ಬೂಟು ಧರಿಸಿ ಧ್ವಜಾರೋಹಣ ಮಾಡಿದ ಶಿಕ್ಷಕನ ಅಮಾನತಿಗೆ ಆಗ್ರಹ

ಸುರಪುರ: ಆಗಷ್ಟ್ 15 ರಂದು ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಶಿಕ್ಷಕರೊಬ್ಬರು ಕಾಲಲ್ಲಿ ಬೂಟು ಧರಿಸಿ ಧ್ವಜಾರೋಹಣ ಮಾಡಿದ್ದು,ಕೂಡಲೇ ಆ ಶಿಕ್ಷಕನನ್ನು ಅಮಾನತು ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿ,ಇಡೀ ದೇಶದ ಜನರು ಗೌರವ ದಿಂದ ಆಚರಿಸುವ ಹಬ್ಬಗಳೆಂದರೆ ಅದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಜನೆವರಿ 26ರ ಗಣರಾಜ್ಯೋತ್ಸವ,ಈ ದಿನಗಳಂದೆ ಧ್ವಜಾರೋಹಣ ಮಾಡುವ ಸುವರ್ಣ ಸಂದರ್ಭ ಇರಲಿದೆ.ಇಂತಹ ಧ್ವಜಾರೋಹಣ ಸಮಯದಲ್ಲಿ ಶಿಕ್ಷಕರಾದವರು ಬೂಟು ಧರಿಸಿ ಧ್ವಜಾರೋಹಣ ಮಾಡುವ ಮೂಲಕ ಅಗೌರವ ತೋರಿದ್ದಾರೆ.ಆದ್ದರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಆ ಶಿಕ್ಷಕನನ್ನು ಅಮಾನತು ಮಾಡಬೇಕು.ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಯಾವುದೇ ಮುನ್ಸೂಚನೆ ನೀಡದೆ, ಬಿಇಓ ಕಚೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

9 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

9 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

10 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

12 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

12 hours ago

ಶಬರಿಮಲೈ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ: ದಸ್ತಿಗೆ ಸನ್ಮಾನ

ಕಲಬುರಗಿ: ನಗರದ ಸುಲ್ತಾನಪುರ ಕ್ರಾಸ್ ಬಳಿ ಇರುವ ಬಂಡಕ್ ಹಾಗೂ ಬೆಣ್ಣೂರು ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆ ಹಾಗೂ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420