ರಾಯಚೂರು: ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿರಯೊಂದಿಗೆ ಅಸಭ್ಯ ವಾಗಿ ವರ್ತಿಸುವ ಅಮೀಗಡ ಶಾಲೆಯ ಮುಖ್ಯೋಪಾಧ್ಯೆಯಾ ಪತಿಯಾದ ರಾಘವೇಂದ್ರ ಗೌಡ ಸೇರಿ ಇಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಕುಮಾರ ಮ್ಯಾಗಳಮನಿ ಆಗ್ರಹ.
ಇಲ್ಲಿನ ಮಸ್ಕಿ ತಾಲ್ಲೂಕಿನ (ಕವಿತಾಳ ಸಮೀಪದ) ಅಮೀನಗಡ ಗ್ರಾಮದಲ್ಲಿ ಒಂದೇ ಆವರಣದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯೆಯಾದ ಮನೀಶಾ ಪತಿಯಾದ ರಾಘವೇಂದ್ರ ಗೌಡ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಸಮಯವಲ್ಲದ ಸಮಯದಲ್ಲಿ ಯಾರ ಅನುಮತಿ ಇಲ್ಲದೆ ಒಳ ಪ್ರವೇಶಿ, ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದು ಅವರು ಆರೋಪಿಸಿದರು.
ಇದನ್ನು ಗಮನಿಸಿ ಪ್ರಶ್ನೆ ಮಾಡಲು ಮುಂದಾದ ಗ್ರಾಮದ ಯುವಕರಿಗೆ ಒಮ್ಮೊಮ್ಮೆ ಒಂದೊಂದು ರೀತಿಯ ಉತ್ತರ ನೀಡಿ ಕೊನೆಗೆ ನೀವು ಮಾತನಾಡಿದರೆ ನಿಮ್ಮ ಮೇಲೆ ಪ್ರಕರಣ ದಾಖಲಿಸುತ್ತೇನೆ ಕೇಳಲು ನೀವು ಯಾರು, ಅವರು ನಮ್ಮ ಪತಿ ನನ್ನ ಇಷ್ಟ ಇದೆ ಕೊನೆ ಹುಷಾರ್ ಎಂದು ಬೆದರಿಕೆಯನ್ನು ಹಾಕುತ್ತಾ ತಾವು ಆಡಿದ್ದೆ ಆಟ, ಮಾಡಿದ್ದೆ ಪಾಠ ಎಂಬ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುವುದು ಅಕ್ಷಮ್ಯ ಅಪರಾಧವಾಗಿದೆ ಎಂದು SFI ಸಂಘಟನೆ ಇಂದು ಕವಿತಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಆರೋಪಿಸಿದರು.
ನಿನ್ನೆಯೂ ಇಂತಹದ್ದೆ ಘಟನೆ ನಡೆದಿದೆ ಇದನ್ನು ಪ್ರಶ್ನೆ ಮಾಡಿದ ಯುವಕರ ಮತ್ತು ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ತಮ್ಮಲ್ಲೇ ಹತ್ತಾರು ತಪ್ಪುಗಳನ್ನು ಇಟ್ಟುಕೊಂಡು ಮುಖ್ಯೋಪಾಧ್ಯಾಯು ತಮ್ಮ ಗಂಡನೊಂದಿಗೆ ಕವಿತಾಳ ಪೋಲಿಸ್ ಠಾಣೆಗೆ ಬಂದಿದ್ದಾರೆ, ಇವರಿಗೆ ಪೋಲಿಸರು ಸಾಥ್ ನೀಡಿರುವುದು ಖಂಡನೀಯ. ತಮ್ಮ ಪತಿಗೆ ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಿಕೊಡುತ್ತಾ ಇಲಾಖೆಯ ಎಲ್ಲಾ ಆದೇಶಗಳನ್ನು ಉಲಂಘನೆ ಮಾಡುತ್ತಿರುವ ಶಾಲೆಯ ಮುಖ್ಯೋಪಾಧ್ಯೆಯಾದ ಮನೀಶಾ ಹಾಗೂ ಅವರ ಪತಿ ರಾಘವೇಂದ್ರ ಗೌಡರ ಮೇಲೆ ಸಂಬಂಧಿಸಿದ ಶಿಕ್ಷಣ ಇಲಾಖೆ ಮತ್ತು ವಸತಿ ನಿಲಯದ ಮೇಲಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ವಿದ್ಯಾರ್ಥಿಗಳಿಗೆ ಅನುಕೂಲಕರ, ಶೈಕ್ಷಣಿಕ ಭಯಮುಕ್ತ ವಾತಾವರಣ ನಿರ್ಮಾಣ ಮಾಡಿಕೊಡಬೇಕು ನಿರ್ಲಕ್ಷ್ಯ ತೋರಿದ್ದಲ್ಲಿ SFI ಸಂಘಟನೆ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಸುದ್ದಿಗೋಷ್ಠಿಯ ಮೂಲಕ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದರು.
ಈ ಸುದ್ದಿ ಘೋಷ್ಠಿ ಯಲ್ಲಿ SFI ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜ ಕಂದಗಲ್, ಮಹಿಳಾ ಮುಖಂಡರಾದ ಗಂಗಮ್ಮ ಅಮೀನಗಡ, ಗ್ರಾಮದ ಯುವ ಮುಖಂಡರಾದ ಬಸವರಾಜ ಅಮೀನಗಡ, ಆಯ್ಯಣ್ಣ, ಮನ್ಸೂರ್, ಹುಚ್ಚರೇಡ್ಡಿ, ಇಮಾಮ್ ಸಾಬ್ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…