ಯುವಕರು ಬದುಕುವ ಕಲೆ ಬೆಳೆಸಿಕೊಳ್ಳಿ: ಬಸವಲಿಂಗ ದೇವರು

ಸುರಪುರ: ನಗರದ ಡಾ ಬಾಬಾಸಾಹೇಬ ಅಂಬೇಡ್ಕರ್ ವಿದ್ಯಾವರ್ಧಕ ಸಂಘ, ಅರುಂಧತಿ ಡಿ ಎಲ್ ಇಡಿ ಕಾಲೇಜ್ ರಂಗಂಪೇಟ್ ಇವರ ಸಂಯುಕ್ತಾಶ್ರಯದಲ್ಲಿ, ಶಿಕ್ಷಕರ ದಿನಾಚರಣೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಂದ ಸ್ವಾಗತ ಸಮಾರಂಭ ಜರುಗಿತು. ಈ ಕಾರ್ಯಕ್ರಮಕ್ಕೆ ಉಧ್ಘಾಟಕರಾಗಿ ಪರಮ ಪೂಜ್ಯ ಶ್ರೀ ಬಸವಲಿಂಗ ದೇವರು ಶ್ರೀಗಿರಿ ಮಠ ಲಕ್ಷ್ಮೀಪುರ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರಶಿಕ್ಷಣಾರ್ಥಿಗಳಿಗೆ ಆಶೀರ್ವಚನ ನೀಡಿ ಇಂದಿನ ಯುವ ಪೀಳಿಗೆಗೆ ಬದುಕುವ ಕಲೆಯನ್ನು ಬೆಳೆಸಿಕೊಳ್ಳಬೇಕು ದಾಸ್ಯ ಜೀವನದ ದಾರಿಯನ್ನು ತುಳಿಯದೆ ಹಿರಿಯರ ಮಾರ್ಗದರ್ಶನದಂತೆ ನಡೆ ನುಡಿಗಳನ್ನು ಸ್ಪಷ್ಟವಾಗಿಟ್ಟುಕೊಳ್ಳಬೇಕು ಎಂದರು.

ಮುಖ್ಯ ಅಥಿತಿಗಳಾಗಿ ಕರಬಸಯ್ಯ ದಂಡಗಿಮಠ ಪ್ರಾಂಶುಪಾಲರು ವಿಧ್ಯಾವರ್ಧಕ ಡಿ ಎಲ್ ಇಡಿ ಕಾಲೇಜ್ ಸೈದಾಪುರ ಇವರು ಆಗಮಿಸಿ, ಪ್ರಶಿಕ್ಷಣಾರ್ಥಿಗಳಿಗೆ ಜ್ಞಾನದ ಕ್ಷಿತಿಜವನ್ನು ಹೆಚ್ಚಿಸುವಂತಹ ಮಾರ್ಗದರ್ಶನ ನೀಡಿದರು
ಇದೇ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ ಸಿದ್ದಣ್ಣ ದಿಗ್ಗಿ ಮಾತನಾಡಿ, ಬಾವಿ ಶಿಕ್ಷರಾಗುವ ತಾವುಗಳು ಇತಿಹಾಸದ ಅರಿವನ್ನು ಬೆಳೆಸಿಕೊಳ್ಳಬೇಕು ಆ ಮೂಲಕ ಮಕ್ಕಳಿಗೆ ಇತಿಹಾಸದ ಜ್ಞಾನವನ್ನು ಹೆಚ್ಚಿಸಬೇಕೆಂದರು.

ಕಾರ್ಯಕ್ರಮಕ್ಕೆ ಅಥಿಗಳಾಗಿ ಕರ್ನಾಟಕ ಬಿ ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರಿ ರೇಣುಕಾ ಕನಕಗಿರಿ ಆಗಮಿಸಿ ಪ್ರಶಿಕ್ಷಣಾರ್ಥಿಗಳಿಗೆ ಶಿಸ್ತು ಅತ್ಯವಶ್ಯಕ ಎಂದು ನುಡಿದರು. ಇದೇ ಸಂದರ್ಭದಲ್ಲಿ ಡಾ ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ ಗಂಗಾಧರ ರುಮಾಲ ಅವರು ಸ್ವಾವಲಂಬನೆಯ ಆರ್ಥಿಕಾಬಿವೃದ್ದಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಹೊಂದಬೇಕೆಂದರು .

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷರಾದ ರಾಮರಡ್ಡೆಪ್ಪ ಬಿಜಾಸಪುರ ಇವರಿಗೆ ಕಾಲೇಜಿನ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅದ್ಯಕ್ಷರ ಅನುಪಸ್ಥಿಯಲ್ಲಿ ಡಿ ಇಡಿ ಕಾಲೇಜಿನ ಪ್ರಾಂಶುಪಾಲರಾದ ತಿಪ್ಪಣ್ಣ ದೊಡ್ಡಮನಿ ಅವರು ವಹಿಸಿ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಬೆಳಕು ನೀಡಿ ಜೊತೆಗೆ ಸಾವಿರಾರು ಜನರಿಗೆ ಅನ್ನವನ್ನು ನೀಡಿದ ನಮ್ಮ ಈ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದು ಭಾವನಾತ್ಮಕವಾಗಿ ನುಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಭೀಮಪ್ಪ ಎನ್ ದೊಡ್ಡಮನಿ ಅವರು ಪ್ರಾಸ್ತಾವಿಕವಾಗಿ ವಿದ್ಯಾರ್ಥಿಗಳು ಈ ದೇಶದ ಹೊಳೆಯುವ ನಕ್ಷತ್ರಗಳಿದ್ದಂತೆ ಆ ಹೊಳಪು ಇನ್ನಷ್ಟು ಗಟ್ಟಿಗೊಳ್ಳಲು ಸತತ ಅಧ್ಯನಶೀಲರಾಗಿರಬೇಕು ಎಂದರು. ಕಾಲೇಜಿನ ಉಪನ್ಯಾಸಕರಾದ ಕಾಶೀಬಾಯಿ ಟಿ ದೊಡ್ಡಮನಿ ಹಾಗೂ ಶ್ರೀ ಲಕ್ಷ್ಮಣ ನಡಕೂರ ಅವರು ವಿದ್ಯಾರ್ಥಿಗಳ ಕುರಿತು ಮಾತನಾಡಿದರು. ಪ್ರಿಯದರ್ಶಿನಿ ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ ಚಾಮನಾಳ ಅವರು ಹಾಜರಿದ್ದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಹಾಗಯೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ಹಣಮಂತ ಕಕ್ಕೇರಾ ಮತ್ತು ಎಲ್ಲಾ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಸ್ವಾಗತವನ್ನು ಕುಮಾರಿ ಶೋಭಾ ವಂದನೆಯನ್ನು ಕುಮಾರಿ ಮಂಜುಳಾ ನಿರೂಪಣೆಯನ್ನು ಕುಮಾರ ಯಲ್ಲಪ್ಪ ನಿರ್ವಹಿಸಿದರು.ಇದೆ ಸಂದರ್ಭದಲ್ಲಿ ಅನೇಕ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420