ಕಟ್ಟಡ ಕಾರ್ಮಿಕರಿಗೆ ಕಳಪೆ ಸಾಮಗ್ರಿಗಳ ವಿತರಣೆ: ಭೀಮರಾಯ ಕಂದಳ್ಳಿ ಖಂಡನೆ

ಕಲಬುರಗಿ : ಸರಕಾರ ಕಟ್ಟಡ ಕಾರ್ಮಿಕರ ಕಾಯಕ ಸಲುವಾಗಿ ವಿತರಿಸಲು ಖರಿದಿಸಿರುವ ಸಾಮಗ್ರಿಗಳಿಗೆ ಸಂಬಂಧಪಟ್ಟಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಕಟ್ಟಡ ಕಾರ್ಮಿಕರ ಮುಖಂಡರಿಗೆ ಕರೆದಿರುವ ಸಾಮಗ್ರಿಗಳ ಪರಿಶೀಲನಾ ಸಭೆಯಲ್ಲಿ ಸಾಮಗ್ರಿಗಳನ್ನು ಪರಿಶೀಲಿಸಿದಾಗ ಕಟ್ಟಡ ಕಾರ್ಮಿಕರಿಗೆ ವಿತರಿಸುವ ಎಲ್ಲಾ ಸಾಮಗ್ರಿಗಳು ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿರುತ್ತವೆ ಎಂದು ನವಕಲ್ಯಾಣ ಕರ್ನಾಟಕ ಕಾರ್ಮಿಕರ ಸಂಘ ಅಧ್ಯಕ್ಷ ಭೀಮರಾಯ ಕಂದಳ್ಳಿ ಆರೋಪಿಸಿದ್ದಾರೆ.

ಈ ಸಾಮಗ್ರಿಗಳು ಖರೀದಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅರೋಪಿಸಿದ ಅವರು ಸಂಘದಿಂದ ಮನವಿ ಪತ್ರ ಸಲ್ಲಿಸಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಖರಿದಿಸಿರುವ ಕಳಪೆ ಕಾಮಗಾರಿಗಳನ್ನು ತಕ್ಷಣ ವಾಪಸ್ಸು ಮಾಡಿ ಗುಣಮಟ್ಟದ ಸಾಮಗ್ರಿಗಳನ್ನು ಖರೀದಿಸಿ ಕಟ್ಟಡ ಕಾರ್ಮಿಕರಿಗೆ ವಿತರಿಸಬೇಕೆಂದು ಒತ್ತಾಯಿಸಿದ್ದಾರೆ.

ಇಲಾಖೆ ಇದಕ್ಕೆ ಸ್ಪಂದಿಸದಿದ್ದರೆ, ಬರುವ ದಿನಗಳಲ್ಲಿ ಕಾರ್ಮಿಕ ಇಲಾಖೆಯ ಎದುರುಗಡೆ ಉಗ್ರ ಹೋರಾಟ ಮಾಡುವುದಾಗಿ ಸಂಘದ ಗೌರವಾಧ್ಯಕ್ಷರಾದ ರಾಜು ಜಮಾದಾರ, ಮುಖಂಡರಾದ ಶಿವುಕುಮಾರ ಬೆಳಗೇರಿ, ಮಹಾಂತೇಶ ದೊಡ್ಡಮನಿ, ಮರೆಪ್ಪ ರೊಟ್ಟನೊಡಗಿ, ದೇವಿಂದ್ರ ಉಳ್ಳಾಗಡ್ಡಿ, ಬಾಬುರಾವ ದೇವರಮನಿ ತಿಳಿಸಿದ್ದಾರೆ.

emedialine

Recent Posts

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

11 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

11 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

11 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

13 hours ago

ಕೆಐಡಿಸಿಸಿ ಕಪ್ ಕ್ರಿಕೆಟ್ ಟೋರ್ನಮೆಂಟ್ ಸೀಸನ್ 3 ಲಾಂಛನ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…

14 hours ago

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಿ: ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420