ವಿದ್ಯುತ್ಯ್ ಸಮಸ್ಯೆಯಿಂದ ರೈತರು ಬೇಸತ್ತಿದ್ದೇವೆ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕಳೆದ ಒಂದು ವಾರದಿಂದ ವಿದ್ಯುತ್ ಸರಬರಾಜು ಇಲ್ಲದ ಕಾರಣ ಭತ್ತ ನಾಟಿ ಮಾಡಲಾಗದೆ ರೈತರು ಬೇಸತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಬೇಸರ ವ್ಯಕ್ತಪಡಿಸಿದರು.

ನಗರದ ರಂಗಂಪೇಟೆಯ ಜೆಸ್ಕಾಂ ಉಪ ವಿಭಾಗಿಯ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಬೆಳಿಗ್ಗೆ 4 ಗಂಟೆ ವೇಳೆಗೆ ವಿದ್ಯುತ್ ಕೊಡುತ್ತಾರೆ,ಆ ಸಂದರ್ಭದಲ್ಲಿ ಯಾವುದಾದರು ವಾಯರ್ ಅರ್ತಿಂಗ್ ಆಗಿದ್ದು ಗೊತ್ತಾಗದೆ ರೈತರು ಅಪಾಯಕ್ಕೀಡಾಗುತ್ತಾರೆ,ಅಲ್ಲದೆ ಹಾವು ಚೇಳುಗಳ ಭಯ ಅಂತಹ ಸಂದರ್ಭದಲ್ಲಿ ನೀರು ಪಡೆಯುವುದು ಕಷ್ಟವಾಗಲಿದೆ.

ಆದ್ದರಿಂದ ಬೆಳಿಗ್ಗೆ 6 ಗಂಟೆಯಿಂದ ಸುಮಾರು 7 ತಾಸು ನಿರಂತರ ವಿದ್ಯುತ್ ನೀಡಬೇಕು,ಈಗ ಮೊದಲು ಒಂದು ವಾರ 10 ತಾಸು ವಿದ್ಯುತ್ ನೀಡುವಂತೆ ಆಗ್ರಹಿಸಿದರು.ಅಲ್ಲದೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಕೆಲ ದಿನಗಳ ಹಿಂದೆ ಸುರಿದ ಮಳೆ ಗಾಳಿಗೆ ಕಂಬಗಳು ಬಿದ್ದಿದ್ದು ಅವುಗಳನ್ನು ಹಾಕಬೇಕು,ಅಗತ್ಯವಿರುವ ಕಡೆ ಹೊಸ ಟಿ.ಸಿ ಅಳವಡಿಸಬೇಕು ಇಲ್ಲವಾದಲ್ಲಿ ತಾಲೂಕಿನ ಎಲ್ಲಾ ರೈತರು ಸೇರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ನಂತರ ಸ್ಥಳಕ್ಕೆ ಜೆಸ್ಕಾಂ ಎಇಇ ರಫೀಕ್ ಅವರು ಆಗಮಿಸಿ ಸೆಕ್ಸೆನ್ ಆಫಿಸರ್‍ಗಳಿಗೆ ಕೂಡಲೇ ಎಲ್ಲಾ ಗ್ರಾಮಗಳ ವಿದ್ಯುತ್ ಸರಬರಾಜು ಆರಂಭಿಸುವಂತೆ ಕರೆ ಮಾಡಿ ಆದೇಶ ಮಾಡಿದ ನಂತರ ಪ್ರತಿಭಟನೆ ನಿಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಶಿವಾನಂದ ಕೆಂಭಾವಿ,ವಿರೇಶ ಬೋನ್ಹಾಳ,ಲಾಲಸಾಬ್,ಶ್ರೀಧರ ಹೊಸಮನಿ,ವಿಜಯಕುಮಾರ ಗುಳಗಿ,ಶಿವರುದ್ರ ಉಳ್ಳಿ,ಹಣಮಂತ್ರಾಯ ಬಡಿಗೇರ ಸೇರಿದಂತೆ ರತ್ತಾಳ,ದೇವಿಕೇರ,ಸತ್ಯಂಪೇಟೆ ಸೇರಿದಂತೆ ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ: ಇಎಸ್ ಐಸಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್, ನರರೋಗ ತಜ್ಞರ ಪ್ರಾರಂಭಕ್ಕೆ ಆಗ್ರಹ

ಕಲಬುರಗಿ: ನಗರದಲ್ಲಿನ ಇಎಸ್ ಐಸಿ ವೈದ್ಯಕೀಯ ಆಸ್ಪತ್ರೆಯಲ್ಲಿ ವಿಕಿರಣಶಾಸ್ತ್ರ ವಿಭಾಗದಲ್ಲಿ ಸಿಟಿ ಸ್ಕ್ಯಾನ್ ಮಾಡುವುದಕ್ಕೆ 30 ದಿನಗಳ ಸಮಯ ತೆಗೆದುಕೊಳ್ಳುತ್ತಿರುವುದನ್ನು…

18 mins ago

ರಾಜ್ಯಮಟ್ಟದ ಗಮಕ‌ ಸಮ್ಮೇಳ‌ನ

ಕಲಬುರಗಿ: ಜೇವರ್ಗಿ ತಾಲೂಕು‌ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೈಸೂರಿನ ಪರಂಪರೆ ಸಂಸ್ಥಯ ಸಹಯೋಗದಲ್ಲಿ ಜೇವರ್ಗಿಯ ಟೌನ್ ಹಾಲ್ ಹಳೆ…

22 mins ago

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

11 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

11 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

12 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420