ಮಹನೀಯರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ: ಪ್ರೊ. ದಯಾನಂದ ಅಗಸರ

ಕಲಬುರಗಿ: ಹಲವು ಮಹನೀಯರ ಬಲಿದಾನದಿಂದ ದೇಶ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಗಿದೆ. ಸ್ವಾತಂತ್ರ್ಯ ಹೋರಾಟದ ಘಟನೆಗಳನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಂತರ ವಿಜ್ಞಾನ ಕ್ಷೇತ್ರದ ಅವಿಷ್ಕಾರದಿಂದ ಐಟಿ, ಬಿಟಿ ಮತ್ತು ಎಐ ತಂತ್ರಜ್ಞಾನದಿಂದ ದೇಶದ ಪ್ರಗತಿ ಮತ್ತಷ್ಟು ವೇಗವಾಗಿ ಬೆಳೆಯುತ್ತಿದೆ. ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ತಾಂತ್ರಿಕತೆಯ ಬದಲಾವಣೆಗಳನ್ನು ವಿದ್ಯಾರ್ಥಿ ಸಮೂಹ ಗ್ರಹಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂಭಾಗದಲ್ಲಿ ಇಂದು ಆಯೋಜಿಸಿದ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯಕ್ಕಾಗಿ ಮಹಾತ್ಮಗಾಂಧಿ, ಸರ್ದಾರ ವಲ್ಲಬಾಯಿ ಪಟೇಲ್, ಸುಭಾಷ್ ಚಂದ್ರ ಬೋಷ್ ಹಾಗೂ ಲಕ್ಷ್ಮಿ ಸೆಗಲ್ ಸೇರಿದಂತೆ ಮುಂತಾದ ನಾಯಕರ ಹೋರಾಟದ ಹೆಜ್ಜೆಗುರುತುಗಳನ್ನು ಯಾರು ಮರೆಯುವಂತಿಲ್ಲ. ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿದ ಶ್ರೇಷ್ಠ ಸಂವಿಧಾನದ ಆಶಯದಂತೆ ದೇಶ ಪ್ರಬಲ ಶಕ್ತಿಯಾಗಿ ಬೆಳೆದಿದೆ. ಸಾಮಾಜಿಕ ಉನ್ನತಿ ಸಾಧನೆಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮರಸ್ಯ ಜೀವನ ಪ್ರತಿಯೊಬ್ಬರ ಕನಸಾಗಬೇಕು. ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬೆಳೆಸುವ ಮೂಲಕ ಸಮುದಾಯದಲ್ಲಿ ಪ್ರೀತಿ ಮತ್ತು ಬಾಂಧವ್ಯ ಬೆಳೆಸಿಕೊಂಡು ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ಕುವೆಂಪು ಅವರ ವಿಶ್ವಮಾನವ ಸಂದೇಶ, ಬಸವಣ್ಣನವರ ಚಿಂತನೆಗಳ ಪ್ರೇರಣೆಯಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಮಾನವ ಧರ್ಮ ಪಾಲನೆ ಇಂದು ಅವಶ್ಯಕತೆಯಿದೆ ಎಂದರು.

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ರಾಜನಾಳ್ಕರ್ ಲಕ್ಷ್ಮಣ, ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ವಿತ್ತಾಧಿಕಾರಿ ಕು. ಗಾಯತ್ರಿ, ಆಡಳಿತ ವಿಶೇಷಾಧಿಕಾರಿ ಪ್ರೊ. ಚಂದ್ರಕಾಂತ್ ಕೆಳಮನಿ, ಕಲಾ ನಿಕಾಯದ ಡೀನ್ ಪ್ರೊ. ರಬ್ ಉಸ್ತಾದ್, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಶ್ರೀರಾಮುಲು, ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ, ಗ್ರಂಥಪಾಲಕ ಡಾ. ಸುರೇಶ್ ಜಂಗೆ, ಪ್ರೊ. ಹೆಚ್. ಟಿ. ಪೋತೆ, ಪ್ರೊ. ಜಿ.ಎಂ. ವಿದ್ಯಾಸಾಗರ, ಪ್ರೊ. ಕೆರೂರು, ಪ್ರೊ. ರಮೇಶ್ ರಾಥೋಡ್, ಡಾ. ಎನ್. ಜಿ. ಕಣ್ಣೂರು ಹಾಗೂ ನಿವೃತ್ತ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ, ಅತಿಥಿ ಸಹಾಯಕ ಪ್ರಾಧ್ಯಾಪಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಪ್ರಾಥಾಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

78ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ‘ಹರ್ ಘರ್ ತಿರಂಗಾ’‘ ಆಚರಣೆ ನಿಮಿತ್ತ ವಿಶ್ವವಿದ್ಯಾಲಯದ ಕಾರ್ಯಸೌಧದಿಂದ ಗ್ರಂಥಾಲಯದವರೆಗೆ ಕುಲಪತಿ ಪ್ರೊ. ದಯಾನಂದ ಅಗಸರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ದೇಶಭಿಮಾನದ ಸಂದೇಶ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದರು.

ಸಂಗೀತ ವಿಭಾಗದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಪ್ರಸ್ತುತಪಡಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಯ ವಿದ್ಯಾರ್ಥಿಗಳು ದೇಶ ಭಕ್ತಿಗೀತೆ ಪ್ರಸ್ತುತಿಗೆ ನೃತ್ಯ ಪ್ರದರ್ಶಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ರಮೇಶ್ ಲಂಡನ್‌ಕರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

emedialine

Recent Posts

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ಕೊರಿದ ಆಯೇಷಾ ಖಾನಾಮ್

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತೆ ಆಯೇಷಾ ಖಾನಮ್ ಅವರು ಈ…

7 hours ago

ಪ್ರವಾದಿಯ ಅನುಯಾಯಿಗಳು ಎಲ್ಲಿ?

(1) ಪ್ರವಾದಿಯ ಅನುಯಾಯಿಗಳು ಎಲ್ಲಿ? ನಿನ್ನ ಒಡ ಹುಟ್ಟಿದವರ ವಿರುದ್ಧವಾದರೂ ಸರಿಯೇ ಸತ್ಯವನ್ನೆ ನುಡಿ ಎಂದ ನನ್ನ ಪ್ರವಾದಿಯ ಅನುಯಾಯಿಗಳು…

8 hours ago

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

19 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

20 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

20 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420