ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಲೇಖಕಿ ಪ್ರಮೀಳಾ ಜಾನಪ್ಪಗೌಡ ಅವರನ್ನು ಪರಿಷತ್ತಿನ ವತಿಯಿಂದ ಅವರ ಹಣ್ಣು ಹಂಪಲು ನೀಡಿ ಅಧಿಕೃತ ಆಹ್ವಾನ ನೀಡಲಾಯಿತು.

ಆಹ್ವಾನ ಸ್ವೀಕರಿಸಿ ಮಾತನಾಡಿದ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷೆ ಪ್ರಮೀಳಾ ಜಾನಪ್ಪಗೌಡ, ಎಲ್ಲ ಪ್ರಕಾರದ ಸಾಹಿತ್ಯಕ್ಕೆ ಜಾನಪದವೇ ಮೂಲವಾಗಿದೆ. ಹಿಮದೆ ಜಾನಪದ ಸಾಹಿತ್ಯದಲ್ಲಿ ಮಹಿಳೆಯರು ಹೆಚ್ಚು ಸಕ್ರೀಯರಾಗಿದ್ದಾರೆ. ಸಾಹಿತ್ಯ ಸಂಸ್ಕøತಿಯ ಹಲವು ಪ್ರಕಾರಗಳು ಮಹಿಳೆಯರಿಂದಲೇ ಜನ್ಮತಾಳಿವೆ. ಮಹಿಳೆಯರು ಸಾಹಿತ್ಯವನ್ನು ಅಭಿವ್ಯಕ್ತಗೊಳಿಸುವಲ್ಲಿ ಎಂದೂ ಹಿಂದೆ ಬಿದ್ದಿಲ್ಲ. ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಲ್ಪ ಕೊಡುಗೆಯನ್ನು ಗುರುತಿಸಿ ನನ್ನನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಸ್ತ್ರೀ ಶಕ್ತಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.

ಕಸಾಪ ತಾಲೂಕಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ ಮಾತನಾಡಿ, ಸಾಹಿತ್ಯ ಕ್ಷೇತ್ರಕ್ಕೆ ಸ್ತ್ರೀ ಶಕ್ತಿಯ ಕೊಡುಗೆ ಅಪಾರವಾಗಿದೆ. ಮಹಿಳೆಯಲ್ಲಿನ ಶಕ್ತಿಯನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನದಿಂದ ಈ ಬಾರಿ ಹಿರಿಯ ಲೇಖಕಿಯೊಬ್ಬರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಜತೆಗೆ ಸ್ತ್ರೀ ಸ್ವಾತಂತ್ರ್ಯ ಸಮಾನತೆಗಳನ್ನು ಕುರಿತು ಅನೇಕ ಚಿಂತನೆಗಳನ್ನು ಅಭಿವ್ಯಕ್ತಿಗೊಳಿಸುವ ಉದ್ದೇಶ ಈ ಸಮ್ಮೇಳನ ಹೊಂದಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ,. ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ಎ.ಕೆ. ರಾಮೇಶ್ವರ, ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ, ಜಾನಪ್ಪಗೌಡ ಚಿಂಚೋಳಿ, ಸ್ವಾಗತ ಸಮಿತಿಯ ಅಧ್ಯಕ್ಷ ವಿನೋದ ಪಾಟೀಲ ಸರಡಗಿ, ಕಾರ್ಯಾಧ್ಯಕ್ಷ ರಾಘವೇಂದ್ರ ಕಲ್ಯಾಣಕರ್, ರಾಜೇಂದ್ರ ಮಾಡಬೂಳ, ವಿಶಾಲಾಕ್ಷಿ ಮಾಯಣ್ಣವರ್, ಭಾಗ್ಯಶ್ರೀ ಮರಗೋಳ, ವಿಶ್ವನಾಥ ಯನಗುಂಟಿ, ಶಕುಂತಲಾ ಪಾಟೀಲ, ವಿನೋದಕುಮಾರ ಜೆ.ಎಸ್., ಶಿವಲಿಂಗಪ್ಪ ಅಷ್ಟಗಿ, ಕುಪೇಂದ್ರ ಬರಗಾಲಿ, ಸೋಮಶೇಖರಯ್ಯ ಹೊಸಮಠ, ಧರ್ಮರಾಯ ಜವಳಿ, ಮಲ್ಲಿಕಾರ್ಜುನ ಇಬ್ರಾಹಿಂಪುರ, ಗಣೇಶ ಚಿನ್ನಾಕಾರ, ರವೀಂದ್ರಕುಮಾರ ಭಂಟನಳ್ಳಿ, ಶರಣು ಹಾಗರಗುಂಡಗಿ, ಎಂ ಎನ್ ಸುಗಂಧಿ, ರೇವಯ್ಯಾ ಸ್ವಾಮಿ, ಕವಿತಾ ಕವಳೆ, ಸುನೀತಾ ಮಾಳಗೆ, ಚಂದ್ರಶೇಖರ ಮ್ಯಾಗೇರಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

3 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

12 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

12 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

13 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

15 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420