ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಎಸ್ಎಫ್ಐ ರಾಜ್ಯ ಸಮ್ಮೇಳನ

ಹೊಸಪೇಟೆ: ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಸೆಪ್ಟೆಂಬರ್ 17, 18, 19 ರಂದು ಚಿಕ್ಕಬಳ್ಳಾಪುರ ದಲ್ಲಿ ಎಸ್ಎಫ್ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕರ್ನಾಟಕ ರಾಜ್ಯ ಸಮ್ಮೇಳನ ನಡೆಯಲಿದ್ದು, ರಾಜ್ಯ ಸಮಿತಿಯಿಂದ ಸಮ್ಮೇಳನದ ಲಾಂಛನವನ್ನು ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ನಲ್ಲಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ರಾಜ್ಯಾದ್ಯಕ್ಷ ಅಮರೇಶ ಕಡಗದ್, ಭಾರತ ವಿದ್ಯಾರ್ಥಿ ಫೆಡರೇಷನ್ (SFI) ದೇಶದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದದ ಆಶಯಗಳನ್ನೊತ್ತು, ವಿದ್ಯಾರ್ಥಿಗಳನ್ನು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿಯಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆಯ ಉಳಿವಿಗಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಆಳುವ ಸರ್ಕಾರಗಳು ದೇಶದ ಮತ್ತು ರಾಜ್ಯ ಬಜೆಟ್ ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣವನ್ನು ಬಲಹೀನಗೊಳಿಸಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗೀ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್, ಪ್ರೋತ್ಸಾಹಧನ ದಂತಹ ಯೋಜನೆಗಳನ್ನು ಕೈಬಿಡಲಾಗುತ್ತಿದೆ. ಸರ್ಕಾರಿ ಶಾಲೆಯ ಮಕ್ಕಳಿಂದ ಹಣ ಸಂಗ್ರಹಣೆಗೆ ಮುಂದಾಗಿ ಖಾಸಗಿ ಶಾಲೆಗಳ ಪರವಾಗಿ ಯೋಜನೆಗಳನ್ನು, ಸಹಾಯಧನವನ್ನು ಬಿಡುಗಡೆಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ ಮಾತನಾಡಿ, ಬಡ,ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸಿಗಬೇಕಾದ ವಿದ್ಯಾರ್ಥಿ ವೇತನ, ಫೆಲೋಷಿಪ್ ಗಳನ್ನು ನಿಲ್ಲಿಸಲಾಗುತ್ತಿದೆ. ವೃತ್ತಿ ಶಿಕ್ಷಣದ ತರಬೇತಿಗಳ ಹೆಸರಿನಲ್ಲಿ ದುಬಾರಿ ಖಾಸಗೀ ಕೇಂದ್ರಗಳು ಹುಲುಸಾಗಿ ಬೆಳೆಯುತ್ತಿವೆ. ದುಬಾರಿ ಶಿಕ್ಷಣ ಹಾಗೂ ಮಾನಸಿಕ ಒತ್ತಡಗಳ ಪರಿಣಾಮ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ಈ ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಮತ್ತು ವಿದ್ಯಾರ್ಥಿಗಳ ಸೌಹಾರ್ದತೆಗಾಗಿ ಆಗ್ರಹಿಸಿ ಚಿಕ್ಕಬಳ್ಳಾಪುರ ನಗರದಲ್ಲಿ 17,18,19 ಸೆಪ್ಟೆಂಬರ್ 2024 ರಂದು ಮೂರು ದಿನಗಳ ಕಾಲ ನಡೆಯುವ ಎಸ್.ಎಫ್.ಐ. 16 ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ಮಾಡಿ ಸಾರ್ವತ್ರಿಕ ಶಿಕ್ಷಣದ ಪರವಾಗಿ ಶೈಕ್ಷಣಿಕ ನಿರ್ಣಯಗಳನ್ನು ಕೈಗೊಳ್ಳಲಾಗುವುದು.

ವಿದ್ಯಾರ್ಥಿ ಚಳುವಳಿಗೆ ಸಲಹೆ, ಸಹಕಾರ, ಪ್ರೋತ್ಸಾಹ ನೀಡುತ್ತಾ ಬಂದಿರುವ ವಿದ್ಯಾರ್ಥಿ ಸ್ನೇಹಿತರು, ಶಿಕ್ಷಕ-ಉಪನ್ಯಾಸಕರು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಪ್ರಗತಿಪರರು, ಬುದ್ದಿಜೀವಿಗಳು, ಸಮಾನತೆ-ಸೌಹಾರ್ದತೆ ಬಯಸುವ ಎಲ್ಲಾ ಜೀವಪರ ಚಳುವಳಿಗಾರರು ಈ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರವನ್ನು ನೀಡಬೇಕೆಂದು 16 ನೇ ರಾಜ್ಯ ಸಮಿತಿ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಎಸ್ಎಫ್ಐ ರಾಜ್ಯ ಪದಾಧಿಕಾರಿಗಳಾದ ರಮೇಶ ವೀರಾಪೂರು, ಗಣೇಶ ರಾಠೋಡ್, ದೊಡ್ಡ ಬಸವರಾಜ ಗುಳೇದಾಳ, ಗ್ಯಾನೇಶ ಕಡಗದ, ಶಿವಪ್ಪ ಕೋಲಾರ, ಸೋಮಶೇಖರ್, ರಾಜ್ಯ ಸಮಿತಿ ಸದಸ್ಯರಾದ ಸುಜಾತಾ, ಅನುಶಾ, ಶಿವಾರಡ್ಡಿ, ಶಿವಮಾರ್ ಈಚನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

6 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

15 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

16 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

16 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

18 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420