ಜೈ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಪಾಲಿಕೆ ಮೇಯರ್‍ಗೆ ಮನವಿ

ಕಲಬುರಗಿ: ನಗರದ ಸರ್ವೆ ನಂ:75 ಮತ್ತು 76 ರ. ಕೃಷ್ಣಾ ಎಸ್.ಎಂ ಆಶ್ರಯ ಕಾಲೋನಿಯ 200 ಮನೆಯ ನಿವಾಸಿಗಳಿಗೆ ಅವರ ಹೆಸರಿಗೆ ಮಂಜೂರಾಗಿರುವ ಸುಮಾರು 13 ವರ್ಷಗಳಿಂದ ಹಕ್ಕು ಪತ್ರ ವಿತರಣೆ ಮಾಡದೇ ಅದೇ ನಂಬರಿನ ಮನೆಗಳ ನಂಬರನ್ನು ಶ್ರೀಮಂತರಿಗೆ ವಿತರಣೆ ಮಾಡಿರುವುದನ್ನು ರದ್ದುಗೊಳಿಸಿ ಇದಕ್ಕೆ ನಿಜವಾದ ಅಲ್ಲಿರುವಂತಹ ಫಲಾನುಭವಿಗಳಿಗೆ ಮಂಜೂರು ಮಾಡಲು ಒತ್ತಾಯಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಎಸ್. ಫರತಾಬಾದ ನೇತೃತ್ವದಲ್ಲಿ ಮೇಯರ್ ಯಲ್ಲಪ್ಪ ನಾಯ್ಕೋಡಿ ಅವರಿಗೆ ಮನವಿ ಸಲ್ಲಿಸಿದರು.

13 ಸರಿಯಾದ ರಸ್ತೆಗಳು, ಮತ್ತು ಬೀದಿ ದೀಪಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳಿಂದ ಸುಮಾರು 13 ವರ್ಷಗಳಿಂದ ಇಲ್ಲಿಯೇ ವಾಸವಾಗಿರುತ್ತಾರೆ. ಆದರೆ ಸದರಿ ತಮ್ಮ ಮಹಾನಗರ ಪಾಲಿಕೆ ಕಲಬುರಗಿಯವರು ಈ ನಿರ್ಗತಿಕರಿಗೆ ಇನ್ನುವರೆಗೆ ಮನೆಯ ಹಕ್ಕು ಪತ್ರಗಳನ್ನು ನೀಡದೇ. ಅವರನ್ನು ಕತ್ತಲಲ್ಲಿಟ್ಟು ಈಗ ಹಣದ ದುರಾಸೆಯಿಂದ ಇವರಿಗೆ ಹೆಸರಿಗೆ ಹಕ್ಕು ಪತ್ರಗಳನ್ನು ನೀಡದೇ ಇದಕ್ಕೆ ಸೂತ್ರ ಸಂಬಂಧವಿಲ್ಲದ ಶ್ರೀಮಂತರಿಗೆ ಇದೇ ಮನೆಗಳ ಹಕ್ಕು ಪತ್ರಗಳನ್ನು ನೀಡಿ. ಅವರಿಗೆ ದ್ರೋಹ ಬಗೆದು ಮತ್ತಷ್ಟು ಬಡತನದ ಕೂಪದಲ್ಲಿ ಉದ್ದೇಶಪೂರ್ವಕವಾಗಿ ನೂಕಿರುವುದು ನಾಗರೀಕ ಸಮಾಜ ತೆಲೆತಗ್ಗಿಸುವಂತಹ ವಿಷಯವಾಗಿದೆ ಎಂದು ಆರೋಪಿಸಿದ್ದಾರೆ.

ನಿರ್ಗತಿಕರಿಗೆ ನಿರ್ಮಾಣ ಮಾಡಿರುವ ಆಶ್ರಯ ಮನೆಗಳನ್ನು ನಿಜವಾದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಬೇಕು ಮತ್ತು ಈ ಹಿಂದೆ ಶ್ರೀಮಂತರಿಗೆ ನೀಡಿದ ಆಶ್ರಯ ಹಕ್ಕು ಪತ್ರಗಳನ್ನು ರದ್ದುಗೊಳಿಸಿ, ಸದರಿ ನಿಜವಾದ ಫಲಾನುಭವಳಿಗೆ ಹಕ್ಕು ಪತ್ರ ವಿತರಣೆ ಮಾಡಿ. ಮೂಲಭೂತ ಸಕೌರ್ಯಗಳಾದ ಒಳ್ಳೆಯ ಗುಣಮಟ್ಟದ ರಸ್ತೆಗಳು ಹಾಗೂ ಬೀದಿ ದೀಪಗಳು ಮತ್ತು ಕುಡಿಯುವ ನೀರು, ಮತ್ತು ಆಸ್ಪತ್ರೆ ಹೀಗೆ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಶ್ರಯ ಫಲಾನುಭವಿಗಳ ಜಂಟಿ ಜಿಲ್ಲಾಧಿಕಾರಿ ಕಛೇರಿಯ ಎದುರುಗಡೆ ಪ್ರತಿಭಟನೆ ಮಾಡಲಾಗುವುದೆಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಂಬು ಮಸ್ಕಿ, ಅಕ್ಷಯ, ನವೀನ, ಸಾಯಿಕುಮಾರ ಸಿಂಧೆ, ಪ್ರವೀಣ ಸಿಂಧೆ ಉಪಸ್ಥಿತರಿದ್ದರು.

emedialine

Recent Posts

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

11 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

11 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

11 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

13 hours ago

ಕೆಐಡಿಸಿಸಿ ಕಪ್ ಕ್ರಿಕೆಟ್ ಟೋರ್ನಮೆಂಟ್ ಸೀಸನ್ 3 ಲಾಂಛನ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…

14 hours ago

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಿ: ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420