ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

0
97

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು.

ಅವರು ಬುಧವಾರ ನಗರದ ಬಿವಿಎಮ್ ಶಾಲಾ ಮೈದಾನದಲ್ಲಿ ಆಯೋಜಿಸಲಾದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟದ ಕ್ರೀಡಾಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

Contact Your\'s Advertisement; 9902492681

ಕ್ರೀಡಾಕೂಟ ಆಯೋಜಿಸಿರುವುದರಿಂದ ಮಕ್ಕಳಲ್ಲಿ ಉತ್ಸಾಹ ಕಂಡುಬರುತ್ತಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ. ಸೋಲು ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಮಕ್ಕಳು ಸ್ನೇಹಪೂರ್ವಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ ಅಗತ್ಯ. ಉತ್ತಮ ಆರೋಗ್ಯವಿರುವ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ. ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಿ. ತೀರ್ಪುಗಾರರು ನೀಡುವ ತೀರ್ಪು ಗೌರವಿಸಿ. ಎರಡು ದಿನ ಸಂಭ್ರಮದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧಕರಾಗಿ ಶಾಲೆಗಳಿಗೆ ತೆರಳಿ’ ಎಂದು ಕಿವಿಮಾತು ಹೇಳಿದರು.

ಬಿಆರ್‍ಸಿ ಮಲ್ಲಿಕಾರ್ಜುನ ಸೇಡಂ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೋತವರು ಗೆದ್ದವರನ್ನು ಅಭಿನಂದಿಸಿ, ಗೆದ್ದವರು ಸೋತವರನ್ನು ಆಲಂಗಿಸಿ ಕ್ರೀಡಾ ಮನೋಭಾವದಿಂದ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ, ತೀರ್ಪುಗಾರರು ನೀಡುವ ತೀರ್ಪು ಗೌರವಿಸಿ. ಅಲ್ಲದೇ ತೀರ್ಪುಗಾರರು ಪಾರದರ್ಶಕತೆಯನ್ನು ಮೈಗೂಡಿಸಿಕೊಳ್ಳಿ.ಎಲ್ಲಾ ಶಾಲೆಯ ಮಕ್ಕಳನ್ನು ಸಮಾನವಾಗಿ ಕಾಣಿ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪೂಜೆ ಚಾಲನೆ ನೀಡಿದರು. ಸರಕಾರಿ ನೌಕರರ ಸಂಘದ ಹಂಗಾಮಿ ಅಧ್ಯಕ್ಷ ಬಸವರಾಜ ಬಳೊಂಡಗಿ, ನಿಕಟ ಪೂರ್ವ ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ದೇವೆಂದ್ರ ರೆಡ್ಡಿ, ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಈರಣ್ಣ ಕೆಂಭಾವಿ, ಪ್ರಾ.ಶಾ.ಶಿ.ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಕರಣಿಕ್, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಚಿದಾನಂದ ಕುಡ್ಡನ್, ಪ್ರಾ.ಶಾ.ಶಿ.ಸಂಘದ ಕಾರ್ಯದರ್ಶಿ ಸಂತೋಷ ಸಲಗರ್, ಬಡ್ತಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ ಚಿನ್ನೂರ್, ಅನುದಾನಿತ ಶಿಕ್ಷಕ ಮತ್ತು ಶಿಕ್ಷಕೇತರ ಸಂಘದ ತಾಲೂಕಾಧ್ಯಕ್ಷ ಪ್ರವೀಣ ಹೆರೂರ್, ಗ್ರೇಡ್-1 ದೈ.ಶಿ.ಸಂ ತಾಲೂಕಾಧ್ಯಕ್ಷೆ ವಿಜಯಲಕ್ಷ್ಮಿ, ಅನುದಾನಿತ ದೈ.ಶಿ.ಸಂ.ರಾ.ಉಪಾಧ್ಯಕ್ಷ ಚನ್ನಬಸಪ್ಪ ಕೊಲ್ಲೂರ್,ಕ್ರೀಡಾಕೂಟದ ಸಂಯೋಜಕರಾದ ಬನ್ನಪ್ಪ ಸೈದಾಪೂರ,ಬಿವಿಎಮ್ ಶಾಲೆಯ ಮುಖ್ಯಗುರು ಗಂಗಾಧರ್, ಎಎಸ್‍ಐ ಶ್ರೀಕಾಂತ ನಾಯಕ ಹಾಗೂ ಎಲ್ಲಾ ಶಾಲೆಯ ದೈಹಿಕ ಶಿಕ್ಷಕರು ಇದ್ದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದ ಪಾರಿತೋಷಕ ದಾನಿಗಳಾದ ರಾಣಿ ಹಿರೇಮಠ ಹಾಗೂ ಗುರಲಿಂಗಯ್ಯ ಹಿರೇಮಠ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಅಲ್ಲದೇ ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಈರಣ್ಣ ಕೆಂಭಾವಿ ಅವರು ವರ್ಗಾವಣೆಗೊಂಡಿರುವುದರಿಂದ ಅವರನ್ನು ದೈಹಿಕ ಶಿಕ್ಷಕರ ಸಂಘದಿಂದ ಸನ್ಮಾನಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here