ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ

0
45

ಶಹಾಬಾದ:ಈ ದೇಶಕ್ಕೆ ಮಹಾತ್ಮಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಸತ್ಯ, ಅಹಿಂಸೆ, ಪ್ರಾಮಾಣಿಕತೆಯ ಹೋರಾಟಗಳಿಂದ ಮತ್ತು ಹಲವಾರು ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು.

ಅವರು ಗುರುವಾರ ತಾಲೂಕಾಢಳಿತ ವತಿಯಿಂದ ನಗರದ ಸರಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ ಮಾತನಾಡಿದರು.

Contact Your\'s Advertisement; 9902492681

ಈ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧೀಜಿಯವರ ನೇತೃತ್ವದಲ್ಲಿ ಅನೇಕ ಮಹಾನ ಹೋರಾಟಗಾರರ ಹೋರಾಟದ ಫಲವಾಗಿ 1947ರ ಆಗಸ್ಟ್ 15ರಂದು ನಮ್ಮೆಲ್ಲರಿಗೂ ಸ್ವಾತಂತ್ರ್ಯ ದೊರೆಯಿತು.

ಈ ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ಜನರ ಕಣ್ಣೀರಿದೆ. ನಮ್ಮ ಪೂರ್ವಜರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳುವುದು ನಮ್ಮೆಲ್ಲರುಗಳ ಆದ್ಯ ಕರ್ತವ್ಯವಾಗಿದೆ. ಈ ಸ್ವಾತಂತ್ರ್ಯದ ಮೂಲ ಉದ್ದೇಶಕ್ಕೆ ಧಕ್ಕೆಯಾಗದಂತೆ ನಾವುಗಳೆಲ್ಲಾ ದೇಶದ ಭದ್ರತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಬೇಕು. ಸಾಮಾಜಿಕ ನ್ಯಾಯ, ಸಮಾನತೆ, ಕೋಮು ಸೌಹಾರ್ದತೆ, ಸರ್ವರಿಗೂ ಶಿಕ್ಷಣ, ವಿವಿಧತೆಯಲ್ಲಿ ಏಕತೆ, ಸಹಭಾಳ್ವೆ, ಸರ್ವರಿಗೂ ಸಮಪಾಲು, ಮುಂತಾದ ಆದರ್ಶ ಮೌಲ್ಯಗಳನ್ನು ಸಾಕಾರಗೊಳಿಸಲು ರೂಪವಾಗಿರುವ ಮತ್ತು ಸ್ವಾತಂತ್ರ್ಯದ ಆಶಯಗಳನ್ನು ಅನುμÁ್ಠನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ. ದೇಶದ ಸಮಗ್ರತೆಗೆ ಭಂಗ ತರುವಂಥ ದುಷ್ಟಶಕ್ತಿಗಳ ವಿರುದ್ಧ ಸಂಘಟಿತ ಹೋರಾಟಮಾಡಬೇಕಿದೆ ಎಂದರು.

ಡಿವಾಯ್‍ಎಸ್‍ಪಿ ಶಂಕರಗೌಡ ಪಾಟೀಲ ಮಾತನಾಡಿ, ಸ್ವಾತ್ರ್ಯಂತ್ರಕೋಸ್ಕರ ತ್ಯಾಗ ಬಲಿದಾನ ಮಾಡಿದ ಮಹಾತ್ಮರನ್ನು ನೆನೆಯಬೇಕಿದೆ ಅಲ್ಲದೆ ಅವರ ಮಾರ್ಗದರ್ಶನದಲ್ಲಿ ನಮ್ಮ ಯುವ ಜನತೆ ಸಾಗಬೇಕಿದೆ, ಇಂದಿನ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ರಾಷ್ಟ್ರಪ್ರೇಮವನ್ನು ಮಕ್ಕಳ ಪೆÇೀಷಕರು ಹಾಗೂ ಶಿಕ್ಷಕರು ಬೆಳೆಸಬೇಕಾಗಿದೆ.

ಈ ದೇಶದಲ್ಲಿ ಮಹಾತ್ಮಗಾಂಧೀಜಿಯವರ ಗ್ರಾಮಸ್ವರಾಜ್ಯದ ಆದರ್ಶದ ಕನಸುಗಳಾದ ಸಾಮಾಜಿಕನ್ಯಾಯ, ಸಮಾನತೆ, ಕೋಮುಸೌಹಾರ್ದತೆ, ಸರ್ವರಿಗೂ ಶಿಕ್ಷಣ, ಸಹಜೀವನ, ಸಹಬಾಳ್ವೆ, ಸರ್ವರಿಗೂ ಸಮಪಾಲು ಮುಂತಾದ ಆದರ್ಶ ಮೌಲ್ಯಗಳ ಸಾಕಾರ ರೂಪವಾಗಿರುವ ಸ್ವಾತಂತ್ರ್ಯದ ಆಶಯಗಳನ್ನು ಈಡೇರಿಸಲು ನಾವೆಲ್ಲಾ ಶ್ರಮಿಸಬೇಕಾಗಿದೆ ಎಂದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ,ಪಿಐ ನಟರಾಜ ಲಾಡೆ, ತಾಪಂ ಇಓ ಮಲ್ಲಿನಾಥ ರಾವೂರ ವೇದಿಕೆಯ ಮೇಲಿದ್ದರು.

ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ಡಾ.ರಶೀದ್ ಮರ್ಚಂಟ್, ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ,ಗ್ರಾಮ ಲೆಕ್ಕಿಗರಾದ ಶ್ರೀಮಂತ, ಶಿವಾನಂದ, ಏಮನಾಥ ರಾಠೋಡ,ಜಗಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here