ದಲಿತ ಚಳವಳಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಗೆ ಸುರೇಶ ಶರ್ಮಾ ಅಧ್ಯಕ್ಷ

ಕಲಬುರಗಿ: ಜಿಲ್ಲೆಯ ನೆಲದಲ್ಲಿ ಹುಟ್ಟಿಕೊಂಡ ದಲಿತ ಚಳವಳಿ ನಾಡಿನಾದ್ಯಂತ ವಿಸ್ತರಿಸಿ ದಮನಿತರಿಗೆ ಧ್ವನಿಯಾಗಿ ನಿಂತಿದೆ. ಇಂಥ ಚಳವಳಿಯಿಂದಲೇ ನಾಡಿನಲ್ಲಿ ದಲಿತ ಮತ್ತು ಬಂಡಾಯ ಸಾಹಿತ್ಯ ರಚನೆಯಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಅ.17 ಮತ್ತು 18 ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಜಿಲ್ಲಾ ಪ್ರಥಮ ದಲಿತ ಚಲವಳಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರಾದ ಡಾ. ಸುರೇಶ ಎಲ್ ಶರ್ಮಾ ಅವರನ್ನು ಸತ್ಕರಿಸಿ ಆಹ್ವಾನ ನೀಡಿ ನಂತರ ಮಾತನಾಡಿದ ತೇಗಲತಿಪ್ಪಿ ಯವರು,
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ ಎಲ್ ಶರ್ಮಾ, ಶರನರ ನಾಡಿನಲ್ಲಿ ನಡೆಯಲಿರುವ ದಲಿತ ಚಳವಳಿ ಸಾಹಿತ್ಯ ಸಮ್ಮೇಳನ ಅಭೂತಪೂರ್ವಕವಾಗಿ ನಡೆಸಲು ಎಲ್ಲರ ಸಹಕಾರದೊಂದಿಗೆ ಯಶಸ್ವಿಗೊಳಿಸಬೇಕಾಗಿದೆ. ದಲಿತ ಹೋರಾಟದ ಅಸ್ಮಿತೆಯನ್ನು ಎತ್ತಿ ಹಿಡಿಯಲು ಇಂಥ ಸಮ್ಮೇಳನ ಹಮ್ಮಿಕೊಂಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ನಿಜಕ್ಕೂ ಅಭಿನಂದನಾರ್ಹ. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರ ಕ್ರಿಯಾಶೀಲತೆಗೆ ನಾವೆಲ್ಲರೂ ಬೆಂಬಲಿಸಲೇಬೇಕು ಎಂದು ಹೇಳಿದರು.

ಪ್ರಮುಖರಾದ ಎಸ್ ಪಿ ಸುಳ್ಳದ್, ಎಚ್. ಶಂಕರ, ಬಿ.ಸಿ. ವಾಲಿ, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ವಿನೋದಕುಮಾರ ಜೇನವೇರಿ, ಎಂ ಎನ್ ಸುಗಂಧಿ, ಸೋಮಶೇಖರಯ್ಯಾ ಹೊಸಮಠ, ಬಸಯ್ಯಾ ಸ್ವಾಮಿ, ಶಿವಶರಣಪ್ಪ ಬಡದಾಳ, ಪ್ರಭವ ಪಟ್ಟಣಕರ್, ಗುರು ಬಂಡಿ, ಮಹಾಂತೇಶ ರೋಢಗಿ, ಸಂಗಮನಾಥ, ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಧರ್ಮರಾಯ ಜವಳಿ, ಶಿವಾನಂದ ಪೂಜಾರಿ, ರಾಘವೇಂದ್ರ ಕಲ್ಯಾಣಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಎ ಬಿ ಹೊಸಮನಿ ಅವರ ಹೇಳಿಕೆಗೆ ತೇಗಲತಿಪ್ಪಿ ಪ್ರತಿಕ್ರಿಯೆ 80ರ ದಶಕದಲ್ಲಿ ದಲಿತ ಚಲವಳಿ ಹುಟ್ಟು ಹಾಕಿದ ಡಾ. ಡಿ.ಜಿ. ಸಾಗರ ಅವರು ಇಡೀ ದಲಿತ ಸಮುದಾಯದ ಧ್ವನಿಯಾಗಿ ಹೋರಾಟಕ್ಕಿಳಿದವರು. ಅಸಮಾನತೆ, ಜಾತಿ ದೌರ್ಜನ್ಯಗಳ ವಿರುದ್ಧ ಧ್ವನಿಯೆತ್ತಿ ದಮನಿತರ ಸಂಕಷ್ಟಗಳಿಗೆ ಹೋರಾಟದ ಮೂಲಕ ಪರಿಹಾರ ಒದಗಿಸಿಕೊಟ್ಟಿದ್ದಾರೆ. ಇಂಥ ಚಳವಳಿಗಳ ಪ್ರತಿರೂಪವಾಗಿ ಇಂದಿಗೂ ಹೋರಾಟದ ಬದುಕು ಸಾಗಿಸುತ್ತಿರುವ ಡಾ. ಡಿ.ಜಿ. ಸಾಗರ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ನೂರಕ್ಕೆ ನೂರರಷ್ಟು ಸಮಂಜಸವಾಗಿದೆ.

ಈ ದಲಿತ ಚಳವಳಿ ಸಾಹಿತ್ಯ ಸಮ್ಮೇಳನದ ಕುರಿತು ಯಾರು ಕೂಡ ಅಪಾರ್ಥ ಕಲ್ಪಿಸಬಾರದು. ಹೋರಾಟಗಾರರಿಗೆ ಗೌರವ ತಂದು ಕೊಡುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಾ ಬಂದಿದೆ. ಇಂಥ ಹೋರಾಟಗಾರರನ್ನು ವಯಕ್ತಿಕ ನೆಲೆಗಟ್ಟಿನಿಂದ ನೋಡದೆ ಸಮಗ್ರ ದೃಷ್ಟಿಕೋನದಿಂದ ನೋಡುವಂತಾಗಬೇಕು. ಹಾಗೂ ಇವರನ್ನು ಗುರುತಿಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಕೂಡ ಎಲ್ಲರಿಗೂ ಸಂತಸ ತಂದಿದೆ ಎಂದು ಅವರು ಸಮರ್ಥಿಸಿಕೊಂಡರು.

ಡಾ. ಡಿ.ಜಿ. ಸಾಗರ ಅವರು ಕಳೆದ ನಲವತ್ತು ವರ್ಷಗಳಿಂದ ನಾಡಿನಲ್ಲಿ ಬಹು ದೊಡ್ಡ ದಲಿತ ಸಂಘಟನೆಯೊಂದನ್ನು ಕಟ್ಟಿಕೊಂಡು ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆಗಳ ವಿರುದ್ಧ ಸಾಮಾಜಿಕ ಜಾಗೃತಿಯನ್ನು ಮೂಡಿಸಿದ್ದು ಯಾರು ಮರೆಯುವಂತಿಲ್ಲ. ಜತೆಗೆ ಕವಿ-ಸಾಹಿತಿ-ಕಲಾವಿದರಿಗೆ ಪ್ರೋತ್ಸಾಹ ನೀಡಿ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆಸಿದ ಕೀರ್ತಿ ಡಾ. ಡಿ.ಜಿ. ಸಾಗರ ಅವರಿಗೆ ಸಲ್ಲುತ್ತದೆ. ಇಂಥ ಶ್ರೇಷ್ಠ ಹೋರಾಟಗಾರರೊಬ್ಬರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದಾಗ ಖುಷಿ ಪಡಬೇಕೇ ಹೊರತು ವಿರೋಧ ಮಾಡಬಾರದೆಂದು ಎಂದು ಸಲಹೆ ನೀಡಿದರು.

ಇತ್ತಿಚೆಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಹೋರಾಟಗಾರರೊಬ್ಬರಾದ ಎ ಬಿ ಹೊಸಮನಿ ಯವರು, ತಪ್ಪು ಮಾಹಿತಿ ನೀಡಿ, ವಚನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಅವರು ಹತ್ತಾರು ಮೌಲಿಕ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ತತ್ವಪದ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ಕಡಕೋಳ ಮಠದ ಶ್ರೀ ಡಾ. ರುದ್ರಮುನಿ ಶಿವಾಚಾರ್ಯರು ತಮ್ಮ ಶ್ರೀಮಠದ ಪ್ರಕಾಶನದಿಂದ ಹತ್ತಕ್ಕೂ ಹೆಚ್ಚು ತತ್ವಪದ ಸಾಹಿತ್ಯ ಪ್ರಚಾರಕ್ಕೆ ಸಂಬಂಧಿಸಿದಂತೆ ಪುಸ್ತಕಗಳನ್ನು ಪ್ರಕಟಿಸಿ ತತ್ವಪದಕಾರರನ್ನು ಜೀವಂತವಾಗಿರಿಸಿದ್ದಾರೆ. ಎಲ್ಲಾ ಸಂಗತಿಗಳನ್ನು ಗೊತ್ತಿಲ್ಲದೆ ತಪ್ಪು ಮಾಹಿತಿ ಸಮಾಜಕ್ಕೆ ನೀಡಬಾರದೆಂದು ಸಲಹೆ ನೀಡಿದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

11 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

11 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

11 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

11 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

12 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420