ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

0
18

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಮಾತನಾಡಿದರು.

ನಗರದ ತಾಲೂಕ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸುರಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,ಕ್ರೀಡೆಯಲ್ಲಿ ಸಾಧನೆ ಮಾಡಿದವರನ್ನು ಜಗತ್ತೆ ಗುರುತಿಸುತ್ತದೆ,ಅಲ್ಲದೆ ಕ್ರೀಡೆಯಿಂದ ದೈಹಿಕ,ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಕ್ರೀಡೆ ತುಂಬಾ ಅವಶ್ಯಕವಾಗಿದೆ ಎಂದರು.

Contact Your\'s Advertisement; 9902492681

ಕ್ರೀಡಾಕೂಟ ಉದ್ಘಾಟಿಸಿದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಂಶುಪಾಲ ಆನಂದಕುಮಾರ ಜೋಶಿ ಮಾತನಾಡಿ,ವಿದ್ಯಾರ್ಥಿಗಳಿಗೆ ಕ್ರೀಡೆಯೆನ್ನುವುದು ತುಂಬಾ ಅಗತ್ಯವಾಗಿದೆ,ಇದರಿಂದ ಮಾನಸಿಕ ಬೌಧ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು,ಇಂದು ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟು ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಮೆರೆಯಬೇಕು,ಯಾವುದೇ ವಿವಾದಗಳಿಗೆ ಆಸ್ಪದ ನೀಡದೆ ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾಂಶುಪಾಲ ಶ್ರೀಕಾಂತ ಜಿ.ಕೆ,ಕ್ಷೇತ್ರ ಸಮನ್ವಯಾಧಿಕಾರಿ ಪಂಡೀತ ನಿಂಬೂರ,ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಮನಿ,ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಪ್ಪ ದರಬಾರಿ,ಎಎಸ್‍ಐ ಮನೋಹರ ರಾಠೋಡ,ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಖಾದರ್ ಪಟೇಲ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದಪ್ಪ ಟಣಕೆದಾರ,ಸಿಆರ್‍ಪಿ ಪ್ರಶಾಂತ,ಶಿವಕುಮಾರ ಕಮತಗಿ,ಶಿವಕುಮಾರ ಹಿರೇಮಠ,ಮಲ್ಲಿಕಾರ್ಜುನ ದೊಡ್ಮನಿ, ಇಸಿಓ ಶರಣಯ್ಯ,ಉಪನ್ಯಾಸಕ ರಾಮಣಗೌಡ ಸುಬೇದಾರ ಇದ್ದರು.ದೈಹಿಕ ಶಿಕ್ಷಕ ಲಕ್ಷ್ಮಣ ಬಿರಾದಾರ ನಿರೂಪಿಸಿದರು.ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣಗೌಡ ಮಾಲಿ ಪಾಟೀಲ್ ಸ್ವಾಗತಿಸಿದರು,ಕ್ರೀಡಾಕೂಟ ಪ್ರತಿಜ್ಞೆಯನ್ನು ಭೀಮರಾಯ ಗೋನಾಲ ಬೋಧಿಸಿದರು ಹಾಗೂ ದೈಹಿಕ ಶಿಕ್ಷಕ ಸುಭಾಷ್ ಅಗ್ನಿ ವಂದಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೈಹಿಕ ಶಿಕ್ಷಕರು ಸರಕಾರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಸರಕಾರಕ್ಕೆ ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here