ಪ್ರಜ್ವಲ್‍ಗೆ ಸನ್ಮಾನ

0
23

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ ಸದಸ್ಯರು ಹಾಗೂ ಮಾತೋಶ್ರೀ ಜೆರಾಕ್ಸ್ ಮತ್ತು ಡಿಟಿಪಿ ಸೆಂಟರ್‍ನ್ ಮಾಲಿಕ ಮಲ್ಲಿಕಾರ್ಜುನ್ ಬಿರಾದರ್ ಅವರ ಪುತ್ರ ಪ್ರಜ್ವಲ್ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಉನ್ನತ ವ್ಯಾಸಂಗಕ್ಕಾಗಿ ಸ್ಟ್ರಕ್ಚರಲ್ ಇಂಜಿನಿಯರಿಂಗ್ ಕೋಸ್ರ್ಗಾಗಿ ಅಮೆರಿಕ ದೇಶಕ್ಕೆ ಬೆಂಗಳೂರಿನಿಂದ ಅಮೆರಿಕಕ್ಕೆ ಫ್ಲೈಟ್ ಮುಖಾಂತರ ಹೋಗುತ್ತಿದ್ದಾರೆ.

ಸಂಘದ ಅಧ್ಯಕ್ಷರಾದ ಬಾಬುರಾವ್ ದಂಡಿನಕರ್ ಹಾಗೂ ಸರ್ವ ಸದಸ್ಯರುಗಳ ನೇತೃತ್ವದಲ್ಲಿ ಪ್ರಜ್ವಲ್ ಅವರಿಗೆ ಸನ್ಮಾನ ಮಾಡಿ ಅಭಿನಂದಿಸಿ ವಿದೇಶ ಪ್ರಯಾಣಕ್ಕೆ ಶುಭ ಹಾರೈಸಿ ಬೀಳ್ಕೊಟ್ಟಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ನ್ಯಾಯವಾದಿ ಚಂದ್ರಕಾಂತ್ ಆರ್ ಕಾಳಗಿ, ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್‍ನ ಮುಖ್ಯಸ್ಥೆ ಮಾಲಕಣ್ಣಿ, ರೇಣುಕಾ ಚವ್ಹಾಣ ಸೇರಿದಂತೆ ಬುದ್ಧ ಬಸವ ಅಂಬೇಡ್ಕರ್ ಬೆರಳಚ್ಚುಗಾರ ಸಂಘದ ಸರ್ವ ಸದಸ್ಯರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here