ಚಳವಳಿ, ಹೋರಾಟದಿಂದಲೇ ದಲಿತ ಸಾಹಿತ್ಯ ಉದಯ: ದಲಿತ ಚಳವಳಿ ಸಾಹಿತ್ಯ ಸಮ್ಮೇಳನ

ಕಲಬುರಗಿ: ದಲಿತ, ಹಿಂದುಳಿದವರು, ದೀನರು ಎಂದು ಹೇಳಿಕೊಂಡು ಎಷ್ಟು ದಿನ ಅಂತಾ ಜೀವನ ಸಾಗಿಸಬೇಕು. ಸಾಧನೆ ಮಾಡಿ ಸಾಧಕರಾಗಿ ಸಾಯೋಣ. ಬೌದ್ಧ ಸಂಸ್ಕಾರವನ್ನು ಪಡೆಯಬೇಕು ಎಂದು ಹಿರಿಯ ಸಾಹಿತಿ ಡಾ.ಹನುಮಂತರಾವ ದೊಡ್ಡಮನಿ ಆಗ್ರಹಿಸಿದರು.

ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಜಿಲ್ಲಾ‌‌
ಕನ್ನಡ ಸಾಹಿತ್ಯ ಪರಿಷತ್‌ನಿಂದ ಏರ್ಪಡಿಸಿದ್ದ ಜಿಲ್ಲಾ ಪ್ರಥಮ ದಲಿತ ಚಳವಳಿ ಸಾಹಿತ್ಯ ಸಮ್ಮೇಳನದ ಎರಡನೇ ದಿನ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಚಳವಳಿಯಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತ್ಯದಿಂದ ಚಳವಳಿಗೆ ಶಕ್ತಿ ಬರುತ್ತದೆ. ಬುದ್ಧ ಬಸವ, ಅಂಬೇಡ್ಕರ್ ಚಳವಳಿ ಮಾಡಿದ್ದರಿಂದಲೇ ಹೊಸ ಸಾಹಿತ್ಯ ರಚನೆ ಆಯಿತು ಎಂದು ಹೇಳಿದರು.

ಸಮ್ಮೇಳನವೂ ಹೋರಾಟಕ್ಕೆ, ಸಾಹಿತ್ಯಕ್ಕೆ ದಿಕ್ಸೂಚಿ ಆಗಬೇಕು. ನಮ್ಮ ನೆಲದ ಮಣ್ಣಿನ ವಾಸನೆ ಸಮ್ಮೇಳನ ಸಾರಬೇಕು. ದಲಿತ ಸಾಹಿತ್ಯ ಮತ್ತು ಚಳವಳಿ ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ಹೇಳಿದರು.

ಕೇಂದ್ರೀಯ ವಿವಿ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ ಮಾತನಾಡಿ, ದಲಿತ ಚಳವಳಿ ಇಲ್ಲದೆ ದಲಿತ ಸಾಹಿತ್ಯ ಇಲ್ಲ. ಹೋರಾಟದ ಸಾಗರಕ್ಕೆ ನೂರಾರು ನದಿಗಳು ಎನ್ನುವಂತೆ ಚಳವಳಿಯೇ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿತು. ಚರಿತ್ರೆಯ ಹೋರಾಟದ ನೆನಪುಗಳನ್ನು ಮಾಡುತ್ತ ನಮ್ಮ ನಾಳೆಯ ಚರಿತ್ರೆ ಕಟ್ಟಿಕೊಳ್ಳಬೇಕು ಎಂದರು.

ಜಗದ್ಗುರು ಶ್ರೀ ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಅಣದೂರದ ಪೂಜ್ಯ ಬಂತೆಜೀ ವರಜ್ಯೋತಿ ಥೇರೋ, ಬುದ್ಧವಿಹಾರದ ಸಂಗಾನಂದ ಬಂತೆಜೀ, ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ, ಶಿವರಾಜ ಅಂಡಗಿ, ಶರಣರಾಜ ಚಪ್ಪರಬಂಧಿ, ಧರ್ಮಣ್ಣ ಧನ್ನಿ, ಡಾ.ವಿಷ್ಣುವರ್ಧನ, ಸುರೇಶ ಹಾದಿಮನಿ, ಕಲ್ಯಾಣರಾವ ಶೀಲವಂತ ಇತರರಿದ್ದರು.

ವಿವಿಯಲ್ಲಿ ವಿದ್ವಾಂಸರಿಲ್ಲ ದ್ವಂಸಕರಿದ್ದಾರೆ: ದಲಿತ ಚಳವಳಿ, ಸಾಹಿತ್ಯಕ್ಕೆ ಶಕ್ತಿ ತುಂಬಬೇಕಾದ ವಿಶ್ವವಿದ್ಯಾಲಯಗಳಲ್ಲಿ ಕೃತಿಚೌರ್ಯ ಮಾಡುವ ಸಾಹಿತಿಗಳು, ಭ್ರಷ್ಟ ಪ್ರಾಧ್ಯಾಪಕರನ್ನು ಬದಲಾಯಿಸಬೇಕು, ಪಿಎಚ್‌ಡಿ ಪ್ರವೇಶಕ್ಕೆ ಎರಡು ಲಕ್ಷ ರೂ., ಎಂಪಿಲ್‌ಗೆ ೫೦ ಸಾವಿರ ರೂ. ತೆಗೆದುಕೊಳ್ಳುವ ಭ್ರಷ್ಟರನ್ನು ಚಳವಳಿ ಮೂಲಕ ಬದಲಾಯಿಸಬೇಕಿದೆ ಎಂದು ಸಾಹಿತಿ ಹಣಮಂತರಾಯ ದೊಡ್ಡಮನಿ ಆಗ್ರಹಿಸಿದರು.

ಗುಲ್ಬರ್ಗ ವಿವಿಯಲ್ಲಿ ವಿದ್ವಾಂಸರಿಲ್ಲ, ದ್ವಂಸಕರಿದ್ದಾರೆ. ಒಂದೇ ಪುಸ್ತಕಕ್ಕೆ ಆರು ಟೈಟಲ್ ನೀಡಿ, ಸರ್ಕಾರದ ಅನುದಾನದಲ್ಲಿ ಪುಸ್ತಕ ಮಾರಿ ಉಪ ಜೀವನ ಸಾಗಿಸುತ್ತಿದ್ದು, ಇವರ ಬಗ್ಗೆ ಪ್ರಶ್ನೆ ಎತ್ತಬೇಕು ಎಂದರು.

ಡಾ.ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಆಗದಿರುವುದು ಇನ್ನು ಜಾತಿ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಸಾಕ್ಷಿ. ಡಿ.ಜಿ.ಸಾಗರ ಸೇರಿ ಎಲ್ಲರೂ ಸಮಾನತೆಗಾಗಿ ಜಗಳವಾಡಿದರೆ ಹೊರತು ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಕ್ರಮಿಸಬೇಕಾದ ದಾರಿ ಇನ್ನು ತುಂಬ ದೂರ ಇದೆ. ಬುದ್ಧ, ಬಸವಣ್ಣ, ಅಂಬೇಡ್ಕರ್ ಜಾತಿ ವಿನಾಶಕ್ಕಾಗಿ ಬುಲ್ಡೋಜರ್ ಆಗಿ ಬಂದರು. ಆ ದಾರಿಯಲ್ಲಿ ಸಾಗಬೇಕು.- ಜಗದ್ಗುರು ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಶ್ರೀಶೈಲ

ಸಮುದಾಯ ಮುಂದೆ ಬರಲು ಅದರ ನಾಯಕರನ್ನು ಸಮಾಜ ರಕ್ಷಿಸಬೇಕು. ಸಮ್ಮೇಳನ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಅಸಮಾನತೆಯ ವ್ಯವಸ್ಥೆಯಲ್ಲಿ ಸಂಘರ್ಷ ಅನಿವಾರ್ಯ. ಪ್ರಗತಿಪರ, ದಲಿತ, ಬಂಡಾಯ ಸಾಹಿತಿಗಳು ಒಂದಾಗಬೇಕಿದೆ. ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ. ಅರಿತು ಎಚ್ಚರಿಕೆಯಿಂದ ಬಾಳಬೇಕು. ಚಳವಳಿಯಲ್ಲಿ ನೈತಿಕತೆ ಇದ್ದರೆ ಹೆಚ್ಚಿನ ಶಕ್ತಿ ಬರುತ್ತದೆ. – ಡಾ.ಡಿ.ಜಿ.ಸಾಗರ, ಸರ್ವಾಧ್ಯಕ್ಷ, ದಲಿತ ಚಳವಳಿ ಸಾಹಿತ್ಯ ಸಮ್ಮೇಳನ

ಸಮ್ಮೇಳನ ನಿರ್ಣಯಗಳು ದಲಿತ ಚಳವಳಿ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ನಾಡು- ನುಡಿ ಸೇವೆಗಾಗಿ ಅನುದಾನ ಮೀಸಲಿಡಬೇಕು, ಕಲಬುರಗಿ ಜಿ¯್ಲೆಯ ಪ್ರಧಾನ ಬೆಳೆ ತೊಗರಿ ಬೆಳೆಗೆ ಬೆಂಬಲ ಬೆಲೆ ಒದಗಿಸಬೇಕು, ಕನ್ನಡ ಮಾಧ್ಯಮದಲ್ಲಿ ಓದಿದ ಯುವಕರಿಗೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸೂಕ್ತ ಮೀಸಲಾತಿ ಒದಗಿಸಬೇಕು, ಜಿಲ್ಲಾ ಮಟ್ಟದ ದಲಿತ ಚಳವಳಿ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಅನುದಾನ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

emedialine

Recent Posts

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

9 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

9 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

10 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

12 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

12 hours ago

ಶಬರಿಮಲೈ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ: ದಸ್ತಿಗೆ ಸನ್ಮಾನ

ಕಲಬುರಗಿ: ನಗರದ ಸುಲ್ತಾನಪುರ ಕ್ರಾಸ್ ಬಳಿ ಇರುವ ಬಂಡಕ್ ಹಾಗೂ ಬೆಣ್ಣೂರು ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆ ಹಾಗೂ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420