ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ ಸಾಹಿತಿ ಡಾ ಸ್ವಾಮಿರಾವ ಕುಲಕರ್ಣಿ ಹೇಳಿದರು.

ನಗರದ ಮಾತೋಶ್ರೀ ನೀಲಗಂಗಮ್ಮ ಗುರಪ್ಪ ಅಂದಾನಿ ಆರ್ಟ ಗ್ಯಾಲರಿಯಲ್ಲಿ 185ನೇ ವಿಶ್ವ ಛಾಯಾಚಿತ್ರ ದಿನಾಚರಣೆ ಅಂಗವಾಗಿ ಏರ್ಪಡಿದ್ದ ನಾರಾಯಣ ಎಂ. ಜೋಶಿ ಅವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನದಲ್ಲಿ ಗಮನ ಸೆಳೆದ ಜೋಶಿ ಅವರ ಸ್ಮಾರಕಗಳ ಛಾಯಾಚಿತ್ರ ಪ್ರದರ್ಶನಗಳನ್ನು ಅವರು ಪ್ರಶಂಶಿಸಿದರು.

ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭವಾನಿಸಿಂಗ ಎಂ.ಠಾಕೂರ ಛಾಯಾಚಿತ್ರಗಳ ಉಗಮ ವಿಕಾಸ ಸಮಕಾಲೀನ ಬೆಳವಣಿಗೆ ಪತ್ರಿಕೋಧ್ಯಮದಲ್ಲಿ ಅವರ ಮಹತ್ವ ವಿವರಿಸಿದರು. ವೇದಿಕೆ ಮೇಲೆ ಸುದ್ದಿಕಾಲ ಸಂಪಾದಕ ವಾಸುದೇವರಾವ ದೇಸಾಯಿ, ಛಾಯಾಚಿತ್ರಗ್ರಾಹಕ ನಾರಾಯಣÀ ಎಂ. ಜೋಶಿ ವೇದಿಕೆ ಮೇಲೆ ಇದ್ದರು.

ಸಿ.ಎಸ್. ಮಾಲಿಪಾಟೀಲ ಸ್ವಾಗತಿಸಿದರು. ರಂಜೀಷಾ ಕುಲಕರ್ಣಿ ಪ್ರಾರ್ಥಿಸಿ ನಿರೂಪಿಸಿದರು. ವೀರಶೆಟ್ಟಿ ಎಂ.ಪಾಟೀಲ ಬೀದರ ನಗರದ ಗುಲಾಂ ಮುÀಂತಕಾ ಫೋಟೋಗ್ರಾಫರ್ ಅವರ ಜೀವನಚರಿತ್ರೆ ಕುರಿತಾದ ಕವನ ವಿವರಿಸಿದರು.

ಮೋಹನ ಸೀತನೂರ, ರಮೇಶ ಜೋಶಿ ನಾರಾಯಣ ಕುಲಕರ್ಣಿ, ದೌಲತರಾಯ ದೇಸಾಯಿ, ಡಾ. ಸದಾಶಿವ ಜಿಡಗೇಕರ, ಜೀತೇಂದ್ರ ಕೊಥಳಿಕರ, ಎಂ. ಸಂಜೀವ, ವಿಠಲಕಟ್ಟಿ, ದೇಸಾಯಿ ಪರಿವಾರ, ಸಿದ್ದು ಮರಗೋಳ, ಶರಣು ಪಟ್ಟಣಶೆಟ್ಟಿ ಕೆ ಎಂ ಲೋಕಯ್ಯಾ, ಡಾ ಹಣಮಂತ ಮಂತಟ್ಟಿ, ಶೇಷರಾವ ಬಿರಾದಾರ, ಲಕ್ಷ್ಮೀಕಾಂತ ಮನೋಕರ ಮುಂತಾದವರು ಇದ್ದರು ಪ್ರದರ್ಶನ 19 ಆಗಸ್ಟ್ ರಿಂದ 21 ವರೆಗೆ ಮುಂಜಾನೆ 11 ರಿಂದ ಸಂಜೆ 6 ಗಂಟೆಯ ವರüಗೆ ತೆರೆದಿರುತ್ತದೆ. ಒಟ್ಟು 62 ಛಾಯಾಚಿತ್ರಗಳು ಪ್ರದರ್ಶಿಸಿದ್ದಾರೆ ಕಲ್ಯಾಣ ಕರ್ನಾಟಕದ ಸ್ಮಾರಕಗಳ ಛಾಯಾಚಿತ್ರಗಳನ್ನು ಆಸಕ್ತರು ಶಾಲಾ ಕಾಲೇಜು ವಿದ್ಯಾರ್ಥಿಗಳು ವೀಕ್ಷಿಸಬಹುದು ಎಂದು ನಾರಾಯಣ ಎಂ. ಜೋಶಿ ತಿಳಿಸಿದ್ದಾರೆ.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

3 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

12 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

13 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

13 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

15 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420