ಸೇಡಂನಲ್ಲಿ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಉದ್ಘಾಟನೆ

ಕಲಬುರಗಿ: ಜಿಲ್ಲೆಯ ಹೊಸ ತಾಲೂಕಿನಲ್ಲಿ ನೂತನ‌ ನ್ಯಾಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರವು ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹೇಳಿದರು

ಶನಿವಾರ ನ್ಯಾಯಾಂಗ ಇಲಾಖೆ, ಲೊಕೋಪಯೋಗಿ ಇಲಾಖೆ ಹಾಗೂ ತಾಲೂಕಾ ನ್ಯಾಯಾವಾದಿಗಳ‌ ಸಂಘದ ಸಂಯುಕ್ತಾಶ್ರಯದಲ್ಲಿ ಸೇಡಂ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ ನೂತನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ಗಟ್ಟಿಯಾಗಿ ನಿಲ್ಲಬೇಕಾದರೆ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಪಾತ್ರ ಹೆಚ್ಚಿದೆ. ಈ ಮೂರು ಅಂಗಗಳು ನಿಸ್ವಾರ್ಥವಾಗಿ ಕಾರ್ಯನಿರ್ವಹಿಸಿದಲ್ಲಿ ಉತ್ತಮ ಸಮಾಜ ಕಟ್ಟಲು ಮತ್ತು ಜನರು ಸ್ವಾಭಿಮಾನದ ಬದುಕು ಸಾಗಿಸಲು ಸಾಧ್ಯವಾಗಿದ್ದು, ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಬೇಕಿದೆ ಎಂದರು.

ಮನೆ ಬಾಗಿಲಿಗೆ ನ್ಯಾಯ: ಕರ್ನಾಟಕ ರಾಜ್ಯ ಉಚ್ಛ‌ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ಕೆ.ನಟರಾಜನ್ ಮಾತನಾಡಿ, ಜನರ ಮನೆ ಬಾಗಿಲಿಗೆ ನ್ಯಾಯ ಪರಿಕಲ್ಪನೆಯಡಿ ಇಂದಿಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ನ್ಯಾಯಾಲಯ ನಿರ್ಮಿಸಿ, ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ನ್ಯಾಯ ಒದಗಿಸುವ ಕೆಲಸ ನ್ಯಾಯವಾದಿಗಳು ಮಾಡಬೇಕು ಎಂದರು.

ಸೇಡಂ 4ನೇ ಹೆಚ್ಚುವರಿ ನ್ಯಾಯಾಲಯದಲ್ಲಿ 1,058 ಕೇಸ್ ಇದ್ದು, ತ್ವರಿತ ವಿಲೇವಾರಿಗೆ ನೂತನ ನ್ಯಾಯಾಲಯ ಸಹಾಯವಾಗಲಿದೆ. ಸೇಡಂ, ಚಿಂಚೋಳಿ, ಚಿತ್ತಾಪುರ ಜನರು ನ್ಯಾಯಕ್ಕಾಗಿ ಕಲಬುರಗಿಗೆ ಬರುವುದು ತಪ್ಪಿದ್ದು, ಇದು ಕಕ್ಷಿದಾರರಿಗೆ ತುಂಬಾ ನೆರವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದ ಅವರು, ನ್ಯಾಯಾಲಯ ಅಂದರೆ ನೆನಪಾಗುವುದೆ ವಿಳಂಬ ಪ್ರಕ್ರಿಯೆ. ಒಮ್ಮೆ ಪ್ರಕರಣ ದಾಖಲಾದರೆ ವರ್ಷಗಟ್ಟಲೆ ನಡೆಯುತ್ತದೆ. ಕಕ್ಷಿದಾರರಿಗೆ ತ್ವರಿತ ನ್ಯಾಯ ಒದಗಿಸುವ ಮೂಲಕ ಇದನ್ನು ಹೋಗಲಾಡಿಸುವ ಜವಾಬ್ದಾರಿ ನ್ಯಾಯಾವಾದಿಗಳ ಮೇಲಿದೆ ಎಂದರು.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಅಶೋಕ ಎಸ್.‌ಕಿಣಗಿ ಅವರು ಕಾರ್ಯಕ್ರಮದ ತಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸದ ರಾಧಾಕೃಷ್ಞ ದೊಡ್ಡಮನಿ ಸಹ ಮಾತನಾಡಿದರು.

ಕಾರ್ಯಕ್ರಮದಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕರಣ ಗುಜ್ಜರ್, ಹಿರಿಯ ಸಿವಿಲ್‌ ನ್ಯಾಯಾಧೀಶ ಸಾಗರ ಗುರುಗೌಡ ಪಾಟೀಲ, ಸಿವಿಲ್ ನ್ಯಾಯಾಧೀಶೆ ಲಲಿತಾ ಕುದರಿಮತಿ, ತಾಲೂಕಾ ನ್ಯಾಯಾವಾದಿಗಳ‌ ಸಂಘದ ಪ್ರಧಾನ ಕಾರ್ಯದರ್ಶಿ ವಸಂತಕುಮಾರ ಪೂಜಾರಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಶೀಲ್ದಾರ ಶ್ರೇಯಾಂಕಾ ಧನಶ್ರೀ, ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ದಶ್ವಂತ ಗಾಜರೆ ಇದ್ದರು. ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ನಾಗಶ್ರೀ ಅವರು ಸ್ವಾಗತಿಸಿದರು. ತಾಲೂಕಾ ನ್ಯಾಯಾವಾದಿಗಳ‌ ಸಂಘದ ಅಧ್ಯಕ್ಷ ಮಲ್ಲಣಗೌಡ ಎಸ್. ಬೆನೆಕನಳ್ಳಿ ವಂದಿಸಿದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

8 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

9 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

9 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

9 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

9 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420