ಶರಣರ ಅನುಭಾವ ಚಿಂತನೆಗಳು ಇಂದಿಗೂ ಪ್ರಸ್ತುತ : ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಶರಣರಂತೆ ನೈಜತೆಯನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಸಾಧ್ಯ.ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ತಿಳಿಸಿದರು.

ಶ್ರಾವಣ ಮಾಸ ನಿಮಿತ್ತ ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಒಂದು ತಿಂಗಳು ಪುರಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಪುರಾಣ, ಪ್ರವಚನಗಳು ಕೇಳುವುದರಿಂದ ಮನುಷ್ಯನಲ್ಲಿ ಭಕ್ತಿ ಭಾವನೆ ಮೂಡುವುದಷ್ಟೇ ಅಲ್ಲ, ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುತ್ತದೆ.ಮೇಲು, ಕೀಳೆಂದು ತಾರತಮ್ಯ ಇರುವುದಿಲ್ಲ.ಸಮಾನತೆಯ ಬೆಳಕು ಚೆಲ್ಲುವ ಕಾರ್ಯ ಮಾಡಿದವರೇ ಶರಣರು ಎಂದರು.

ಇಂದು ಪುರಾಣ, ಪ್ರವಚನಗಳು ಗ್ರಂಥಾಲಯಗಳಾಗಿವೆ.ಅಲ್ಲಿ ಶರಣರ ಸಾಧನೆಗಳು,ಅವರ ತ್ಯಾಗದ ಜೀವನ ಚರಿತ್ರೆ ತಿಳಿಯಬಹುದು.ಇಂಥ ಪುರಾಣಗಳು ಇನ್ನು ಹೆಚ್ಚು ನಡೆಯಬೇಕು.ಈ ವರ್ಷ ಜಯನಗರ ಶಿವಮಂದಿರಲ್ಲಿ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಪುರಾಣ ತಿಂಗಳ ಪೂರ್ತಿ ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ ಕಲಬುರಗಿ ಶ್ರೀ ಶರಣಬಸವೇಶ್ವರರು ಕರುಣಾಮಯಿ. ಅಲ್ಲದೆ ಬೇಡಿ ಬಂದ ಭಕ್ತರಿಗೆ ನಿರಾಸೆ ಮೂಡಿಸುವುದಿಲ್ಲ.ಜೀವನ ಚರಿತ್ರೆ ತೆರದ ಪುಟದ ಪುಸ್ತಕದಂತೆ ಇತ್ತು.ಅಂದು ಶರಣಬಸವೇಶ್ವರು ಕಳ್ಳನ ಮನುಸ್ಸು ಪರಿವರ್ತನೆ ಮಾಡಿ ಆದರ್ಶ ವ್ಯಕ್ತಿಯಾಗಿ ರೂಪಿಸಿದರು ಎಂದು ತಿಳಿಸಿದರು.

ಹಿರಿಯ ಹೋರಾಟಗಾರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಶರಣಬಸವೇಶ್ವರರು ಪವಾಡ ಪುರುಷರು.ಅವತ್ತಿನ ದಿನದಲ್ಲೇ ಅನ್ನ ದಾಸೋಹದ ಮಹಿಮೆ ಇಡೀ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಜಯನಗರ ಶಿವಮಂದಿದಲ್ಲಿ ಪ್ರತಿ ವರ್ಷ ಶ್ರಾವಣ ಮಾಸ ಅಷ್ಟೇ ಅಲ್ಲದೆ ನಿರಂತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.ಗುಡಿಗೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದರು.

ವೇದಮೂರ್ತಿ ಪುರಾಣ ಪಂಡಿತ ಶ್ರೀ ಮಲ್ಲಿಕಾರ್ಜುನ ಶಾಸ್ತ್ರೀ ಪುರಾಣ ಪ್ರಾರಂಭಕ್ಕೆ ಚಾಲನೆ ನೀಡಿದರು.ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ‌ ಕೆ.ಬಿ ಸ್ವಾಗತಿಸಿದರು. ಮಹಾಳಾ ಸದಸ್ಯೆ ಅನುರಾಧಾ ಕುಮಾರಸ್ವಾಮಿ ಪ್ರಾರ್ಥಿಸಿದರು.ಸಾಹಿತಿ ಜಿ.ಜಿ.ವಣಿಕ್ಯಾಳ ನಿರೂಪಿಸಿದರು.ಉಪಾಧ್ಯಕ್ಷ ವಿರೇಶ ದಂಡೋತಿ ವಂದಿಸಿದರು.

ಎಂ.ಡಿ.ಮಠಪತಿ, ಬಸವರಾಜ ಅನ್ವರಕರ, ಸಿದ್ಧಲಿಂಗ ಗುಬ್ಬಿ, ಬಸವರಾಜ ಮಾಗಿ, ಶಿವಕುಮಾರ ಪಾಟೀಲ,ವಿರೇಶ ಹುಡುಗಿ,ಮನೋಹರ ಬಡಶೇಷಿ,ಬಂಡಪ್ಪ ಕೇಸೂರ, ಭೀಮಾಶಂಕರ ಶೆಟ್ಟಿ,ಗುರುಪಾದಪ್ಪ ಕಾಂತಾ, ನಾಗರಾಜ ಖೂಬಾ,ಮಲ್ಲಿಕಾರ್ಜುನ ಕಲ್ಲಾ, ಬಸವರಾಜ ಪುರ್ಮಾ, ಮಲ್ಲಯ್ಯ ಸ್ವಾಮಿ ಗಂಗಾಧರಮಠ, ಶಿವಪುತ್ರಪ್ಪ ಮರಡಿ, ಮಲ್ಲಯ್ಯ ಸ್ವಾಮಿ ಬೀದಿಮನಿ, ಜಗನ್ನಾಥ ಪಾಟೀಲ, ವಿನೋದ ಪಾಟೀಲ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ವಾಲಿ,ಸದಸ್ಯೆಯರಾದ ಸುಜಾತಾ ಭೀಮಳ್ಳಿ, ಸುರೇಖಾ ಬಾಲಕೊಂದೆ, ಸುಷ್ಮಾ ಮಾಗಿ, ಗೀತಾ ‌ಸಿರಗಾಪೂರ, ವಿಜಯಾ ದಂಡೋತಿ ಸೇರಿದಂತೆ ಅನೇಕ ಮಹಿಳೆಯರು, ಹಿರಿಯರು, ಸಾರ್ವಜನಿಕರು ಭಾಗವಹಿಸಿದ್ದರು.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

3 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

4 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

4 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

4 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

4 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420