ಕಲಬುರಗಿ: ಸದ್ಗುರು ದಾಸಿಮಯ್ಯ ಕಾನೂನು ಸೇವಾ ಕೇಂದ್ರ ಕಛೇರಿಯಲ್ಲಿ ಶಂಕರ ದಾಸಿಮಯ್ಯ ನವರ ಜಯಂತಿ ಆಚರಣೆ ಮಾಡಲಾಯಿತು.
11 ನೇ ಶತಮಾನದಲ್ಲಿ ನುಲಿಗೆ ಬಣ್ಣ ಹಾಕುವ ಕಾಯಕ ಮಾಡುವ ಶರಣ ಶಂಕರ ದಾಸಿಮಯ್ಯನವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಕಲಾವಿದ ಚಿ. ಸುರೇಶ ಮ್ಯಾಳಗಿ ಯವರು ಪೂಜೆ ಸಲ್ಲಿಸಿದರು.
ಮೊದಲಿಗೆ ಜಿಲ್ಲಾ ಹಟಗಾರ ನೇಕಾರ ಸಮಾಜದ ಕಾರ್ಯದರ್ಶಿ ಜೇ.ವಿನೋದಕುಮಾರ ಎಲ್ಲರಿಗೂ ಸ್ವಾಗತಿಸಿದರು, ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕುರಹಿನಶೆಟ್ಟಿ ಸಮಾಜದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ಮ್ಯಾಳಗಿ ಯವರು ಜಯಂತಿ ಉದ್ದೇಶಿಸಿ ಮಾತನಾಡುತ್ತ, ನೇಕಾರರ ಕುಲಗುರುಗಳು ಬಹಳ ನಿರ್ಲಕ್ಷ್ಯಕ್ಕೆ ಒಳಪಟ್ಟಿದ್ದಾರೆ ಅವರ ಬಗ್ಗೆ ಇನ್ನಷ್ಟು ಜಾಗ್ರತಿ ಮೂಡಿಸಿ ನೇಕಾರರ ಎಲ್ಲಾ ಒಳ ಪಂಗಡದವರು ಕೂಡಿಕೊಂಡು ಕ.ಕ ನೇಕಾರ ಹಿಂದುಳಿದ ಜಾತಿಗಳ ಮಹಾ ಒಕ್ಕೂಟ ರಚಿಸಬೇಕು ಎಂದು ತಿಳಿಸಿದರು.
ಇನ್ನೋರ್ವ ಅತಿಥಿಯಾಗಿ ಪಾಲ್ಗೊಂಡ ಜಿಲ್ಲಾ ತೊಗಟವೀರ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ ಬಲಪೂರ ಈ ಸಂದರ್ಭದಲ್ಲಿ ಮಾತನಾಡಿ ನೇಕಾರ ಸಮುದಾಯ ಸಾಮಾಜಿಕ ವಾಗಿ ಮೇಲೆ ಬರಲು ಆರ್ಥಿಕ ಸ್ಥಿತಿ ಗತಿ ಉನ್ನತ ಮಟ್ಟದಲ್ಲಿ ತರಲು ಸರ್ಕಾರದ ಸೌಲಭ್ಯ ಪಡೆಯಲು ಈ ಸಂಸ್ಥೆ ಮಾರ್ಗದರ್ಶನ ಮಾಡಿದರೆ ಯುವಕರು ಬಲಾಢ್ಯರಾಗಿ ಸೇವೆ ಸಲ್ಲಿಸಲು ಅನುಕೂಲ ವಾಗುತದೆ ಎಂದು ತಿಳಿಸಿದರು.
ಶಂಕರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸಂಸ್ಥಾಪಕ ಶಿವಲಿಂಗಪ್ಪಾ ಅಷ್ಟಗಿ ಯವರು ಮಾತನಾಡಿ ಕಳೆದ 3 ವರ್ಷಗಳಿಂದ ಸಮುದಾಯ ಜಾಗ್ರತಿ ಮಾಡುವ ಕಾರ್ಯದಲ್ಲಿ ತೊಡಗಿದ ಪ್ರಯುಕ್ತ ಇಂದು ಸಮಾಜದಲ್ಲಿ ನೇಕಾರ ಸಮುದಾಯದ ವಿವಿಧ ಸಮಾಜದ ವ್ಯಕ್ತಿಗಳಿಗೆ ಗೌರವದಿಂದ ನೋಡುವ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ತಿಳಿಸಲು ನನಗೆ ಹೆಮ್ಮೆ ಯಾಗುತ್ತಿದೆ ಎಂದು ಹೇಳಿದರು.
ಕೊನೆಯಲ್ಲಿ ಯುವ ನಾಯಕ ಮ್ಯಾಳಗಿ ಸುರೇಶ ವಂದಿಸಿದರು. ವಿಶೇಷ ಮಾಹಿತಿ, 10 ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ (ಬುಧವಾರ) ದಂದು, ಸಂಜೆ 5.30 ಕ್ಕೆ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ಉಪನ್ಯಾಸವನ್ನು, ಬಯಲು ಗ್ರಂಥಾಲಯದ ಜನಕರಾದ ಹಾಗೂ ಖ್ಯಾತ ಪತ್ರಕರ್ತರಾದ ಸುಭಾಷ್ ಬಣಗಾರ ನೀಡಲಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…
ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…
ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…
ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …
ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…