ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ ನಾಳೆ

0
44

ಬೆಂಗಳೂರು: ‘ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಮತ್ತು ವಿಧಾನ ಪರಿಷತ್ ಸಚಿವಾಲಯ ಹಾಗೂ ವಿಧಾನಸಭೆಯ ಸಚಿವಾಲಯ ನೌಕರರ ಸಂಘದ ಆಶ್ರಯದಲ್ಲಿ ವಿಕಾಸಸೌಧ ಸಮ್ಮೇಳನ ಸಭಾಂಗಣದ 419 ರಲ್ಲಿ ಆಗಸ್ಟ್ 9ರಂದು ಮಧ್ಯಾಹ್ನ 1:30 ಗಂಟೆಗೆ ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ, ಎಂದು ಕರ್ನಾಟಕ ಸರ್ಕಾರ ಸಚಿವಾಲಯ ನೌಕರ ಸಂಘದ ಅಧ್ಯಕ್ಷ ರಮೇಶ ಸಂಗಾ ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿ, ಸಂಭಾಷಣಕಾರ ಮತ್ತು ನಟ, ನಿರ್ದೇಶಕ ಕವಿರತ್ನ ಡಾ. ವಿ. ನಾಗೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ. ರಣದೀಪ್ ಅವರು ಆಗಮಿಸುವರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ವಹಿಸುವರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಚಿವಾಲಯ ನೌಕರ ಸಂಘದ ಅಧ್ಯಕ್ಷ ಕೆ.ಎಸ್. ಹೇಮಂತ್ ಮತ್ತು ವಿಧಾನಸಭೆ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಎನ್. ಜೆ. ಮೋಹನ್ ಕುಮಾರ್ ಅವರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here