ಸಮಾಜವಾದಿ ಕ್ರಾಂತಿಯಿಂದಲೇ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಲು ಸಾಧ್ಯ

ಶಹಾಬಾದ: ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಬಹುದು ಎಂದುಎಸ್‍ಯುಸಿಐ (ಸಿ) ಪಕ್ಷದ ರಾಜ್ಯ ಸಮಿತಿಯ ಸದಸ್ಯ ಕಾಮ್ರೇಡ್ ವಿ.ಎನ್.ರಾಜಶೇಖರ ಹೇಳಿದರು.

ಅವರು ಸೋಮವಾರ ಎಸ್‍ಯುಸಿಐ (ಸಿ) ಪಕ್ಷದ ವತಿಯಿಂದ ಹನುಮಾನ ನಗರದಲ್ಲಿ ಆಯೋಜಿಸಲಾದ ಎಸ್‍ಯುಸಿಐ(ಸಿ)ಪಕ್ಷದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕವರ್ಗದ ಮಹಾನ್ ನಾಯಕರಾದ ಕಾಮ್ರೇಡ್ ಶಿವದಾಸ ಘೋಷ್ ರವರ 48ನೇ ಸ್ಮಾರಕ ಸಭೆಯಲ್ಲಿ ಮಾತನಾಡಿದರು.

ದೇಶ ಸ್ವತಂತ್ರಗೊಂಡು ಏಳು ದಶಕಗಳು ಕಳೆದರೂ ಸಹ ಜನಸಾಮಾನ್ಯರ ಜೀವನವು ಯಾತನಮಯವಾಗಿದೆ. ದೇಶವನ್ನು ಆಡಳಿತ ಮಾಡಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಇತರ ಎಲ್ಲಾ ಪಕ್ಷಗಳು ಜನವಿರೋಧಿಗಳಾಗಿದ್ದು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ದೇಶದಾದ್ಯಂತ ಬಡತನ, ಬೆಲೆಏರಿಕೆ, ನಿರುದ್ಯೋಗ, ಅನಕ್ಷರತೆ, ಮಹಿಳೆಯರ ಮೇಲಿನ ದೌರ್ಜನ್ಯ, ರೈತರ ಆತ್ಮಹತ್ಯೆ, ಕೋಮುವಾದ, ಶಿಕ್ಷಣದ ವ್ಯಾಪಾರೀಕರಣ ಮುಂತಾದ ಸಮಸ್ಯೆಗಳು ಹೆಚ್ಚಾಗುತ್ತಲೇ ಇವೆ. ಜನರು ಒಗ್ಗಟ್ಟಾಗಿ ಜನಾಂದೋಲನವನ್ನು ಬೆಳೆಸಿ, ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದ ಮಾತ್ರ ಈ ಎಲ್ಲಾ ಸಮಸ್ಯೆಗಳಿಗನ್ನು ಪರಿಹರಿಸಲು ಸಾಧ್ಯವೆಂದು ಹೇಳಿದರು.

ಎಸ್‍ಯುಸಿಐ (ಸಿ) ಪಕ್ಷದ ಸ್ಥಳಿಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಮಾತನಾಡಿ, ಕಾಮ್ರೇಡ ಶಿವದಾಸ್ ಘೋಷ ಅವರು ಅಗಲಿ 48 ವರ್ಷಗಳು ಗತಿಸಿವೆ. 1976ರಲ್ಲಿ ಅವರು ಪಕ್ಷಿಮ ಬಂಗಾಳದ ಕಲಕತ್ತಾದ ಪಕ್ಷದ ಕಮ್ಯೂನ್‍ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಅವರು ಇಡೀ ತಮ್ಮ ಜೀವಮಾನದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸಿದ್ದರು. ಎಷೋ ದಿನ ಅವರು ಉಪವಾಸವಿದ್ದು ಪಕ್ಷವನ್ನು ಕಟ್ಟಿದರು. ಭಾರತ ದೇಶದ ಕ್ರಾಂತಿಯ ಬಗ್ಗೆ ಅವರಿಗೆ ಇದ್ದ ಅಚಲ ವಿಶ್ವಾಸ ಅವರನ್ನು ಒಬ್ಬ ನೈಜ್ಯ ಕ್ರಾಂತಿಕಾರಿಯನ್ನಾಗಿ ಮಾಡಿದೆ. ನಾವು ಕೂಡಾ ಕಾಮ್ರೇಡ ಶಿವದಾಸ್ ಘೋಷ ರವರ ವಿಚಾರವನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಮಿತಿ ಸದಸ್ಯರಾದ ಬಾಗಣ್ಣ ಬುಕ್ಕಾ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಸಮಿತಿಯ ಸದಸ್ಯರಾದ ಕಾಮ್ರೇಡ್ ರಾಘವೇಂದ್ರ ಎಮ್.ಜಿ. ಜಗನ್ನಾಥ ಎಸ್.ಎಚ್, ಗುಂಡಮ್ಮ ಮಾಡಿವಾಳ, ರಾಜೇಂದ್ರ ಆತ್ನೂರ್ ಸೇರಿದಂತೆ ಪಕ್ಷದ ಹಾಗೂ ವಿವಿಧ ಸಂಘಟನೆಗಳ ನಾಯಕರಾದ ರಮೇಶ ದೇವಕರ್, ರಘು ಪವಾರ, ರಾಧಿಕಾ ಚೌಧರಿ, ನೀಲಕಂಠ ಹುಲಿ, ಶ್ಯಾಮ್ ಪವಾರÀ, ಆನಂದ, ದೇವರಾಜ, ತೇಜಸ್, ರೇಷ್ಮಾ ಇಬ್ರಾಹಿಂಪೂರ, ಅಜಯ್ ಗುರಜಾಲಕರ, ಸ್ಫೂರ್ತಿ ಗುರಜಾಲಕರ್, ಬಾಬು ಪವಾರ ಭಾಗವಹಿಸಿದ್ದರು.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

3 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

4 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

4 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

4 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

4 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420