ಕಾಂಗ್ರೆಸ್ ಮುಖಂಡ ಅಹ್ಮದ್ ಸೇಠ್’ಗೆ ಉನ್ನತ ಹುದ್ದೆ ನೀಡಲು ಒತ್ತಾಯ

0
146

ಚಿತ್ತಾಪುರ; ಕಾಂಗ್ರೆಸ್ ಪಕ್ಷದ ಕಟ್ಟಾಲು, ಹಿರಿಯ ಮುಖಂಡ ಅಹ್ಮದ್ ಸೇಠ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಅಥವಾ ಜಿಲ್ಲಾ ಮಟ್ಟದಲ್ಲಿ ಉನ್ನತ ಹುದ್ದೆಯನ್ನು ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡರಾದ ಶಶಿ ಪೂಜಾರಿ ಒತ್ತಾಯಿಸಿದರು.

ಪಟ್ಟಣದ ಆಸರ್ ಮೊಹಲ್ಲಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ೩೦ ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಮುಖಂಡರಾಗಿ ಹಗಲು ರಾತ್ರಿಯನ್ನದೇ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡಗಳಲ್ಲಿ ಅವರ ತಾಯಿ ಮತ್ತು ಪತ್ನಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಟಿಕೆಟ್ ಪಡೆದು ಗೆಲ್ಲಿಸಿದ್ದಾರೆ.

Contact Your\'s Advertisement; 9902492681

ಲೋಕಸಭೆ, ವಿಧಾನಸಭೆ, ಜಿಪಂ, ತಾಪಂ, ಪುರಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ ಎಂದರು.
ಕಳೆದ ಬಾರಿಯ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ ಸಂಖ್ಯೆ ೧೦ರಿಂದ ಅವರ ತಾಯಿ ಸ್ಪರ್ಧಿಸಿ ಗೆದ್ದಿದ್ದರು.

ನಂತರ ಅವರ ತಾಯಿ ನಿಧನರಾದ ಪ್ರಯುಕ್ತ ಪತ್ನಿ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ನಿಲ್ಲಿಸಿದಾಗ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಚಾರಕ್ಕೆ ಆಗಮಿಸಿದಾಗ ಪತ್ನಿ ಅವರಿಗೆ ಅವಕಾಶ ಸಿಕ್ಕರೇ ಪುರಸಭೆ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಮೀಸಲಾತಿ ಬರದೇ ಇರುವುದರಿಂದ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ. ಆದ್ದರಿಂದ ಕಾಂಗ್ರೆಸ್ ಮುಖಂಡ ಅಹ್ಮದ್ ಸೇಠ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಉನ್ನತ ಹುದ್ದೆ ನೀಡಬೇಕೆಂದು ಸಚಿವರಿಗೆ ಒತ್ತಾಯಿಸಿದ್ದಾರೆ.

ಯುವ ಮುಖಂಡರಾದ ಭೀಮಣ್ಣ ಕಲಬುರಗಿಕರ್, ವಿಶ್ವನಾಥ ಮಾತನಾಡಿ, ವಾರ್ಡ್ ಸಂಖ್ಯೆ ೧೦ ರಲ್ಲಿ ೩೬೦೦ ಮತದಾರರಿದ್ದು ಪಟ್ಟಣದಲ್ಲಿಯೇ ಅತೀ ದೊಡ್ಡ ವಾರ್ಡ್ ಎನಿಸಿಕೊಂಡಿದೆ. ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಮನೆ ಮನೆಗೆ ಹೋಗಿ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಹ್ಮದ್ ಸೇಠ್ ಅವರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಸಚಿವರು ಅವರ ಸೇವೆಯನ್ನು ಗುರುತಿಸಿ ಉನ್ನತ ಹುದ್ದೆಯನ್ನು ಕೊಡಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಹುಸೇನ್ ಪಗಡಿ, ಮೊಗಲಯ್ಯ ಗುತ್ತೇದಾರ, ಶಿವಕುಮಾರ ಯಾದಗಿರಿ, ಶಬೀರ್, ಹಾರೂನ್, ವಿನಾಯಕ ಭೋವಿ, ಅಶೋಕ ಮಾಡಗಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here