ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಕಲಬುರಗಿ: ಛಾಯಾಗ್ರಾಹಕರು ಇಂದಿನ ಸಮಾಜದ ಪ್ರತಿಬಿಂಬರಾಗಿ ಕಾಣುತ್ತಾರೆ. ಎಲ್ಲಾ ಛಾಯಾಗ್ರಾಹಕರು ಒಗ್ಗಟ್ಟು ಇಟ್ಟುಕೊಂಡು ಸಂಘಟಿತರಾದರೆ ಸಂಘಕ್ಕೆ ಇನ್ನೂ ಹೆಚ್ಚಿನ ಬಲ ಬರುತ್ತದೆ. ನಿಯಮನೂಸಾರ ಸಾಧ್ಯತ್ತೆ ಇದಲ್ಲಿ ಸಂಘಟಕ್ಕೆ ಕುಡಾ ದಿಂದ ಒಂದು ನಿವೇಶನ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂಖಾನ್ ಭರವಸೆ ನೀಡಿದರು.

ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಸೋಮವಾರ ಏರ್ಪಡಿಸಿದ ವಿಶ್ವ ಛಾಯಾಗ್ರಹಣ ದಿನಾಚರಣೆ ನಿಮಿತ್ತ ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸಮಾಜದಲ್ಲಿ ನಮ್ಮ ಮಹತ್ವದ ಸನ್ನಿವೇಶಗಳು ಮತ್ತು ನಮ್ಮ ಜೀವನದಲ್ಲಿನ ಮರೆಯಲಾಗದ ಸಮತಸದ ಕ್ಷಣಗಳನ್ನು ತಮ್ಮ ಛಾಯಾಚಿತ್ರಗಳ ಮೂಲಕ ಹಿಡಿದಿಡುವುದು ಛಾಯಾಗ್ರಾಹಕ ವೃತ್ತಿಯ ಬಹಳ ವಿಶೇಷತೆ ಆಗಿದೆ. ಇತ್ತೀಚಿನ ದಿನಮಾನಗಳಲ್ಲಿ ಛಾಯಾಗ್ರಾಹಣ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಹೆಚ್ಚಾಗಿದೆ. ಇಂಥ ಸಂದರ್ಭದಲ್ಲಿ ಛಾಯಾಗ್ರಾಹಕ ವೃತ್ತಿಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಬರುತ್ತಿರುವ ಛಾಯಾಗ್ರಾಹಕರ ಸೇವೆ ಈ ಸಮಾಜದಲ್ಲಿ ಅಮೋಘವಾಗಿದೆ ಎಂದರು.

ಮೇಯರ್ ಯಲ್ಲಪ್ಪ ನಾಯ್ಕೋಡಿ ಮಾತನಾಡಿ, ಮಹಾನಗರ ಪಾಲಿಕೆಯಿಂದ ಒದಗಿಸಲಾದ ಸಕಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಸಂಘದ ಅಧ್ಯಕ್ಷ ಬಸವರಾಜ ತೋಟದ ಮಾತನಾಡಿ, ಇಂದು ಎಲ್ಲರ ಕೈಯಲ್ಲಿ ಸ್ಮಾರ್ಟ್‍ಫೋನ್ ಇರುವುದರಿಂದ ಛಾಯಾಗ್ರಾಹಕರಾದ ನಾವುಗಳು ನಮ್ಮ ವೃತ್ತಿಯಲ್ಲಿ ತೀವೃ ಸ್ಪರ್ಧೆ ನಡೆಸಬೇಕಾಗಿದೆ. ಹಾಗಾಗಿ ಛಾಯಾಗ್ರಾಹಕ ವೃತ್ತಿ ಘನತೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟಿತರಾಗುವ ಉದ್ದೇಶದಿಂದ ಸಂಘ ಸ್ಥಾಪಿಸಿದ್ದು, ಆ ಮೂಲಕ ಹಿರಿಯ ಛಾಯಾಗ್ರಾಹಕರಿಗೆ ವಿಶೇಷ ಗೌರವ ಕೊಡುವ ಮತ್ತು ಹೊಸಬರಿಗೆ ಅವಕಾಶ ಕಲ್ಪಿಸಿಕೊಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಪಾಲಿಕೆ ಸದಸ್ಯ ನಿಂಗಮ್ಮ ಕಟ್ಟಿಮನಿ, ಪವನಸಿಂಗ್ ಠಾಕೂರ, ವಿಜಯಕುಮಾರ ರಾಠೋಡ, ಸಂಜೀವಕುಮಾರ ಗಾರಂಪಳ್ಳಿ, ಮಲ್ಲಿಕಾರ್ಜುನ ತುಪ್ಪದಮಠ, ಸಿದ್ರಾಮಪ್ಪ ಕಬಾಡೆ, ಪ್ರಕಾಶ ಜಂಗಲೆ, ಈರಣ್ಣಾ ಸಿ ಕಿರಣಗಿ, ರಮೇಶ ಲಾಲಬುಂದ್ರೆ, ಗುರುಪಾದಯ್ಯ ಮಠ, ಪ್ರಕಾಶ ಎಂ ಶೇರಖಾನೆ, ಅರುಣಕುಮಾರ ತೆಗನೂರ, ಶಿವಕುಮಾರ ಪಾಟೀಲ, ಶರಣು ಕಟ್ಟಿಮನಿ, ಮಹ್ಮದ್ ಅಫಸರ್ ಪಟೇಲ್, ರಾಚಯ್ಯ ಪತ್ರೆ ವೇದಿಕೆ ಮೇಲಿದ್ದರು.

ಹಣಮಂತರಾಯ ಎಸ್ ಹೂವಿನಹಳ್ಳಿ, ಎಂ ಡಿ ಅದಮ್,  ಶ್ರೀನಿವಾಸ ಚಾಂದಿಮನಿ, ರವೀಂದ್ರ ಪಾಂಚಾಳ, ಶರಬಣ್ಣ ಪಟ್ಟೇದಾರ, ಸಾಹೇಬಗೌಡ ಮೇಟಿ, ಬಸವರಾಜ ಕಗ್ಗೋಡು, ಶಿವಕುಮಾರ ಧನ್ನಿ ಅವರಿಗೆ ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅನೀಲಕುಮಾರ ಹುಮನಾಬಾದ, ವಿದ್ಯಾಪ್ರಕಾಶ ಗುಮ್ಮಟ, ಲಕ್ಷ್ಮೀಕಾಮತ ಕೋಗನೂರ, ಜೀತೇಂದ್ರ ಸಿಂಗ್, ಶ್ರೀಕಾಂತ ಅಕ್ಕಾ, ಪ್ರವೀಣ ಮುಚಳಂಬಿ ಅವರನ್ನು ಸಹ ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಯಿತು. ಮಲ್ಲಿಕಾಜುನ ಮರತೂರ ಕಾರ್ಯಕ್ರಮ ನಿರೂಪಿಸಿದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

6 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

15 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

16 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

16 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

19 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420