ಸೆ. 23ಕ್ಕೆ ಕಲಬುರಗಿಯಲ್ಲಿ ಮುಖ್ಯಮಂತ್ರಿಗಳ ಜನಸ್ಪಂದನಾ ಸಭೆ: ಬಾಕಿ ಕಡತ ತ್ವರಿತ ವಿಲೇವಾರಿಗೆ ಡಿ.ಸಿ. ಸೂಚನೆ

ಕಲಬುರಗಿ; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ “ಜನಸ್ಪಂದನಾ” ಸಭೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಬಾಕಿ ಇರುವ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ತಮ್ಮ ಕಚೇರಿಯ ಅಧೀನ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯ ತರನ್ನುಮ್ ಖಡಕ್ ಸೂಚನೆ ನೀಡಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಅಧಿಕಾರಿ-ಸಿಬ್ಬಂದಿಗಳ ಸಭೆ ನಡೆಸಿದ ಅವರು ಮುಖ್ಯಮಂತ್ರಿಗಳ ಜನಸ್ಪಂದನಾ ಸಭೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ಕಾರ್ಯಕ್ರಮ ಯಶಸ್ಸಿಗೆ ಕಚೇರಿಯ ಎಲ್ಲಾ ಅಧಿಕಾರಿ-ಸಿಬ್ಬಂದಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ಯಾವುದೇ ಲೋಪವಿಲ್ಲದೆ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಬೇಕೆಂದರು.

ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುವ ವಿವಿಧ ಸೇವೆಗಳನ್ನು ಕಾಲಮಿತಿಯಲ್ಲಿ ನೀಡುವಂತೆ ಸೂಚಿಸಿದ ಅವರು ಸಾರ್ವಜನಿಕರು ಅನಗತ್ಯ ಕಚೇರಿಗೆ ಓಡಾಡುವುದನ್ನು ತಪ್ಪಿಸಬೇಕು. ಸಾರ್ವಜನಿಕರ ಕುಂದುಕೊರತೆ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಬೇಕೆಂದ ಅವರು, ಲೋಕಾಯುಕ್ತ ಸಂಸ್ಥೆಯಿಂದ ಬರುವ ಪತ್ರಗಳಿಗೆ ಪ್ರಥಮಾದ್ಯತೆ ಮೇಲೆ ಈ ಕಚೇರಿಯಿಂದ ವರದಿ ನೀಡಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾ ತಹಶೀಲ್ದಾರ ಪಂಪಯ್ಯ, ಸಾಮಾಜಿಕ ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಶಿವಶರಣಪ್ಪ ಧನ್ನಿ ಸೇರಿದಂತೆ ಸಿಬ್ಬಂದಿಗಳು ಇದ್ದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

5 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

5 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

5 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

5 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

6 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420