ಅಕ್ಷರ ಕಲಿತ ಶಾಲೆಯನ್ನು ದೊಡ್ಡವರಾದ ಮೇಲೆ ನೆನಪಿಸಿಕೊಳ್ಳುವುದು ಹೆಮ್ಮೆಯ ಸಂಗತಿ

0
17

ಸುರಪುರ: ಅಕ್ಷರ ಕಲಿತ ಶಾಲೆ ಎಂದರೆ ಪ್ರತಿಯೊಬ್ಬ ವ್ಯಕ್ತಿಗೆ ಬದುಕು ರೂಪಿಸಿದ ದೇವಾಲಯವಿದ್ದಂತೆ,ಅದರಂತೆ ಇಂದು ತಾವೆಲ್ಲರು ಕಲಿತ ಶಾಲೆಯನ್ನು ನೆನಪಿಸಿಕೊಂಡು ಗುರುಗಳಿಗೆ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭಿಮಣ್ಣ ಬಿಲ್ಲವ್ ಮಾತನಾಡಿದರು.

ನಗರದ ಹಸನಾಪುರ ಪೆಟ್ರೋಬ್ ಬಂಕ್ ಬಳಿಯಲ್ಲಿನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ವಸತಿ ಶಾಲೆಯಲ್ಲಿ 2004-05ರ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಇಂದು ತಾವೆಲ್ಲರು ನಿಮಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಗೌರವಿಸುತ್ತಿರುವುದು ನೋಡಿದರೆ ಹೆಮ್ಮೆಯಾಗುತ್ತದೆ.ಇದು ಇತರೆ ವಿದ್ಯಾರ್ಥಿಗಳಿಗೆ ಮಾದರಿ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಶಿವಾನಂದ ಹೂಗಾರ,ಭೀಮಣ್ಣ ಸರ್,ಲಕ್ಷ್ಮೀ ಟೀಚರ್,ಸಲೆಹಾ ಟೀಚರ್,ಆಶಾ ಟೀಚರ್,ಲಕ್ಷ್ಮಣ ಸರ್ ಇವರುಗಳಿಗೆ ಗುರು ವಂದನೆ ಸಲ್ಲಿಸಲಾಯಿತು.ನಂತರ ಹಳೆಯ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡೆಗಳನ್ನು ನಡೆಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here