ಪಾಮನಕಲ್ಲೂರಿನ ಸುಡುಗಾಡಿಗೆ ದಾರಿ ಯಾವುದಯ್ಯ!?

ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಊರ ಮುಂದೆ ಇರುವ ಸ್ಮಶಾನ (ರುದ್ರಭೂಮಿ) ಸರ್ಕಾರಿ ಜಾಲಿಗಿಡಗಳು ಬೆಳೆದು ಹಾಳಾಗಿದ್ದು, ಅಲ್ಲದೇ ಸ್ಮಶಾನಕ್ಕೆ ತೆರಳುವ ರಸ್ತೆ ಕೂಡ ಹಳ್ಳದ ನೀರಿನಿಂದ ಹದಗೆಟ್ಟಿದೆ ಕೂಡಲೇ ಸ್ಮಶಾನ ಮತ್ತು ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಯ ಹೋಬಳಿ ಘಟಕದ ಮುಖಂಡರು ಆಗ್ರಹಿಸಿದ್ದಾರೆ.

ಬುಧುವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕರವೇ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚೌಡ್ಲಿ, ಅಧ್ಯಕ್ಷ ರಮೇಶ್ ಗಂಟ್ಲಿ, ಮುಖಂಡ ಅಮರೇಶ್ ಡಿ ಪೂಜಾರಿರವರು, ಪಾಮನಕಲ್ಲೂರಿನ ಸುಡುಗಾಡಿಗೆ ಹೋಗುವ ದಾರಿ ಹಾಳಾಗಿದೆ. ಅಲ್ಲದೇ ಸುಡುಗಾಡು ಕೂಡ ಸರ್ಕಾರಿ ಜಾಲಿಗಿಡಗಳಿಂದ ತುಂಬಿ ಹೋಗಿದೆ. ಇದರಿಂದ ಗ್ರಾಮದಲ್ಲಿ ಮೃತಪಟ್ಟವರನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡುವುದು ಸವಾಲಿನ ಕೆಲಸವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ನಮ್ಮೂರಿನ ಸ್ಮಶಾನ ದುರಸ್ತಿಗೆ ಸಂಬಂಧಿಸಿದಂತೆ ಕಳೆದು ಮೂರು ವರ್ಷಗಳಿಂದ ಗ್ರಾಮ ಪಂಚಾಯತಿಗೆ ಮನವಿ ಮಾಡಿಕೊಂಡು ಬಂದಿದ್ದೇವೆ. ಸಂಬಂಧಿಸಿದ ಅಧಿಕಾರಿಗಳು ಮಾತ್ರ ಸ್ಮಶಾನವನ್ನು ಮತ್ತು ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ಸರಿ ಪಡಿಸುವ ಕೆಲಸ ಮಾಡಿಲ್ಲ. ನಾವು ಎಷ್ಟು ಬಾರಿ ಮನವಿ ಮಾಡಿದರು ಕೂಡ ಅವರು ಶಾಶ್ವತ ಪರಿಹಾರ ಒದಗಿಸಿಕೊಡುವ ಕೆಲಸ ಮಾಡುತ್ತಿಲ್ಲ.

ಇದು ಮಳೆಗಾಲವಾಗಿರುವುದರಿಂದ ಗ್ರಾಮದಲ್ಲಿ ಗ್ರಾಮದ ಜನರು ಮೃತಪಟ್ಟಾಗ ಮೃತದೇಹವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗುವುದು ಕಷ್ಟವಾಗುತ್ತಿದೆ. ಮೃತದೇಹವನ್ನು ಹೊತ್ತುಕೊಂಡು ಹೋಗುವಾಗ ಅನೇಕ ಜನರು ಮುಳ್ಳುಕಂಟಿಗಳಿಗೆ ಸಿಲುಕಿ ಬಿದ್ದು ಗಾಯಮಾಡಿಕೊಂಡಿದ್ದಾರೆ. ಅಲ್ಲದೇ ಹಳ್ಳದ ನೀರಿನಿಂದ ಸ್ಮಶಾನದ ರಸ್ತೆ ಹಾಳಾಗಿರುವುದರಿಂದ ಶವ ಸಾಗಿಸುವುದು ಕೂಡ ದುಸ್ತರವಾಗಿದೆ ಎಂದು ತಮ್ಮೂರಿನ ಸ್ಮಶಾನದ ಸಮಸ್ಯೆಗಳನ್ನು ಕರವೇ ಮುಖಂಡರು ಬಿಚ್ಚಿಟ್ಟರು.

ಸ್ಮಶಾನ ದುರಸ್ತಿ ಮಾಡುವಂತೆ ನಾವು ಮತ್ತೊಮ್ಮೆ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸುತ್ತೇವೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿ ಕೂಡಲೇ ಸುಡುಗಾಡನ್ನು ಮತ್ತು ಸುಡುಗಾಡಿಗೆ ತೆರಳುವ ರಸ್ತೆಯನ್ನು ದುರಸ್ತಿ ಮಾಡದಿದ್ದರೇ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಕಛೇರಿಗಳಿಗೆ ಬೀಗಮುದ್ರೆ ಹಾಕಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಲಕ್ಷ್ಮಣ ಚೌಡ್ಲಿ, ರಮೇಶ್ ಗಂಟ್ಲಿ, ಅಮರೇಶ್ ಡಿ ಪೂಜಾರಿರವರು ಉಗ್ರ ಹೋರಾಟದ ಸುಳಿವು ನೀಡಿದರು.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

9 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

10 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

10 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

10 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

10 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420