ್ಪ ಕಟ್ಟಿಮನಿ,ದಾನಪ್ಪ ಕಡಿಮನಿ,ರಾಜು ಬಡಿಗೇರ,ಶೇಖರ ಮಂಗಳೂರ,ದೇವಿಂದ್ರಪ್ಪಗೌಡ ಮಾಲಗತ್ತಿ,ಯಲ್ಲಪ್ಪ ನಾಯಕ ಕಲ್ಲೋಡಿ ಸೇರಿದಂತೆ ಅನೇಕರು ವಿವಿಧ ಸಮಸ್ಯೆಗಳ ಕುರಿತು ಮಾತನಾಡಿ, ನಗರದಲ್ಲಿ ಸಿಸಿ ಕ್ಯಾಮೆರಾ ಕಾರ್ಯಾರಂಭದ ಕುರಿತು,ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳುವ ಕುರಿತು,ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಕುರಿತು,ನಗರದಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳುವ ಕುರಿತು,ಬೀದಿ ದನಗಳ ಸ್ಥಳಾಂತರ ಕುರಿತು,ಅಕ್ರಮ ಮರಳು ಸಾಗಾಟ,ಅಕ್ಕಿ ಸಾಗಾಟ,ಜೂಜು ಮಟ್ಕಾ ದಂಧೆಗೆ ಕಡಿವಾಣ ಹಾಕುವ ಕುರಿತು ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಪಿ.ಐ ಆನಂದ ವಾಗಮೊಡೆ,ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ಅರಣ್ಯ ಇಲಾಖೆ ಅಧಿಕಾರಿ ಬುಹ್ರಾನ್ ಶಹಾ,ಪಿಎಸ್‍ಐ ಸಿದ್ದಣ್ಣ ಯಡ್ರಾಮಿ,ಶಿವರಾಜ ಪಾಟೀಲ್ ಸೇರಿದಂತೆ ತಾ.ಪಂ ವ್ಯವಸ್ಥಾಪಕರು,ಸಮಾಜ ಕಲ್ಯಾಣ ಇಲಾಖೆ ಸಿರಸ್ತೆದಾರರು ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

ಪೊಲೀಸ್ ಪೇದೆ ದಯಾನಂದ ಜಮಾದಾರ ಸಭೆಯ ಕುರಿತು ನಿರೂಪಿಸಿ ವಂದಿಸಿದರು.ವಿವಿಧ ಸಂಘಟೆಗಳ ಅನೇಕ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

6 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

6 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

6 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

6 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

7 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420