ಜೈಭಾರತ ಮಾತಾ ಸೇವಾ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಆಳಂದ: ತಾಲೂಕಿನ ಲಾಡ ಚಿಂಚೊಳಿಯ ಭಾರತ ಮಾತಾ ಮಂದಿರದಲ್ಲಿ ಜೈಭಾರತ ಮಾತಾ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಜಯಂತಿ ಉತ್ಸವದ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಲಾಗಿರುವ ಸ್ವಾತಂತ್ರ್ಯ ಹೋರಾಟಗಾರ ಭಗತಸಿಂಗ, ಸಂವಿಧಾನ ಶಿಲ್ಪಿ ಡಾ.ಬಿ ಆರ್. ಅಂಬೇಡ್ಕರ್ ಹಾಗೂ ಕ್ರಾಂತಿ ವಿರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಸಮಿತಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಾಹರಾಜ ನಿರಗುಡಿ ಹಾಗೂ ಆಳಂದ ತಾಲೂಕಿನ ಶಾಸಕರಾದ ಬಿ.ಆರ್.ಪಾಟಿಲ ಅವರು ದೇವಸ್ಥಾನದ ಆವರಣದಲ್ಲಿ ಕೆಎಂಎಫ್ ನ ಅಧ್ಯಕ್ಷ ಆರ್.ಕೆ.ಪಾಟೀಲ ಅವರು ನಿರ್ಮಿಸಿರುವ 100 ಅಡಿ ಎತ್ತರದ ಧ್ವಜ ಸ್ಥಂಬದ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಪರಮ ಪೂಜ್ಯರು ಶಾಸಕರಿಗೆ ಸತ್ಕರಿಸಿದರು.

ಕಾರ್ಯಕ್ರಮದಲ್ಲಿ ನ್ಯಾಯವಾದಿಗಳಾದ ಹೆಚ ಎಮ ಪಟೆಲ, ಬಿ.ಡಿ.ಹಂಗರಗಿ, ಮುಖಂಡರಾದ ಶಾಹಾಜಿರಾವ ಪಾಟಿಲ, ಗುರುಸಿದ್ದಪ್ಪಾ ಬೆನಕನಳ್ಳಿ, ಸಂದೇಶ ಪವಾರ, ಸಿದ್ದರಾಮ ದೇಶಮುಖ, ಮಲ್ಲಿಕಾರ್ಜುನ ಸಾರವಾಡ, ಮಂಜುನಾಥ ಬಿರಾದಾರ, ರವಿಂದ್ರ ಜಮಾದಾರ, ಪಿರದೊಷ ಅನ್ಸಾರಿ, ಪ್ರಕಾಶ ಮೂಲ ಭಾರತಿ, ನಾಮದೆವ ಬಬಲಾದ, ದಿಲಿಪ ಕ್ಷಿರಸಾಗರ, ದಯಾನಂದ ಪಾಟಿಲ, ಸಂಜಯ ನಾಯಕ, ಶ್ರೀಶೈಲ ಪಾಟಿಲ ಚಲಗೆರಿ, ಶಿವರಾಜ ವಾರದ, ದಯಾನಂದ ಹಾಗೂ ಅನೇಕ ಮುಖಂಡರು ಆಗಮಿಸಿದ್ದರು, 100 ಅಡಿ ಧ್ವಜ ಸ್ಥಂಬದ ಮೇಲೆ ತ್ರಿವರ್ಣ ಧ್ವಜಾರೋಹಣ ನೋಡಲು ತುಂಬಾ ಉತ್ಸಾಹದಿಂದ ಅಪಾರ ಸಂಖ್ಯೆಯಲ್ಲಿ ಕರ್ನಾಟಕ, ಮಾಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಿಂದ ದೇಶಬಾಂಧವರು ಆಗಮಿಸಿದ್ದು ಎಲ್ಲರಿಗೂ ಸಮಿತಿ ವತಿಯಿಂದ ಅಚ್ಚುಕಟ್ಟಾಗಿ ದಿನವಿಡಿ ನಿರಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು ಎಂದು ಸಮಿತಿ ವಕ್ತಾರರಾದ ವೈಜನಾಥ ಎಸ್ ಝಳಕಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ಕಾಳಗಿ ತಲುಪಿದ ವಿಕಾಸ ಪಥ ಯಾತ್ರೆ

ಕಾಳಗಿ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿಕಾಸ ಪಥ ಯಾತ್ರೆಗೆ ಅದ್ದೂರಿ ಸ್ವಾಗತ ನೀಡಲಾಯಿತು. 7ನೇ ಭಾರತ ವಿಕಾಸ ಸಂಗಮದ (ಭಾರತ…

4 hours ago

ಕಲಬುರಗಿ ಕಸಾಪ ದಿಂದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ 15 ರಂದು

ಕಲಬುರಗಿ: ಸುಭದ್ರ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಿಲ್ಲೆಯ ಆಯ್ದ ಶಿಕ್ಷಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ…

4 hours ago

ಕೆಬಿಎನ ವಿವಿಯಲ್ಲಿ ಒಂದು ದಿನದ ಕಾರ್ಯಾಗಾರ

ಕಲಬುರಗಿ: ಸ್ಥಳೀಯ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಇಂಜಿನಿಯರಿಂಗ ನಿಕಾಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗ ಮತ್ತು ಕಂಪ್ಯೂಟರ್ ಸೈನ್ಸ್…

7 hours ago

ಹನಿಟ್ರ್ಯಾಪ್ ಆರೋಪಿಗಳು ಸ್ವಯಂ ಶರಣಗಾತರಾಗಿಲ್ಲ: ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ

ಕಲಬುರಗಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ ಆರೋಪಿಗಳು ಸ್ವಯಂ ಪ್ರೇರಿತರಾಗಿ ಶರಣಾಗತರಾಗಿಲ್ಲ.…

15 hours ago

ಚಿಂಚೋಳಿಯಲ್ಲಿ ಬೀದರ್ ಸಂಸದರಿಗೆ ಅಭಿನಂದನಾ ಸಮಾರಂಭ: ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಭರವಸೆ

ಚಿಂಚೋಳಿ: ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೆ ನಾನು ಚಿರರುಣಿಯಾಗಿರುತ್ತೇನೆ. ಅತಿ ಹೆಚ್ಚು ಮತಗಳಿಂದ ನನಗೆ ಲೋಕಸಭೆಗೆ ಕಳುಹಿಸಿದ್ದು,…

16 hours ago

ಚಿಂಚೋಳಿ ಪುರಸಭೆ ನೂತನ ಅಧ್ಯಕ್ಷರಾಗಿ ಟೈಗರ್, ಉಪಾಧ್ಯಕ್ಷರಾಗಿ ಸುಲ್ತಾನಬೇಗಂ ಆಯ್ಕೆ

ಚಿಂಚೋಳಿ: ಅವಳಿ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆನಂದ್ ತಂದೆ ನಾಗೇಂದ್ರಪ್ಪ ಟೈಗರ್,…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420