ಶಹಾಬಾದ: ನಗರದಲ್ಲಿ ಐದಾರು ಜನರಿಗೆ ಬೀದಿ ಹಾಗೂ ಸಾಕು ನಾಯಿಗಳ ಕಡಿತದಿಂದ ಸಾರ್ವಜನಿಕರು ಭಯಬೀತರಾಗಿದ್ದಾರೆ.ಈ ಮಧ್ಯೆ ನಾಯಿ ಕಡಿತಗೊಳಗಾದ ರಾಮಮೊಹಲ್ಲಾದ 8 ವರ್ಷದ ಬಾಲಕಿ ದೀಪಾಲಿ ನಾಗರಾಜ ಕಣ್ಣಿನ ಭಾಗದಲ್ಲಿ ಗಂಭೀರವಾದ ಗಾಯವಾಗಿದ್ದರಿಂದ ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾರ್ವಜನಿಕರು ನಾಯಿ ಕಡಿತದಿಂದ ನಗರದಲ್ಲಿ ಆತಂಕ ಮನೆಮಾಡಿದೆ. ಸುಮಾರು ಐದಾರು ಜನರಿಗೆ ನಾಯಿಗಳು ಕಚ್ಚಿವೆ.ಅಲ್ಲದೇ 8 ವರ್ಷದ ಬಾಲಕಿಗೆ ಕಣ್ಣಿಗೆ ಭಾಗಕ್ಕೆ ಕಚ್ಚಿ ಗಂಬೀರ ಗಾಯಗೊಳಿಸಿರುವ ಬಗ್ಗೆ ಶಾಸಕ ಮತ್ತಿಮಡು ಅವರಿಗೆ ತಿಳಿಸಿದ್ದಾರೆ.ತಕ್ಷಣವೇ ವಿಷಯದ ಗಂಭೀರತೆಯನ್ನು ಅರಿತು ಶಾಸಕರು ನಗರಸಭೆಯ ಪೌರಾಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಅಲ್ಲದೇ ಬಾಲಕಿಯ ಆರೋಗ್ಯವನ್ನು ವಿಚಾರಿಸಲು ತಿಳಿಸಿದ್ದಾರೆ. ಅಲ್ಲದೇ ಅವರಿಗೆ ನಾವಿದ್ದೆವೆ ಎಂದು ಧೈರ್ಯ ತುಂಬಿ ಎಂದು ತಿಳಿಸಿದ್ದಾರೆ.ಅದರಂತೆ ಪಿಡಿ ಮುನ್ನಾವರ್,ತಹಸೀಲ್ದಾರ ನಗರಸಭೆಯ ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್, ಆಪ್ತ ಸಹಾಯಕ ದತ್ತು ಪವಾರ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಅಲ್ಲದೇ ನಾಯಿ ಕಡಿತಗೊಳಗಾದ ಬಾಲಕಿತ ಪೋಷಕರಿಗೆ ನಗರಸಭೆಯಿಂದ ಐದು ಸಾವಿರ ರೂ. ಪರಿಹಾರ ಚೆಕ್ ನೀಡಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…