ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ ಬೆಂಗಳೂರಿನ ವಿಜಯನಗರ ನಿವಾಸಿ ಆಯುಶ್ ಡಿಗ್ಗಿ ರಾಜ್ಯ ಮಟ್ಟದ ಅಥ್ಲೇಟಿಕ್ಸನಲ್ಲಿ ಚಿನ್ನದ ಪದಕ ಪಡೆದಿದ್ದಾನೆ.
ಆಗಷ್ಟ್ 3 ಮತ್ತು 4 ರಂದು ಬೆಂಗಳೂರಿನ ಕಂಠೀರವ ಕೀಡಾಂಗಣದಲ್ಲಿ ಕರ್ನಾಟಕ ಅಥ್ಲೇಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ರಾಜ್ಯಮಟ್ಟದ ಕಿಡ್ಸ್ ಅಥ್ಲೇಟಿಕ್ಸ್ ಮೀಟ್ ಸ್ಪರ್ಧೆಯ 8 ವರ್ಷಗಳ ವಯೋಮಾನದ ಒಳಗಿನ ಮಕ್ಕಳ ಲಾಂಗ್ ಜಂಪ್ನಲ್ಲಿ 2.92 ಮೀಟರ್ ಉದ್ದ ಜಿಗಿಯುವ ಮೂಲಕ ಚಿನ್ನದ ಪದಕ ಪಡೆದಿದ್ದಾನೆ.
ಬೆಂಗಳೂರಿನ ವಿಜಯನಗರದ ನಿವಾಸಿಗಳಾಗಿರುವ ರುದ್ರವಾಡಿ ಗ್ರಾಮದ ಶಿವಲಿಂಗಪ್ಪ ಮತ್ತು ಸ್ನೇಹಾ ದಂಪತಿಯ ಮಗನಾದ ಆಯುಶ್ 2ನೇ ತರಗತಿಯಲ್ಲಿ ಓದುತ್ತಿದ್ದು ದಿ ನ್ಯೂ ಕೇಂಬ್ರಿಡ್ಜ್ ಆಂಗ್ಲ್ ಮಾಧ್ಯಮ ಶಾಲೆಯನ್ನು ಅಥ್ಲೇಟಿಕ್ಸ್ನಲ್ಲಿ ಪ್ರತಿನಿಧಿಸಿದ್ದ.
ವಿದ್ಯಾರ್ಥಿಯ ಸಾಧನೆಗೆ ಪಾಲಕರು, ಶಾಲೆಯವರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಅಥ್ಲೇಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ರಾಜ್ಯಮಟ್ಟದ ಕಿಡ್ಸ್ ಅಥ್ಲೇಟಿಕ್ಸ್ ಮೀಟ್ ಸ್ಪರ್ಧೆಯು ಕರ್ನಾಟಕದಾದ್ಯಂತದ ಯುವ ಕ್ರೀಡಾಪಟುಗಳನ್ನು ಒಟ್ಟುಗೂಡಿಸಿತು ಅಲ್ಲದೇ ಅವರ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ಉನ್ನತ ಮಟ್ಟದಲ್ಲಿ ಸ್ಪರ್ಧಿಸಲು ವೇದಿಕೆಯನ್ನು ಒದಗಿಸಿತು.
ಆಯುಶ್ನ ಸಾಧನೆಯು ಅವನ ಶಾಲೆ, ಕಲಬುರಗಿ ಜಿಲ್ಲೆ ಮತ್ತು ಸ್ವಗ್ರಾಮಕ್ಕೆ ಹೆಮ್ಮೆ ತಂದಿದೆ ಮಾತ್ರವಲ್ಲದೆ ಅವನ ಗೆಳೆಯರಿಗೆ ಮತ್ತು ಅಥ್ಲೆಟಿಕ್ಸ್ನಲ್ಲಿ ತಮ್ಮ ಛಾಪನ್ನು ಮೂಡಿಸಲು ಅಪೇಕ್ಷಿಸುವ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಿದೆ- ಶಿವಲಿಂಗಪ್ಪ ಡಿಗ್ಗಿ, ಆಯುಶ್ ತಂದೆ
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…
ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…
ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…
ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …
ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…