ವಿದ್ಯಾರ್ಥಿಗಳು ಕೇವಲ ಅಂಕಕ್ಕಾಗಿ ಓದದೆ ಜ್ಞಾನಕ್ಕಾಗಿ ಓದಬೇಕು

ಸುರಪುರ: ವಿದ್ಯಾರ್ಥಿಗಳು ಅಂಕಕ್ಕಾಗಿ ಓದದೆ ಜ್ಞಾನಕ್ಕಾಗಿ ಓದಬೇಕು ಎಂದು ಶಾಸಕರು ಹಾಗೂ ಕಾಲೇಜು ಅಭಿವೃಧ್ಧಿ ಸಮಿತಿ ಅಧ್ಯಕ್ಷರಾದ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.

ನಗರದ ಕಮಲ ಕಿಶೋರ ಗೋವರ್ಧನ ದಾಸ್ ಲಡ್ಡಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗ ಸುರಪುರ ಇವರುಗಳ ವತಿಯಿಂದ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ,ಮನುಷ್ಯನಿಗೆ ಜೀವನ ನಡೆಸಲು ಕೇವಲ ಅಂಕಗಳು ಸಾಕಾಗುವುದಿಲ್ಲ ಜ್ಞಾನ ತುಂಬಾ ಅಗತ್ಯವಾಗಿದೆ.ತಾವೆಲ್ಲರು ಉತ್ತಮವಾಗಿ ಅಭ್ಯಾಸ ಮಾಡಿ ನಮ್ಮ ಸುರಪುರ ಹೆಸರನ್ನು ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಕೊಂಡಯ್ಯುವಂತೆ ಆಶಿಸಿದರು.

ಈ ಸಂದರ್ಭದಲ್ಲಿ ಪತ್ರಾಂಕಿತ ಉಪ ಖಜಾನೆ ಇಲಾಖೆಯ ಸಹಾಯಕ ಖಜಾನಾಧಿಕಾರಿ ಸಣ್ಣಕೆಪ್ಪ ಕೊಂಡಿಕಾರ ಮಾತನಾಡಿ,ಜಗತ್ತಿನಲ್ಲಿ ಯಾರಾದರು ನಮ್ಮಲ್ಲಿರುವ ಆಸ್ತಿ,ಅಂತಸ್ತು,ಬೇರೆ ವಸ್ತುಗಳನ್ನು ಕದಿಯಬಹುದು ಆದರೆ ಕದಿಯಲಾಗದ ಅಮುನ್ಯವಾದ ಸಂಪತ್ತು ಎಂದರೆ ಅದು ಜ್ಞಾನ.ಅಂತಹ ಜ್ಞಾನವನ್ನು ತಾವೆಲ್ಲರು ಪಡೆದುಕೊಳ್ಳುವಂತೆ ತಿಳಿಸಿದರು.

ಇಂದು ಸಾಮಾಜಿಕ ಜಾಲತಾಣಗಳು ಅನೇಕ ಬಗೆಯಲ್ಲಿ ಉಪಯೋಗವಾಗುತ್ತಿವೆ.ಆದರೆ ಜಾಲತಾಣವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿದರೆ ಅದರಿಂದ ಉನ್ನತ ಶ್ರೇಣಿಯ ಪರೀಕ್ಷೆಗಳನ್ನು ಪಾಸು ಮಾಡಬಹುದು ಎಂದರು.ವಿದ್ಯಾರ್ಥಿ ಜೀವನ ಎನ್ನುವುದು ತುಂಬಾ ಮುಖ್ಯವಾದದು,ತಾವೆಲ್ಲರು ಜೀವನದ ಮೊದಲ 25 ವರ್ಷ ಕಷ್ಟಪಟ್ಟರೆ ಮುಂದಿನ 75 ವರ್ಷಗಳು ಸುಖ ದಿಂದ ಇರಬಹುದಾಗಿ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲ ಆನಂದಕುಮಾರ ಜೋಷಿ ಮಾತನಾಡಿದರು.ನಂತರ ಕಾಲೇಜಿನಲ್ಲಿ ನಡೆಸಲಾದ ವಿವಿಧ ಕ್ರೀಡೆಗಳಲ್ಲಿ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ವೆಂಕೋಬ ಯಾದವ್,ನಯೋಪ್ರಾ ಮಾಜಿ ಅಧ್ಯಕ್ಷ ರಾಜಾ ವಾಸುದೇವ ನಾಯಕ,ಎಪಿಎಮ್‍ಸಿ ಮಾಜಿ ಸದಸ್ಯ ಮಲ್ಲಣ್ಣ ಸಾಹು ಮುಧೋಳ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿ,ಕಾಲೇಜಿನ ಉಪನ್ಯಾಸಕರಾದ ಪ್ರೋ.ವಿಶ್ವನಾಥರೆಡ್ಡಿ,ಪ್ರೋ.ವೆಂಕೋಬ ಬಿರಾದಾರ,ಪ್ರೋ.ಬಲಭೀಮ ದೇಸಾಯಿ,ಪ್ರೋ.ಗುರುರಾಜ ನಾಗಲಿಕರ,ಪ್ರೋ.ಹೆಚ್.ಎಮ್ ವಗ್ಗರ,ಪ್ರೋ.ದೇವಿಂದ್ರ ಪಾಟೀಲ್,ಪ್ರೋ.ಶಾಜಿಯಾ ಅಂಜುಮ್ ಶೇಖ್,ಪ್ರೋ.ಪ್ರಮೋದ ಕುಲಕರ್ಣಿ,ಅತಿಥಿ ಉಪನ್ಯಾಸಕ ಪರಮಣ್ಣ ದಿವಾನ ಉಪಸ್ಥಿತರಿದ್ದರು.ಕಾಲೇಜು ಆವರಣಕ್ಕೆ ಶಾಸಕರು ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು.

ಉಪನ್ಯಾಸಕರಾದ ದೇವು ಹೆಬ್ಬಾಳ ನಿರೂಪಿಸಿದರು,ಡಾ.ಹಣಮಂತ್ರಾಯ ದೊಡ್ಮನಿ ಸ್ವಾಗತಿಸಿದರು,ಪ್ರೋ.ಬಲಭೀಮ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಶಾಂತು ನಾಯಕ ವಂದಿಸಿದರು.ಕಾಲೇಜಿನಲ್ಲ ಅನೇಕ ಜನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

11 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

11 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

12 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

13 hours ago

ಕೆಐಡಿಸಿಸಿ ಕಪ್ ಕ್ರಿಕೆಟ್ ಟೋರ್ನಮೆಂಟ್ ಸೀಸನ್ 3 ಲಾಂಛನ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…

14 hours ago

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಿ: ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420