ಬಿಸಿ ಬಿಸಿ ಸುದ್ದಿ

ಮಹೇಬೂಬ್ ಪಾಶಾ ಕರಟಗಿ ವರ್ಗವಾಣೆಗೆ ಕೈ ಬಿಡುವಂತೆ ಕ.ರಕ್ಷಣಾ ವೇದಿಕೆ ಆಗ್ರಹ

ಕಲಬುರಗಿ: ಜಿಲ್ಲಾ ಪಂಚಾಯಿತ್ ಸಭೆಯಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ವಿರೋಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಮುಖಂಡ ಸಾಬಣ್ಣ ಎಸ್. ಬರಾಠಿ ಮಾತನಾಡಿ ಆಧಿಕಾರಿ ಮಹೇಬೂಬ್ ಪಾಶಾ ಕರಟಗಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಯಾವುದೇ ರೀತಿಯ ಬ್ರಷ್ಟಾಚಾರ ಮಾಡಿಲ್ಲ ಬದಲಿಗೆ ಅಭಿವೃದ್ಧಿ ಕೆಲಸವನ್ನು ಮಾಡಿ ದಕ್ಷತೆ ಮೆರೆದಿದ್ದಾರೆ, ಇಂತಹ ಅಧಿಕಾರಿ ವಿರುದ್ಧ ಆಧಾರ ರಹಿತ ಆರೋಪ ಮಾಡುವ ಮೂಲಕ ದ್ವೇಷ ನಡೆಸುತಿದ್ದಾರೆಂದು ಆರೋಪಿಸಿದರು.

ಈ ಹಿಂದೆ ಜಿಲ್ಲೆಯಲ್ಲಿ ಆರು ವಸತಿ ನಿಲಯಗಳು ಇದ್ದು, ಕರಟಗಿ ಅವರು 45 ವಸತಿ ನಿಲಯ ಹಾಗೂ 12 ಮೂರಾಜಿ ದೇಸಾಯಿ ಹಾಗೂ ನವೋದಯ ಶಾಲೆ ಹಾಗೂ ಮೌಲನಾ ಆಜಾದ್ ಶಾಲೆಗಳು ಮಂಜುರು ಮಾಡಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಮಾಡಿದ್ದಾರೆ.

ಮೆಹಬೂಬ್ ಪಾಶಾ ಅಭಿವೃದ್ಧಿಯ ದೃಷ್ಟಿಕೋನ ಹೊಂದಿರುವ ಅಧಿಕಾರಿ, ಜಿಲ್ಲಾ ಪಂಚಾಯಿತಿ ಸಭೆಯಲ್ಲಿ, ಕೈ ಬಿಡಲು ತೀರ್ಮಾನಿಸಿರುವುದು ನೋವಿನ ಸಂಗತಿ, ಕೂಡಲೇ ಕರಟಗಿ ಅವರ ವಿರುದ್ಧ ಮಾಡಿರುವ ದೂರುಗಳನ್ನು ಪರಿಶೀಲಿಸಿ ಕಾನೂನು ರೀತಿಯ ಕ್ರಮ ಕೈಗೊಳಬೇಕು ಹೊರೆತು ಕೈ ಬಿಡಬಾರದೆಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವೇಂಟೇಶ ನವಲಬೋ, ಮಾರುತಿ ಗಂಗಬೋ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago