ಶರಣರಿಗೆ ಮರಣವೇ ಮಹಾನವಮಿ: ಸಂಜಯ ಮಾಕಲ್

ಕಲಬುರಗಿ: ಮಹಿಳೆಯರು ತಮ್ಮಲ್ಲಿ ಹುದುಗಿರುವ ಭಯವನ್ನು ಬಿಡಬೇಕು. ದೇವರು, ಧರ್ಮದ ಹೆಸರಿನ ಮೇಲೆ ನಿರಂತರವಾಗಿ ನಡೆಯುತ್ತಿರುವ ಶೋಷಣೆಯಿಂದ ಪಾರಾಗಬೇಕಾದರೆ ವಿಚಾರವಂತಿಕೆಯನ್ನು ಬೆಳೆಸಿಕೊಳ್ಳಬೇಕು. ನಾವು ಪಡೆಯುವ ಶಿಕ್ಷಣ ದಿಂದ ಮಾತ್ರ ಮೂಢತೆ ಎಂಬ ಜಾಲದಿಂದ ಹೊರಬರಲು ಸಾಧ್ಯ ಎಂದು ಶರಣ ಚಿಂತಕಿ ಸುವರ್ಣಾ ಬಾಬೂಗೌಡ ನುಡಿದರು.

ನಗರದ ಪಿಲ್ಲೂ ಹೋಮಿ ಪದವಿ ಕಾಲೇಜಿನಲ್ಲಿಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಸರ್ವ ಶರಣರಾತ್ಮಧ್ವನಿ…. ಮಾನವತೆಯೇ ಮಹಾದೇವಿ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶರಣರಿಗೆ ಮರಣವೇ ಮಹಾನವಮಿ ಎಂದು ಕಲ್ಯಾಣ ಕ್ರಾಂತಿಯ ಹಿನ್ನೆಲೆಯನ್ನು ವಿವರಿಸಿದರು.

ವಿಚಾರ ಮಂಡನೆ ಮಾಡಿದ ಪಿಡಿಎ ಕಾಲೇಜಿನ ಪ್ರಾಧ್ಯಾಪಕ,  ಶರಣ ಚಿಂತಕ ಪ್ರೊ. ಸಂಜಯ ಮಾಕಲ್ ಮಾತನಾಡಿ, ಮಹಿಳೆಯರಿಗೆ ಸಮಾನತೆ ಕೊಟ್ಟಿದ್ದು ಬಸವಾದಿ ಶರಣರು ಮಾತ್ರ. ಹೆಚ್ಚು ಮೂಢನಂಬಿಕೆ, ಕಂದಾಚಾರಗಳಿಗೆ ಒಳಗಾಗಿದ್ದು ಮಹಿಳೆಯರೇ ಆಗಿದ್ದು, ಕಲ್ಲು, ಮಣ್ಭು, ಇವು ಯಾವು ದೇವರಲ್ಲ ಅಂತ ತೋರಿಸಿಕೊಟ್ಟವರು ವಚನಕಾರರು ಎಂದು ಹೇಳಿದರು.

ದೇವರು, ಧರ್ಮ ದ ಶೋಷಣೆಯಿಂದ ಈ ಸಮಾಜವನ್ನು ಇಂದು  ಹೊರಬರಬೇಕಾಗಿದೆ.. ಅಧರ್ಮವೇ ಇಂದು ಹೆಚ್ಚು ತಾಂಡವವಾಡುತ್ತಿರುವ ಇಂದಿನ ಸಮಾಜಕ್ಕೆ ನಿಜ ಧರ್ಮದ ಕಲ್ಪನೆಯನ್ನು ನೀಡಬೇಕಾಗಿದೆ ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಜಾತಿ ರಹಿತ ಸಮಾಜ ನಿರ್ಮಾಣದ ಕನಸು ಶರಣರದ್ದಾಗಿತ್ತು. ಆ ಕನಸನ್ನು ನನಸು ಮಾಡುವಲ್ಲಿ ಶರಣರ ವಾರಸುದಾರರಾದ ಪ್ರತಿಯೊಬ್ಬರು ಮುಂದಾಗಬೇಕಿದೆ. ವಚನಗಳ ಉಳಿವಿಗಾಗಿ ಶರಣರು ತಮ್ಮ ಪ್ರಾಣವನ್ನೂ ಸಹ ನೀಡಿದ್ದಾರೆ. ಶರಣರು ಕೊಟ್ಟಿರುವ ವಚನ ಸಾಹಿತ್ಯವನ್ನು ಉಳಿಸುವ, ಅನುಸರಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಕಾಲೇಜಿನ ಪ್ರಾಚಾರ್ಯರಾದ ಕವಿತಾ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜನಪರ ಹೋರಾಟಗಾರ, ದಲಿತ ಪ್ಯಾಂಥರ್ ನ ಮಲ್ಲಪ್ಪ ಹೊಸಮನಿ, ಕಲಬುರಗಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಉಪನ್ಯಾಸಕಿ ಪಂಚಶೀಲಾ ಬೇನಾಳ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಪರಮೇಶ್ವರ ಶೆಟಕಾರ ನಿರೂಪಿಸಿದರು. ಶಿವರಾಜ ಅಂಡಗಿ ಸ್ವಾಗತಿಸಿದರು. ಶ್ರೀಕಾಂತಗೌಡ ಪಾಟೀಲ ತಿಳಗೂಳ ವಂದಿಸಿದರು.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420